ಬರ ಪರಿಸ್ಥಿತಿ ನಿಭಾಯಿಸಲು ತಾಲ್ಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿಗೆ ₹ 45 ಲಕ್ಷ ಮಂಜೂರಾಗಿದೆ. ಹಿನ್ನೀರಿನಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿ ಲಾಂಚ್ ಸಂಚಾರ ನಿಲ್ಲದಂತೆ ಕ್ರಮ ಕೈಗೊಳ್ಳಲು ರ್ಯಾಂಪ್ ನಿರ್ಮಾಣಕ್ಕೆ ₹ 70 ಲಕ್ಷ ಅನುದಾನ ಬಿಡುಗಡೆಯಾಗಿದೆ.
–ಗೋಪಾಲಕೃಷ್ಣ ಬೇಳೂರು ಶಾಸಕರು
ಕೆರೆಗಳಲ್ಲಿ ಜಲಮೂಲ ಸಮೃದ್ಧವಾಗಿತ್ತು. ಅವುಗಳನ್ನು ಸುಸ್ಥಿತಿಯಲ್ಲಿಟ್ಟಿದ್ದರೆ ಬರ ಎನ್ನುವ ಶಬ್ದವೇ ಕೇಳಿಬರುತ್ತಿರಲಿಲ್ಲ. ಕೆರೆಗಳ ಅಭಿವೃದ್ಧಿ ಕಾಮಗಾರಿ ಕೇವಲ ಕಣ್ಣೊರೆಸುವ ಕೆಲಸ ಎನ್ನುವಂತಾಗಿದೆ.