ಶಿವಮೊಗ್ಗ ಜಿಲ್ಲೆಯಲ್ಲಿ ವಿವಿಧ ವಸತಿ ಯೋಜನೆಗಳಡಿ ನಿರ್ಮಾಣವಾಗುತ್ತಿರುವ ಮನೆಗಳ ಕಾಮಗಾರಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸ್ಥಗಿತಗೊಂಡಿವೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಡಿ. ಮೇಘರಾಜ್ ಆರೋಪಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಆಶ್ರಯ ಬಸವ ಪ್ರಧಾನಮಂತ್ರಿ ಆವಾಸ್ ದೇವರಾಜ ಅರಸು ಬಿ.ಆರ್. ಅಂಬೇಡ್ಕರ್ ವಾಜಪೇಯಿ ವಸತಿ ಯೋಜನೆಗಳ ಅಡಿ ಜಿಲ್ಲೆಯಲ್ಲಿ 15 ಸಾವಿರಕ್ಕೂ ಹೆಚ್ಚು ಮನೆಗಳು ನಿರ್ಮಾಣ ಆಗುತ್ತಿವೆ. ಬಿಜೆಪಿ ಸರ್ಕಾರ ಇದ್ದಾಗ ಈ ಎಲ್ಲಾ ಕಾಮಗಾರಿಗಳು ಮುಗಿಯುವ ಹಂತಕ್ಕೆ ಬಂದಿದ್ದವು. ಚುನಾವಣೆ ಬಂದದ್ದರಿಂದ ಕಾಮಗಾರಿ ಅಲ್ಲಿಗೆ ನಿಂತಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಪುನರಾರಂಭ ಮಾಡಿಲ್ಲ್. ಈ ಕಾಮಗಾರಿಗಳಿಗೆ ಉಳಿಕೆ ಅನುದಾನ ಕೂಡ ಬಿಡುಗಡೆ ಮಾಡಿಲ್ಲ. ತಕ್ಷಣವೇ ಅನುದಾನ ಬಿಡುಗಡೆ ಮಾಡಿ ಮನೆಗಳನ್ನು ಪೂರ್ಣಗೊಳಿಸಬೇಕು ಎಂದು ಆಗ್ರಹಿಸಿದರು.