ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ದರಾಮಯ್ಯ ವಿರುದ್ಧ ಕೀಳುಮಟ್ಟದ ಟೀಕೆ ಸಲ್ಲ: ಶರತ್‌

ಪ್ರದೇಶ ಕುರುಬರ ಸಂಘದ ಸಂಘಟನಾ ಕಾರ್ಯದರ್ಶಿ ಎಸ್.ಎಂ. ಶರತ್ ಆಕ್ರೋಶ
Last Updated 6 ಡಿಸೆಂಬರ್ 2022, 6:09 IST
ಅಕ್ಷರ ಗಾತ್ರ

ಶಿವಮೊಗ್ಗ: ‘ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಟೀಕಿಸದಿದ್ದರೆ ಬಿಜೆಪಿಯವರಿಗೆ ತಿಂದ ಅನ್ನ ಜೀರ್ಣವಾಗುವುದಿಲ್ಲ’ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ಸಂಘಟನಾ ಕಾರ್ಯದರ್ಶಿ ಎಸ್.ಎಂ. ಶರತ್ ಆಕ್ರೋಶ ವ್ಯಕ್ತಪಡಿಸಿದರು.

ಚಿಕ್ಕಮಗಳೂರು ಶಾಸಕ ಸಿ.ಟಿ. ರವಿ ಅವರು ಸಿದ್ದರಾಮಯ್ಯ ಅವರನ್ನು ಸಿದ್ರಾಮುಲ್ಲಾ ಖಾನ್ ಎಂದು ಕರೆದಿದ್ದಾರೆ. ಈ ಸಿ.ಟಿ. ರವಿಗೆ ಮಾಡಲು ಬೇರೆ ಏನೂ ಕೆಲಸ ಇಲ್ಲ. ಚಿಕ್ಕಮಗಳೂರಿನಲ್ಲಿ ಶಾಂತಿ ಕದಡುತ್ತಿರುವ ಇವರು, ಸಿದ್ದರಾಮಯ್ಯ ಅವರನ್ನು ಈ ರೀತಿ ಅವಮಾನಿಸಿರುವುದು ಸರಿಯಲ್ಲ. ಇದೇ ಧೋರಣೆ ಮುಂದುವರಿಸಿದರೆ ರಾಜ್ಯದಾದ್ಯಂತ ಕುರುಬ ಸಮಾಜದಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ರವಿ ಅವರಿಗೆ ಸಿದ್ದರಾಮಯ್ಯ ದೊಡ್ಡ ತಲೆನೋವಾಗಿದ್ದಾರೆ. ಅವರನ್ನು ರಾಜಕಾರಣದಿಂದ ದೂರ ಉಳಿಯುವಂತೆ
ಮಾಡಲು ಹೆಣಗಾಡುತ್ತಿದ್ದಾರೆ. ಇದು ಶೋಭೆ ತರುವಂಥದ್ದಲ್ಲ ಎಂದು ಹೇಳಿದರು.

ಈಶ್ವರಪ್ಪನವರಿಗೆ ಕೂಡ ಸಿದ್ದರಾಮಯ್ಯ ಅವರನ್ನು ಟೀಕಿಸದಿದ್ದರೆ ನಿದ್ರೆ ಬರುವುದಿಲ್ಲ. ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯ ಅವರನ್ನು ಕಂಡರೆ ಭಯವಾಗುತ್ತಿದೆ. ಈ ಭಯದಲ್ಲಿ ಅವರ ವಿರುದ್ಧ ನಾಲಿಗೆಯನ್ನು ಹರಿಬಿಡುತ್ತಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT