ಸಂಪ್ರದಾಯದಂತೆ ಶಿಕಾರಿಪುರ ಪಟ್ಟಣದ ಹುಚ್ಚರಾಯಸ್ವಾಮಿ, ದೊಡ್ಡಕೇರಿ ಗಿಡ್ಡಯ್ಯ ಸ್ವಾಮಿ, ಶಿರಸಿ ಮಾರಿಕಾಂಬಾ, ಬೇಗೂರು ಗ್ರಾಮದ ಆಂಜನೇಯಸ್ವಾಮಿ, ಬೆಂಡೆಕಟ್ಟೆ ಬಸವೇಶ್ವರ ಸ್ವಾಮಿ, ಆಪಿನಕಟ್ಟೆ ಕೊನೆ ಬಸವಣ್ಣ ಹಾಗೂ ಬಾಳೆಕೊಪ್ಪದ ಹನುಮಂತ ದೇವರ ಮೂರ್ತಿಯನ್ನು ಪಲ್ಲಕ್ಕಿ ಮೂಲಕ ಬೇಗೂರು ಗ್ರಾಮದ ಮರಡಿ ತಾಂಡಾಕ್ಕೆ ಹೊತ್ತು ತರಲಾಯಿತು. ಈ ಬಾರಿ ಪಟ್ಟಣದ ಸೊಪ್ಪಿನಕೇರಿ ಹುಲಿಕಟ್ಟೆಪ್ಪಸ್ವಾಮಿ ದೇವರು ಪೂಜೆಯಲ್ಲಿ ಪಾಲ್ಗೊಂಡಿರಲಿಲ್ಲ.