ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸ್ಮಶಾನಕ್ಕೆ ಹೋದ ಶವ ಮತ್ತೆ ಆಸ್ಪತ್ರೆಗೆ ರವಾನೆ!

Last Updated 7 ಜುಲೈ 2022, 2:39 IST
ಅಕ್ಷರ ಗಾತ್ರ

ಶಿವಮೊಗ್ಗ: ಸಾವಿನ ಬಗ್ಗೆ ಅನುಮಾನ ವ್ಯಕ್ತವಾದ ಹಿನ್ನೆಲೆಯಲ್ಲಿ ಬುಧವಾರ ಸಂಜೆ ವ್ಯಕ್ತಿಯೊಬ್ಬರ ಶವವನ್ನು ಸ್ಮಶಾನದಿಂದ ನಗರದ ಮೆಗ್ಗಾನ್ ಆಸ್ಪತ್ರೆಗೆ ಮರುಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಸಮೀಪದ ಲಕ್ಕಿನಕೊಪ್ಪದ ಕಾಡಿನಲ್ಲಿ ಬೆಳಿಗ್ಗೆ ಉರುಳಿಹಳ್ಳಿ ಮಾರುತಿ‌ ಕ್ಯಾಂಪ್ ನಿವಾಸಿ ವಿಠಲ ಮತ್ತು ಅತನ ಸ್ನೇಹಿತ ಇಬ್ವರು ಕುಡಿದು ಮಲಗಿದ್ದಾರೆ. ವಿಠಲನ ಸ್ನೇಹಿತ ಜೊತೆಯಲ್ಲಿ ಮಲಗಿದ್ದವನು ಎದ್ದು ಗ್ರಾಮಕ್ಕೆ ತೆರಳಿದ್ದು, ವಿಠಲ ಎದ್ದು ಬಂದಿಲ್ಲ.

ಗ್ರಾಮಸ್ಥರೊಬ್ಬರು ಕಾಡಿಗೆ ತೆರಳಿದಾಗ ವಿಠಲನ ಶವ ಪತ್ತೆಯಾಗಿದೆ. ಆತನ ಕುಟುಂಬಕ್ಕೆ ವಿಷಯ ಮುಟ್ಟಿಸಿದ್ದಾರೆ. ಕುಟುಂಬದವರೂ ಬಂದಿದ್ದಾರೆ. ಹೆಚ್ಚು ಕುಡಿತದಿಂದ ಆತ‌ ಸತ್ತಿರಬಹುದು ಎಂದು ಅನುಮಾನ ವ್ಯಕ್ತಪಡಿಸಿ ಅಂತ್ಯ ಸಂಸ್ಥಾರಕ್ಕೆ ಗ್ರಾಮದ ಸ್ಮಶಾನಕ್ಕೆ ಮೃತದೇಹ ಕೊಂಡೊಯ್ದಿದ್ದಾರೆ.

ಆದರೆ, ಗ್ರಾಮಸ್ಥರೊಬ್ಬರು ಈ ಬಗ್ಗೆ ಅನುಮಾನ ವ್ಯಕ್ತಪಡಿಸಿ ತುಂಗನಗರ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಅಂತ್ಯ ಸಂಸ್ಕಾರವನ್ನ ತಡೆದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಮರುಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ರವಾನಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT