‘ಕೋವಿಡ್ ಕಾರಣದಿಂದ ಸಾರ್ವಜನಿಕರು ಆಸ್ತಿ ತೆರಿಗೆಯನ್ನು ಕಟ್ಟಲು ಪರದಾಡಬೇಕಿತ್ತು. ಪಾಲಿಕೆಗೆ ಹೋಗಿ ತಾವು ಎಷ್ಟು ಕಟ್ಟಬೇಕೆಂದು ಬರೆಸಿಕೊಂಡು ಆನಂತರ ಬ್ಯಾಂಕ್ ಅಥವಾ ಶಿವಮೊಗ್ಗ ಒನ್ಗೆ ತೆರಳಿ ಕಟ್ಟಬೇಕಿತ್ತು. ಈಗ ಈ ಅಲೆದಾಟ ತಪ್ಪಿದಂತಾಗುತ್ತದೆ. ಪಾಲಿಕೆ ವ್ಯಾಪ್ತಿಯ ಕಂದಾಯ ಅಧಿಕಾರಿಗಳು ತಮ್ಮ ಮನೆ ಬಾಗಿಲಿಗೆ ಬರುತ್ತಾರೆ. ಮನೆಯ ಕಂದಾಯವನ್ನು ಮನೆಯಲ್ಲಿಯೇ ಆನ್ಲೈನ್ ಮೂಲಕ ಕಟ್ಟಿದರೆ ಅಲ್ಲಿಯೇ ಅವರಿಗೆ ರಶೀದಿಯನ್ನು ಕೂಡ ನೀಡುತ್ತಾರೆ. ಆದರೆ, ನಗದು ಪಾವತಿಸಲು ಅವಕಾಶವಿಲ್ಲ. ಏನಿದ್ದರೂ ಆನ್ಲೈನ್ ಮೂಲಕವೇ ಪಾವತಿಸಬೇಕು’ ಎಂದು ತಿಳಿಸಿದರು.