₹ 15 ಕೋಟಿ ಅಂದಾಜು ವೆಚ್ಚ: ಅಂಬುತೀರ್ಥ ಕ್ಷೇತ್ರವನ್ನು ಸಂಪೂರ್ಣವಾಗಿ ಅಭಿವೃದ್ಧಿ ಪಡಿಸಲು ಒಟ್ಟು ₹ 10 ಕೋಟಿಯಿಂದ ₹ 15 ಕೋಟಿ ವೆಚ್ಚ ತಗುಲಬಹುದು ಎಂದು ಅಂದಾಜಿಸಲಾಗಿದೆ. ಇದಕ್ಕೆ ಅಲ್ಲಿನ ರಾಮೇಶ್ವರ ದೇವಸ್ಥಾನ ಸಮಿತಿಯು ಕೈ ಜೋಡಿಸುತ್ತಿದೆ. ಪುಷ್ಕರಣಿ ನಿರ್ಮಾಣ, ಅಂಬುತೀರ್ಥ ಕೆರೆ ಸುತ್ತಲೂ ಬದು ಗೋಡೆ, ವಾಕಿಂಗ್ ಪಾಥ್, ನದಿ ಉಗಮದ ಹಿಂಭಾಗದಲ್ಲಿ ತಡೆಗೋಡೆ ನಿರ್ಮಾಣ, ಸಮುದಾಯ ಭವನ ನಿರ್ಮಾಣ, ನೊಣಬೂರು ವೃತ್ತದಿಂದ ಅಂಬುತೀರ್ಥ, ಆರಗ ರಸ್ತೆ ನಿರ್ಮಾಣ, ಶಿಲಾ ದೇಗುಲ ಪುನರ್ ನಿರ್ಮಾಣ ಕಾರ್ಯ ಕೈಗೊಳ್ಳಲಾಗುವುದುಎಂದು ಮಾಹಿತಿ ನೀಡಿದರು.