ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

15 ದಿನದೊಳಗೆ ಸೊರಬ ರಸ್ತೆ ವಿಸ್ತರಣೆಗೆ ಚಾಲನೆ: ಹಾಲಪ್ಪ

Last Updated 23 ಅಕ್ಟೋಬರ್ 2021, 6:22 IST
ಅಕ್ಷರ ಗಾತ್ರ

ಸಾಗರ: ಮುಂದಿನ 15 ದಿನದೊಳಗೆ ಸೊರಬ ರಸ್ತೆ ವಿಸ್ತರಣೆಗೆ ಚಾಲನೆ ನೀಡಲಾಗುತ್ತದೆ. ಈಗಾಗಲೇ ರಸ್ತೆ ವಿಸ್ತರಣೆ ಸಂಬಂಧಪಟ್ಟಂತೆ ₹ 33 ಕೋಟಿ ಮಂಜೂರಾಗಿದೆ ಎಂದು ಶಾಸಕ ಎಚ್. ಹಾಲಪ್ಪ ಹರತಾಳು ತಿಳಿಸಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಶಿವಪ್ಪನಾಯಕ ವೃತ್ತದಿಂದ ದುರ್ಗಾಂಬಾ ವೃತ್ತದವರೆಗೆ ಚತುಷ್ಪಥ ರಸ್ತೆ ನಿರ್ಮಾಣ ಮಾಡಲಾಗುತ್ತಿದ್ದು, ರಸ್ತೆಗಾಗಿ ಭೂಮಿ ಮತ್ತು ಆಸ್ತಿ ಕಳೆದುಕೊಳ್ಳುವವರಿಗೆ ಪರಿಹಾರ ನೀಡಲು ₹ 33 ಕೋಟಿ ಮೀಸಲಿಡಲಾಗಿದೆ.ಬಿ.ಎಚ್. ರಸ್ತೆ ವಿಸ್ತರಣೆಗೆ ಟೆಂಡರ್ ಕರೆಯಲಾಗಿದ್ದು, ಗುತ್ತಿಗೆದಾರರು ಕಾಮಗಾರಿ ವಹಿಸಿ
ಕೊಂಡಿದ್ದಾರೆ’ ಎಂದು ಹೇಳಿದರು.

ಶನಿವಾರ ರಸ್ತೆ ವಿಸ್ತರಣೆಗೆ ಸಂಬಂಧಪಟ್ಟಂತೆ ಸಭೆ ಕರೆಯಲಾಗಿದೆ. ರಸ್ತೆ ವಿಸ್ತರಣೆ ಸಂದರ್ಭದಲ್ಲಿ ಮೂರು ಸೇತುವೆ ನಿರ್ಮಾಣ ಮಾಡಲಾಗುತ್ತದೆ. ಶೀಘ್ರ ವಿಸ್ತರಣೆ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಹೇಳಿದರು.

‘ಮುಂದಿನ ಒಂದು ತಿಂಗಳು ನಾನು ಕ್ಷೇತ್ರದಲ್ಲಿಯೇ ಇದ್ದು, ಅಗತ್ಯ ಕಾಮಗಾರಿಗಳನ್ನು ಪೂರ್ಣಗೊಳಿಸುವ ನಿಟ್ಟಿನಲ್ಲಿ ಅಧಿಕಾರಿಗಳ ಜೊತೆ ಚರ್ಚೆ ನಡೆಸಲಿದ್ದೇನೆ. ನಗರಸಭೆಗೆ ವಿಶೇಷ ಅನುದಾನ ತರುವ ಬಗ್ಗೆ ಗಮನ ಹರಿಸಲಾಗುತ್ತದೆ’ ಎಂದು ತಿಳಿಸಿದರು.

ಕೆ.ಎಸ್. ಗೌತಮ್, ಸತೀಶ್ ಕೆ., ವಿನಾಯಕ ರಾವ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT