<p>ಶಿವಮೊಗ್ಗ: ನಗರದ ಅಶ್ವತ್ಥ ನಗರದ ನಿವಾಸಿ, ಸ್ತ್ರೀರೋಗ ತಜ್ಞೆ ಡಾ.ಜಯಶ್ರೀ ಹೊಮ್ಮರಡಿ (55) ಮತ್ತು ಅವ ಪುತ್ರ ಆಕಾಶ್ ಹೊಮ್ಮರಡಿ (34) ಶುಕ್ರವಾರ ಮನೆಯಲ್ಲಿ ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. </p>.<p>ದಾವಣಗೆರೆ ಜಿಲ್ಲೆ ನ್ಯಾಮತಿಯ ಡಾ.ನಾಗರಾಜ ಹೊಮ್ಮರಡಿ ಕುಟುಂಬ ನಗರದಲ್ಲಿ ಆಸ್ಪತ್ರೆ ತೆರೆದಿತ್ತು. ಮಕ್ಕಳತಜ್ಞರಾಗಿದ್ದ ಡಾ.ನಾಗರಾಜ 10 ವರ್ಷದ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಪುತ್ರ ಆಕಾಶ್ ಅವರ ಪತ್ನಿ ನವ್ಯಶ್ರೀ 3 ವರ್ಷದ ಹಿಂದೆ ಅದೇ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ.</p>.<p>ಡಾ.ಜಯಶ್ರೀ ಮನೆಯ ನೆಲ ಮಹಡಿಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡಿದ್ದು, ಆಕಾಶ್ ಅವರ ಶವ ಮೊದಲಮಹಡಿಯ ಕೊಠಡಿಯಲ್ಲಿ ಪತ್ತೆಯಾಗಿದೆ. ಆಕಾಶ್ ಅವರಿಗೆ ಮೇ ತಿಂಗಳಲ್ಲಿ ಮರು ಮದುವೆ ಆಗಿತ್ತು. ಅವರ ಪತ್ನಿ ಮತ್ತೊಂದು ಕೊಠಡಿಯಲ್ಲಿ ಇದ್ದರು ಎಂದು ತಿಳಿದುಬಂದಿದೆ.</p>.<p>‘ಸೊಸೆ ನವ್ಯಶ್ರೀ ಸಾವಿನಿಂದ ಕುಟುಂಬ ಬೇಸರಕ್ಕೆ ಒಳಗಾಗಿತ್ತು’ ಎಂದು ಸ್ಥಳದಲ್ಲಿ ದೊರೆತ ಡೆತ್ನೋಟ್ನಿಂದ ಗೊತ್ತಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ. ಎಎಸ್ಪಿ ಕಾರಿಯಪ್ಪ ಸ್ಥಳಕ್ಕೆ ಭೇಟಿ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿವಮೊಗ್ಗ: ನಗರದ ಅಶ್ವತ್ಥ ನಗರದ ನಿವಾಸಿ, ಸ್ತ್ರೀರೋಗ ತಜ್ಞೆ ಡಾ.ಜಯಶ್ರೀ ಹೊಮ್ಮರಡಿ (55) ಮತ್ತು ಅವ ಪುತ್ರ ಆಕಾಶ್ ಹೊಮ್ಮರಡಿ (34) ಶುಕ್ರವಾರ ಮನೆಯಲ್ಲಿ ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. </p>.<p>ದಾವಣಗೆರೆ ಜಿಲ್ಲೆ ನ್ಯಾಮತಿಯ ಡಾ.ನಾಗರಾಜ ಹೊಮ್ಮರಡಿ ಕುಟುಂಬ ನಗರದಲ್ಲಿ ಆಸ್ಪತ್ರೆ ತೆರೆದಿತ್ತು. ಮಕ್ಕಳತಜ್ಞರಾಗಿದ್ದ ಡಾ.ನಾಗರಾಜ 10 ವರ್ಷದ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಪುತ್ರ ಆಕಾಶ್ ಅವರ ಪತ್ನಿ ನವ್ಯಶ್ರೀ 3 ವರ್ಷದ ಹಿಂದೆ ಅದೇ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ.</p>.<p>ಡಾ.ಜಯಶ್ರೀ ಮನೆಯ ನೆಲ ಮಹಡಿಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡಿದ್ದು, ಆಕಾಶ್ ಅವರ ಶವ ಮೊದಲಮಹಡಿಯ ಕೊಠಡಿಯಲ್ಲಿ ಪತ್ತೆಯಾಗಿದೆ. ಆಕಾಶ್ ಅವರಿಗೆ ಮೇ ತಿಂಗಳಲ್ಲಿ ಮರು ಮದುವೆ ಆಗಿತ್ತು. ಅವರ ಪತ್ನಿ ಮತ್ತೊಂದು ಕೊಠಡಿಯಲ್ಲಿ ಇದ್ದರು ಎಂದು ತಿಳಿದುಬಂದಿದೆ.</p>.<p>‘ಸೊಸೆ ನವ್ಯಶ್ರೀ ಸಾವಿನಿಂದ ಕುಟುಂಬ ಬೇಸರಕ್ಕೆ ಒಳಗಾಗಿತ್ತು’ ಎಂದು ಸ್ಥಳದಲ್ಲಿ ದೊರೆತ ಡೆತ್ನೋಟ್ನಿಂದ ಗೊತ್ತಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ. ಎಎಸ್ಪಿ ಕಾರಿಯಪ್ಪ ಸ್ಥಳಕ್ಕೆ ಭೇಟಿ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>