<p><strong>ಶಿವಮೊಗ್ಗ: </strong>ರಾಜ್ಯ ಸರ್ಕಾರಭೂ ಸುಧಾರಣಾ ಕಾಯ್ದೆಗೆ ತರಾತುರಿಯಲ್ಲಿತಿದ್ದುಪಡಿತಾರದೇ ವಿಧಾನಸಭೆಯಲ್ಲಿ ಚರ್ಚೆಗೆ ಒಳಪಡಿಸಬೇಕುಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ)ಕಾರ್ಯಕರ್ತರು ಶುಕ್ರವಾರಜಿಲ್ಲಾಧಿಕಾರಿ ಕಚೇರಿ ಮುಂದೆಪ್ರತಿಭಟನೆ ನಡೆಸಿದರು.</p>.<p>ಭೂ ಸುಧಾರಣಾ ಕಾಯ್ದೆ ಪರಿಶಿಷ್ಟರು,ಹಿಂದುಳಿದ ವರ್ಗಗಳು, ಬಡವರು, ಭೂಹೀನರು, ಕೃಷಿ ಕಾರ್ಮಿಕರ ಪರವಾಗಿದೆ. ತಿದ್ದುಪಡಿಮೂಲಕ ಬಂಡವಾಳಶಾಹಿಗಳಿಗೆ ಮತ್ತು ಕಾರ್ಪೋರೇಟ್ ಕಂಪನಿಗಳಿಗೆ ರತ್ನಗಂಬಳಿ ಹಾಸುತ್ತಿದೆ ಎಂದು ಆರೋಪಿಸಿದರು.</p>.<p>ಅಭಿವೃದ್ದಿ ಹೆಸರಿನಲ್ಲಿ ಸಾವಿರಾರು ಎಕರೆ ಭೂಮಿ ಕೈಗಾರಿಕೆಗಳಿಗೆ ನೀಡಲಾಗಿದೆ. ಖಾಸಗಿ ಸಂಸ್ಥೆಗಳಿಗೆ ಧೀರ್ಘಕಾಲದವರೆಗೆ ಗುತ್ತಿಗೆ ನೀಡಿದ್ದ ಜಮೀನುಗಳನ್ನೂ ರಭಾರೆ ಮಾಡಲು ಹೊರಟಿದೆ.ತಿದ್ದುಪಡಿ ನಿರ್ಧಾರಹಿಂಪಡೆಯಬೇಕು ಎಂದು ಆಗ್ರಹಿಸಿದರು.</p>.<p>ತಾರತಮ್ಯಮಾಡದೇ ಸಮಾನ ಭೂ ಹಂಚಿಕೆಯಾಗಬೇಕು. ವ್ಯವಸಾಯಕ್ಕೆ ಯೋಗ್ಯ ಭೂಮಿಯನ್ನು ಕೃಷಿಗಾಗಿ ಅಥವಾ ಕೃಷಿ ಚಟುವಟಿಕೆಗಳಿಗೆ ಬಳಸುವಂತೆ ಆಗಬೇಕು. ಪರಿಶಿಷ್ಟರಿಗೆ ಮೀಸಲಿಟ್ಟ ಭೂಮಿ ಪರಭಾರೆ ಮಾಡಬಾರದು.ಅವರಿಗೇ ಮಂಜೂರು ಮಾಡಬೇಕು ಎಂದು ಒತ್ತಾಯಿಸಿದರು.</p>.<p>ಸಮಿತಿಯ ಜಿಲ್ಲಾ ಪ್ರಧಾನ ಸಂಚಾಲಯ ಟಿ.ಎಚ್.ಹಾಲೇಶಪ್ಪ, ಎಂ.ಆರ್.ಶಿವಕುಮಾರ್ ಆಸ್ತಿ, ಎ.ಡಿ.ಆನಂದ್, ಬಿ.ಕೆ.ಹನುಮಂತಪ್ಪ, ಚಿಕ್ಕಲ್ ಸುರೇಶ್, ಪಳನಿರಾಜ್ಪ್ರತಿಭಟನೆಯ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ: </strong>ರಾಜ್ಯ ಸರ್ಕಾರಭೂ ಸುಧಾರಣಾ ಕಾಯ್ದೆಗೆ ತರಾತುರಿಯಲ್ಲಿತಿದ್ದುಪಡಿತಾರದೇ ವಿಧಾನಸಭೆಯಲ್ಲಿ ಚರ್ಚೆಗೆ ಒಳಪಡಿಸಬೇಕುಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ)ಕಾರ್ಯಕರ್ತರು ಶುಕ್ರವಾರಜಿಲ್ಲಾಧಿಕಾರಿ ಕಚೇರಿ ಮುಂದೆಪ್ರತಿಭಟನೆ ನಡೆಸಿದರು.</p>.<p>ಭೂ ಸುಧಾರಣಾ ಕಾಯ್ದೆ ಪರಿಶಿಷ್ಟರು,ಹಿಂದುಳಿದ ವರ್ಗಗಳು, ಬಡವರು, ಭೂಹೀನರು, ಕೃಷಿ ಕಾರ್ಮಿಕರ ಪರವಾಗಿದೆ. ತಿದ್ದುಪಡಿಮೂಲಕ ಬಂಡವಾಳಶಾಹಿಗಳಿಗೆ ಮತ್ತು ಕಾರ್ಪೋರೇಟ್ ಕಂಪನಿಗಳಿಗೆ ರತ್ನಗಂಬಳಿ ಹಾಸುತ್ತಿದೆ ಎಂದು ಆರೋಪಿಸಿದರು.</p>.<p>ಅಭಿವೃದ್ದಿ ಹೆಸರಿನಲ್ಲಿ ಸಾವಿರಾರು ಎಕರೆ ಭೂಮಿ ಕೈಗಾರಿಕೆಗಳಿಗೆ ನೀಡಲಾಗಿದೆ. ಖಾಸಗಿ ಸಂಸ್ಥೆಗಳಿಗೆ ಧೀರ್ಘಕಾಲದವರೆಗೆ ಗುತ್ತಿಗೆ ನೀಡಿದ್ದ ಜಮೀನುಗಳನ್ನೂ ರಭಾರೆ ಮಾಡಲು ಹೊರಟಿದೆ.ತಿದ್ದುಪಡಿ ನಿರ್ಧಾರಹಿಂಪಡೆಯಬೇಕು ಎಂದು ಆಗ್ರಹಿಸಿದರು.</p>.<p>ತಾರತಮ್ಯಮಾಡದೇ ಸಮಾನ ಭೂ ಹಂಚಿಕೆಯಾಗಬೇಕು. ವ್ಯವಸಾಯಕ್ಕೆ ಯೋಗ್ಯ ಭೂಮಿಯನ್ನು ಕೃಷಿಗಾಗಿ ಅಥವಾ ಕೃಷಿ ಚಟುವಟಿಕೆಗಳಿಗೆ ಬಳಸುವಂತೆ ಆಗಬೇಕು. ಪರಿಶಿಷ್ಟರಿಗೆ ಮೀಸಲಿಟ್ಟ ಭೂಮಿ ಪರಭಾರೆ ಮಾಡಬಾರದು.ಅವರಿಗೇ ಮಂಜೂರು ಮಾಡಬೇಕು ಎಂದು ಒತ್ತಾಯಿಸಿದರು.</p>.<p>ಸಮಿತಿಯ ಜಿಲ್ಲಾ ಪ್ರಧಾನ ಸಂಚಾಲಯ ಟಿ.ಎಚ್.ಹಾಲೇಶಪ್ಪ, ಎಂ.ಆರ್.ಶಿವಕುಮಾರ್ ಆಸ್ತಿ, ಎ.ಡಿ.ಆನಂದ್, ಬಿ.ಕೆ.ಹನುಮಂತಪ್ಪ, ಚಿಕ್ಕಲ್ ಸುರೇಶ್, ಪಳನಿರಾಜ್ಪ್ರತಿಭಟನೆಯ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>