ಕಾರ್ಯಕ್ರಮದಲ್ಲಿ ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪುರುಷೋತ್ತಮ ತಲವಾಟ ಅವರಿಗೆ ರಂಗ ಗೌರವ ಅರ್ಪಿಸಲಾಯಿತು. ರಂಗಾಯಣ ನಿರ್ದೇಶಕ ಸಂದೇಶ್ ಜವಳಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಗೃಹಸಚಿವ ಆರಗ ಜ್ಞಾನೇಂದ್ರ, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಸುಶೀಲ ಶೆಟ್ಟಿ, ಚಲನಚಿತ್ರ ನಿರ್ದೇಶಕರಾದ ಡಾ. ಗಿರೀಶ್ ಕಾಸರವಳ್ಳಿ, ಪಿ. ಶೇಷಾದ್ರಿ, ಸಾಹಿತಿ ಗೋಪಾಲಕೃಷ್ಣ ಪೈ ಇದ್ದರು. ‘ಪರಶುರಾಮ’ ನಾಟಕ ಪ್ರದರ್ಶನಗೊಂಡಿತು.