ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ, ಸಂಸದ ಬಿ.ವೈ. ರಾಘವೇಂದ್ರ, ಶಾಸಕ ಆರಗ ಜ್ಞಾನೇಂದ್ರ, ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ರುದ್ರೇಗೌಡ, ಎಂ.ರವಿಕುಮಾರ್, ಮಾಜಿ ಸಚಿವ ಕಿಮ್ಮನೆ ರತ್ನಾಕರ, ಸರ್ಕಾರದ ಉಸ್ತುವಾರಿ ಕಾರ್ಯದರ್ಶಿ, ಜಿಲ್ಲಾಧಿಕಾರಿ ಸೇರಿ ಅನೇಕರು ಗ್ರಾಮಕ್ಕೆ ಭೇಟಿ ನೀಡಿ ಸಂತ್ರಸ್ತ ಕುಟುಂಬದವರ ನೆರವಿಗೆ ಸಹಕರಿಸುವ ಭರವಸೆ ನೀಡಿದ್ದರು. ಆದರೆ ಅದು ಈಡೇರಿಲ್ಲ ಎಂದು ದೂರುತ್ತಾರೆ ಸಂತ್ರಸ್ತರಾದ ಸೋಮು ಪೂಜಾರಿ, ಗೋಪಾಲ ಪೂಜಾರಿ.