ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖಾಸಗಿ ವೈದ್ಯರ ಮುಷ್ಕರ; ರೋಗಿಗಳ ಪರದಾಟ

Last Updated 11 ಡಿಸೆಂಬರ್ 2020, 12:15 IST
ಅಕ್ಷರ ಗಾತ್ರ

ಶಿವಮೊಗ್ಗ: ಆಯುರ್ವೇದ ವೈದ್ಯರಿಗೆ ಶಸ್ತ್ರಚಿಕಿತ್ಸೆ ನಡೆಸಲು ಅವಕಾಶ ಕಲ್ಪಿಸಿರುವ ಕೇಂದ್ರದ ಸರ್ಕಾರದ ನಡೆ ಖಂಡಿಸಿ ಜಿಲ್ಲೆಯಲ್ಲೂ ಖಾಸಗಿ ಆಸ್ಪತ್ರೆಗಳು, ಕ್ಲಿನಿಕ್‌ಗಳು ಶುಕ್ರವಾರ ಹೊರ ರೋಗಿಗಳ ವಿಭಾಗ ಬಂದ್‌ ಮಾಡಿ ಪ್ರತಿಭಟನೆ ದಾಖಲಿಸಿದವು.

ಕೇಂದ್ರ ಸರ್ಕಾರ ಸ್ನಾತಕೋತ್ತರ ಆಯುರ್ವೇದ ಶಿಕ್ಷಣ ತಿದ್ದುಪಡಿ ಅಧಿಸೂಚನೆ ಹೊರಡಿಸಿ, ಕೆಲವು ಶಸ್ತ್ರ ಚಿಕಿತ್ಸೆ ಕೈಗೊಳ್ಳಲು ಆಯುಷ್‌ ವೈದ್ಯರಿಗೆ ಅವಕಾಶ ಕಲ್ಪಿಸಿದೆ. ಆದರೆ, ಆಯುರ್ವೇದಲ್ಲಿ ಹೇಗೆ ಶಸ್ತ್ರ ಚಿಕಿತ್ಸೆ ಮಾಡಲು ಸಾಧ್ಯ? ಇಲ್ಲಿ ಅರಿವಳಿಕೆ ಮದ್ದುಗಳು ಇವೆಯೇ ಎಂದು ಅಲೋಪತಿ ವೈದ್ಯರು ಪ್ರಶ್ನಿಸಿದ್ದಾರೆ. ಭಾರತೀಯ ವೈದ್ಯಕೀಯ ಸಂಘದ ಕರೆಯ ಮೇರೆಗೆ ಮುಷ್ಕರ ಬೆಂಬಲಿಸಿದ್ದಾರೆ.

ಜಿಲ್ಲೆಯ ಎಲ್ಲ ಖಾಸಗಿ ಆಸ್ಪತ್ರೆಗಳಲ್ಲಿ ಸಂಜೆ 6ರವರೆಗೆ ಹೊರರೋಗಿಗಳ ಸೇವೆ ಸ್ಥಗಿತಗೊಳಿಸಲಾಗಿತ್ತು.ಖಾಸಗಿ ಆಸ್ಪತ್ರೆಗಳ ಈ ನಿರ್ಧಾರದಿಂದ ಆಸ್ಪತ್ರೆಗೆ ಬಂದಿದ್ದ ರೋಗಿಗಗಳು ಪರದಾಡಿದರು. ಖಾಸಗಿ ಆಸ್ಪತ್ರೆಗಳ ಮುಷ್ಕರದ ಪರಿಣಾಮ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳು ಚಿಕಿತ್ಸೆ ಪಡೆದರು. ಜನರ ಆರೋಗ್ಯ ಸೇವೆಗೆ ಸಮಸ್ಯೆಯಾಗದಂತೆ ರಜೆ ಪಡೆದ ವೈದ್ಯರನ್ನು ಮರಳಿ ಕರೆಸಲಾಗಿತ್ತು. ಹೆಚ್ಚುವರಿ ವೈದ್ಯರನ್ನು ಬಳಸಿಕೊಳ್ಳಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT