<p><strong>ಶಿರಾಳಕೊಪ್ಪ</strong>: ಸಮೀಪದ ಕಡೇನಂದಿಹಳ್ಳಿಯಲ್ಲಿ ಬಾಳೆಹೊನ್ನೂರು ರಂಭಾಪುರಿಪ್ರಸನ್ನ ರೇಣುಕ ವೀರ ಸೋಮೇಶ್ವರ ಶಿವಾಚಾರ್ಯರ ದಸರಾ ದರ್ಬಾರ್ಗೆ ಅದ್ದೂರಿ ಚಾಲನೆ ದೊರೆಯಿತು.</p>.<p>ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಾರ್ಯಕ್ರಮ ಉದ್ಘಾಟಿಸಿದರು.</p>.<p>ಸಂಸದ ಬಿ.ವೈ. ರಾಘವೇಂದ್ರ, ‘ದಸರಾ ನಾಡಹಬ್ಬದ ಸಂಭ್ರಮ ಎಲ್ಲೆಡೆ ಮನೆ ಮಾಡಿದೆ. ಅಂದು ಪ್ರಭುಗಳಿಂದ ನಡೆಯುತ್ತಿದ್ದ ಈ ಆಚರಣೆ ಇಂದು ಪ್ರಜಾಪ್ರಭುತ್ವದ ಚಹರೆ ಮೈಗೂಡಿಸಿಕೊಂಡಿದೆ. ಭಾರತೀಯ ಸಾಂಸ್ಕೃತಿಕ ಹಿನ್ನೆಲೆಯಲ್ಲಿ ಹಬ್ಬಗಳು ಐತಿಹಾಸಿಕ ಪೌರಾಣಿಕ ಮಹತ್ವ ಪಡೆದಿವೆ. ರಂಭಾಪುರಿ ಶ್ರೀಗಳು ನಮ್ಮ ಕ್ಷೇತ್ರಕ್ಕೆ ಪಾದಸ್ಪರ್ಶ ಮಾಡಿರುವುದು ನಮ್ಮ ಪುಣ್ಯ’ಎಂದು ತಿಳಿಸಿದರು.</p>.<p>ಶಿಕಾರಿಪುರ ತಾಲ್ಲೂಕಿನ ಕೆರೆಗಳಿಗೆ ನೀರು ಹರಿಸುವ ₹ 850 ಕೋಟಿ ವೆಚ್ಚದಲ್ಲಿ ನೀರಾವರಿ ಯೋಜನೆ ಕೈಗೊಳ್ಳಲಾಗಿದ್ದು, 119 ಗ್ರಾಮದ ಜನರಿಗೆ ಅನುಕೂಲವಾಗಲಿದೆ. ಉಡುಗಣಿ ತಾಳಗುಂದ ನೀರಾವರಿ ಯೋಜನೆಯಿಂದ 249 ಕೆರೆಗಳಿಗೆ ನೀರು ಹರಿಸಲಾಗುತ್ತದೆ. ಇದು ಏಷ್ಯಾದ ದೊಡ್ಡ ನೀರಾವರಿ ಯೋಜನೆ ಎಂದರು.</p>.<p>ಗುರು ರೇವಣಸಿದ್ದೇಶ್ವರ ಪುಣ್ಯಾಶ್ರಮದ ನೂತನ ಕಟ್ಟಡವನ್ನು ಯಡಿಯೂರಪ್ಪ ಉದ್ಘಾಟಿಸಿದರು.</p>.<p>ರಂಭಾಪುರಿ ಪ್ರಸನ್ನ ರೇಣುಕ ವೀರ ಸೋಮೇಶ್ವರ ಶಿವಾಚಾರ್ಯರು ಸಾನ್ನಿಧ್ಯ ವಹಿಸಿದ್ದರು.<br />ಕಡೇನಂದಿಹಳ್ಳಿ ಪೀಠಾಧಿಪತಿ ರೇವಣಸಿದ್ದೇಶ್ವರ ಸ್ವಾಮೀಜಿ,ಸೂಡಾ ಅಧ್ಯಕ್ಷ ಜ್ಯೋತಿ ಪ್ರಕಾಶ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಚನ್ನವೀರಪ್ಪ, ಕೊಳಗಿ ರೇವಣಪ್ಪ ಸೇರಿ ವಿವಿಧ ಮಠಾಧೀಶರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಾಳಕೊಪ್ಪ</strong>: ಸಮೀಪದ ಕಡೇನಂದಿಹಳ್ಳಿಯಲ್ಲಿ ಬಾಳೆಹೊನ್ನೂರು ರಂಭಾಪುರಿಪ್ರಸನ್ನ ರೇಣುಕ ವೀರ ಸೋಮೇಶ್ವರ ಶಿವಾಚಾರ್ಯರ ದಸರಾ ದರ್ಬಾರ್ಗೆ ಅದ್ದೂರಿ ಚಾಲನೆ ದೊರೆಯಿತು.</p>.<p>ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಾರ್ಯಕ್ರಮ ಉದ್ಘಾಟಿಸಿದರು.</p>.<p>ಸಂಸದ ಬಿ.ವೈ. ರಾಘವೇಂದ್ರ, ‘ದಸರಾ ನಾಡಹಬ್ಬದ ಸಂಭ್ರಮ ಎಲ್ಲೆಡೆ ಮನೆ ಮಾಡಿದೆ. ಅಂದು ಪ್ರಭುಗಳಿಂದ ನಡೆಯುತ್ತಿದ್ದ ಈ ಆಚರಣೆ ಇಂದು ಪ್ರಜಾಪ್ರಭುತ್ವದ ಚಹರೆ ಮೈಗೂಡಿಸಿಕೊಂಡಿದೆ. ಭಾರತೀಯ ಸಾಂಸ್ಕೃತಿಕ ಹಿನ್ನೆಲೆಯಲ್ಲಿ ಹಬ್ಬಗಳು ಐತಿಹಾಸಿಕ ಪೌರಾಣಿಕ ಮಹತ್ವ ಪಡೆದಿವೆ. ರಂಭಾಪುರಿ ಶ್ರೀಗಳು ನಮ್ಮ ಕ್ಷೇತ್ರಕ್ಕೆ ಪಾದಸ್ಪರ್ಶ ಮಾಡಿರುವುದು ನಮ್ಮ ಪುಣ್ಯ’ಎಂದು ತಿಳಿಸಿದರು.</p>.<p>ಶಿಕಾರಿಪುರ ತಾಲ್ಲೂಕಿನ ಕೆರೆಗಳಿಗೆ ನೀರು ಹರಿಸುವ ₹ 850 ಕೋಟಿ ವೆಚ್ಚದಲ್ಲಿ ನೀರಾವರಿ ಯೋಜನೆ ಕೈಗೊಳ್ಳಲಾಗಿದ್ದು, 119 ಗ್ರಾಮದ ಜನರಿಗೆ ಅನುಕೂಲವಾಗಲಿದೆ. ಉಡುಗಣಿ ತಾಳಗುಂದ ನೀರಾವರಿ ಯೋಜನೆಯಿಂದ 249 ಕೆರೆಗಳಿಗೆ ನೀರು ಹರಿಸಲಾಗುತ್ತದೆ. ಇದು ಏಷ್ಯಾದ ದೊಡ್ಡ ನೀರಾವರಿ ಯೋಜನೆ ಎಂದರು.</p>.<p>ಗುರು ರೇವಣಸಿದ್ದೇಶ್ವರ ಪುಣ್ಯಾಶ್ರಮದ ನೂತನ ಕಟ್ಟಡವನ್ನು ಯಡಿಯೂರಪ್ಪ ಉದ್ಘಾಟಿಸಿದರು.</p>.<p>ರಂಭಾಪುರಿ ಪ್ರಸನ್ನ ರೇಣುಕ ವೀರ ಸೋಮೇಶ್ವರ ಶಿವಾಚಾರ್ಯರು ಸಾನ್ನಿಧ್ಯ ವಹಿಸಿದ್ದರು.<br />ಕಡೇನಂದಿಹಳ್ಳಿ ಪೀಠಾಧಿಪತಿ ರೇವಣಸಿದ್ದೇಶ್ವರ ಸ್ವಾಮೀಜಿ,ಸೂಡಾ ಅಧ್ಯಕ್ಷ ಜ್ಯೋತಿ ಪ್ರಕಾಶ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಚನ್ನವೀರಪ್ಪ, ಕೊಳಗಿ ರೇವಣಪ್ಪ ಸೇರಿ ವಿವಿಧ ಮಠಾಧೀಶರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>