ಕೇಂದ್ರ ಸರ್ಕಾರ ಸ್ನಾತಕೋತ್ತರ ಆಯುರ್ವೇದ ಶಿಕ್ಷಣ ತಿದ್ದುಪಡಿ ಅಧಿಸೂಚನೆ ಹೊರಡಿಸಿ, ಕೆಲವು ಶಸ್ತ್ರ ಚಿಕಿತ್ಸೆ ಕೈಗೊಳ್ಳಲು ಆಯುಷ್ ವೈದ್ಯರಿಗೆ ಅವಕಾಶ ಕಲ್ಪಿಸಿದೆ. ಆದರೆ, ಆಯುರ್ವೇದಲ್ಲಿ ಹೇಗೆ ಶಸ್ತ್ರ ಚಿಕಿತ್ಸೆ ಮಾಡಲು ಸಾಧ್ಯ? ಇಲ್ಲಿ ಅರಿವಳಿಕೆ ಮದ್ದುಗಳು ಇವೆಯೇ ಎಂದು ಅಲೋಪತಿ ವೈದ್ಯರು ಪ್ರಶ್ನಿಸಿದ್ದಾರೆ. ಭಾರತೀಯ ವೈದ್ಯಕೀಯ ಸಂಘದ ಕರೆಯ ಮೇರೆಗೆ ಮುಷ್ಕರ ಬೆಂಬಲಿಸಿದ್ದಾರೆ.