<p><strong>ಶಿವಮೊಗ್ಗ:</strong> ಜಿಲ್ಲೆಯಾದ್ಯಂತ ದಸರಾ ಹಬ್ಬವನ್ನುಸಂಭ್ರಮದಿಂದ ಆಚರಿಸಲಾಗುತ್ತಿದೆ. ನವರಾತ್ರಿ ಉತ್ಸವದ 9ನೇ ದಿನವಾದ ಗುರುವಾರ ಆಯುಧ ಪೂಜೆ ಸಂಭ್ರಮ ಜೋರಾಗಿದೆ. ಕೊರೊನಾ ಹಾಗೂ ಬೆಲೆ ಏರಿಕೆ ನಡುವೆಯೂ ಹಬ್ಬ ಕಳೆಗಟ್ಟಿದೆ.</p>.<p>ಅಂಗಡಿಗಳು, ಕಚೇರಿಗಳು ಸೇರಿ ವಿವಿಧೆಡೆ ಆಯುಧ ಪೂಜೆ ನೆರವೇರಿಸಲಾಗುತ್ತಿದೆ. ಕೃಷಿಕರು ಗಾಡಿ ನೇಗಿಲು ಟ್ರ್ಯಾಕ್ಟರ್ ಮೊದಲಾದ ಸಲಕರಣೆಗಳನ್ನ ಪೂಜಿಸುತ್ತಾರೆ.</p>.<p>ಶಿವಮೊಗ್ಗ ನಗರದಲ್ಲಿ ಬುಧವಾರ ಮಳೆಯ ಕಿರಿಕಿರಿಯ ನಡುವೆಯೂ ನಾಡಹಬ್ಬ ದಸರಾಕ್ಕೆ ಕಳೆಕಟ್ಟಿದೆ. ಈಗಾಗಲೇ ಅಂತಿಮ ಸಿದ್ಧತೆಗಳು ನಡೆದಿದ್ದು, ಆಯುಧಪೂಜೆ ಹಾಗೂ ವಿಜಯದಶಮಿ ಅಂಗವಾಗಿ ಮಾರುಕಟ್ಟೆಯಲ್ಲಿ ಹೂವು, ಹಣ್ಣು ಮತ್ತು ಇತರೆ ವಸ್ತುಗಳ ಮಾರಾಟ ಜೋರಾಗಿತ್ತು.</p>.<p class="Subhead">ಬೆಲೆ ಏರಿಕೆ ಬಿಸಿ: ಈ ಬಾರಿ ದಸರಾ ಹಬ್ಬಕ್ಕೆ ಬೆಲೆ ಏರಿಕೆ ಬಿಸಿ ತಟ್ಟಿದೆ. ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಏರಿದೆ. ಸೇವಂತಿಗೆ, ಚೆಂಡು ಹೂ ಬೆಲೆಯೂ ಅಧಿಕವಾಗಿದೆ. ಸೇಬು, ಮೂಸಂಬಿ, ಕಿತ್ತಲೆ, ಬಾಳೆ ಹಣ್ಣು ಹೀಗೆ ವಿವಿಧ ಹಣ್ಣುಗಳ ಬೆಲೆಯಲ್ಲೂ ಏರಿಕೆಯಾಗಿದೆ.</p>.<p class="Subhead">ನಗರದ ತುಂಬಾ ಬೂದುಕುಂಬಳ– ವ್ಯಾಪಾರ ಇಲ್ಲ: ಆಯುಧ ಪೂಜೆ ಪ್ರಯುಕ್ತ ನಗರಕ್ಕೆ ಬೂದುಕುಂಬಳ ಕಾಯಿ ರಾಶಿ ರಾಶಿ ಬಂದಿದೆ. ಎತ್ತ ನೋಡಿದರೂ ಕುಂಬಳಕಾಯಿ ರಾಶಿ ಕಾಣಿಸುತ್ತಿತ್ತು. ಆದರೆ, ಗ್ರಾಹಕರ ಸಂಖ್ಯೆ ಕಡಿಮೆ ಇತ್ತು.</p>.<p>ನಗರದ ದುರ್ಗಿಗುಡಿ, ಪ್ರವಾಸಿ ಮಂದಿರ, ಕುವೆಂಪು ರಸ್ತೆ, ಗೋಪಿ ಸರ್ಕಲ್, ಗಾಂಧಿ ಬಜಾರ್, ವಿನೋಬನಗರ, ವಿದ್ಯಾನಗರ, ಬಿಎಚ್ ರಸ್ತೆ ಹೀಗೆ ರಸ್ತೆ ಬದಿಗಳಲ್ಲಿ ಬೂದುಕುಂಬಳ ಕಾಯಿ ರಾಶಿ ಹಾಕಲಾಗಿದೆ.</p>.<p>ತಾಲ್ಲೂಕಿನ ವಿವಿಧೆಡೆಯಿಂದ ಬಂದಿದ್ದ ಜನರು ವಿವಿಧ ಅಂಗಡಿಗಳ ಪೂಜೆ, ದಿನಸಿ ಅಂಗಡಿ, ಕಾರ್ಖಾನೆ, ವಾಹನಗಳ ಪೂಜೆಗಾಗಿ ಬೂದುಕುಂಬಳ ಕಾಯಿಯನ್ನು<br />ಖರೀದಿಸಿದರು.</p>.<p>‘ನಮ್ಮಲ್ಲಿ ಕೆಲವರು ಈ ಕಾಯಿಯನ್ನು ಬೆಳೆಯುವವರಿದ್ದಾರೆ. ಆದರೆ, ನಾವು ರೈತರಿಂದ ಖರೀದಿಸಿ ತಂದು ಮಾರಾಟ ಮಾಡುತ್ತಿದ್ದೇವೆ. ಈ ಬಾರಿ ನಿರೀಕ್ಷೆಗಿಂತ ಹೆಚ್ಚು ಕಾಯಿ ಮಾರುಕಟ್ಟೆಗೆ ಬಂದಿದೆ. ಕಾಯಿ ಕೇಳುವವರೇ ಇಲ್ಲ. ಕಡಿಮೆ ಬೆಲೆಗೆ ಕೇಳುತ್ತಾರೆ. ತಂದಿರುವ ಕಾಯಿ ಮಾರಿದರೆ ಸಾಕು. ಕೊನೆಯ ಪಕ್ಷ ಬಾಡಿಗೆ ಹಾಗೂ ಅಸಲಿನ ದುಡ್ಡು ಹುಟ್ಟಿದರೆ ಸಾಕು ಎನ್ನುವಂತಾಗಿದೆ’ ಎನ್ನುತ್ತಾರೆ ವ್ಯಾಪಾರಿ ಸುರೇಶ್.</p>.<p class="Subhead">‘ಜಂಬೂಸವಾರಿಗೆ ಅನುಮತಿ ಇಲ್ಲ’</p>.<p>ಮೈಸೂರು ಮಾದರಿಯಲ್ಲಿ ಶಿವಮೊಗ್ಗದ ದಸರಾ ಜಂಬೂಸವಾರಿಯ ಚಿಂತನೆ ಇತ್ತು. ಆದರೆ, ಈ ಬಾರಿ ಜಂಬೂಸವಾರಿಗೆ ಸರ್ಕಾರದ ಅನುಮತಿ ಇಲ್ಲ. ಹೀಗಾಗಿ ಈ ಬಾರಿ ಜಂಬೂಸವಾರಿ ಇಲ್ಲ. ದಸರಾ ಉತ್ಸವಕ್ಕೆ ಸಕ್ರೆಬೈಲು ಆನೆಗಳನ್ನು ಆಹ್ವಾನಿಸಲಾಗಿದ್ದು, ಅವುಗಳಿಗೆ ವಿಶೇಷ ಪೂಜೆ ಸಲ್ಲಿಸಲಾಗುವುದು. ಅಂಬುಛೇದನ ಕಾರ್ಯಕ್ರಮದಲ್ಲಿ ಮುಜರಾಯಿ ದೇವರು ಮಾತ್ರ ಭಾಗವಹಿಸಲಿವೆ ಎಂದು ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ್ ವಟಾರೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಜಿಲ್ಲೆಯಾದ್ಯಂತ ದಸರಾ ಹಬ್ಬವನ್ನುಸಂಭ್ರಮದಿಂದ ಆಚರಿಸಲಾಗುತ್ತಿದೆ. ನವರಾತ್ರಿ ಉತ್ಸವದ 9ನೇ ದಿನವಾದ ಗುರುವಾರ ಆಯುಧ ಪೂಜೆ ಸಂಭ್ರಮ ಜೋರಾಗಿದೆ. ಕೊರೊನಾ ಹಾಗೂ ಬೆಲೆ ಏರಿಕೆ ನಡುವೆಯೂ ಹಬ್ಬ ಕಳೆಗಟ್ಟಿದೆ.</p>.<p>ಅಂಗಡಿಗಳು, ಕಚೇರಿಗಳು ಸೇರಿ ವಿವಿಧೆಡೆ ಆಯುಧ ಪೂಜೆ ನೆರವೇರಿಸಲಾಗುತ್ತಿದೆ. ಕೃಷಿಕರು ಗಾಡಿ ನೇಗಿಲು ಟ್ರ್ಯಾಕ್ಟರ್ ಮೊದಲಾದ ಸಲಕರಣೆಗಳನ್ನ ಪೂಜಿಸುತ್ತಾರೆ.</p>.<p>ಶಿವಮೊಗ್ಗ ನಗರದಲ್ಲಿ ಬುಧವಾರ ಮಳೆಯ ಕಿರಿಕಿರಿಯ ನಡುವೆಯೂ ನಾಡಹಬ್ಬ ದಸರಾಕ್ಕೆ ಕಳೆಕಟ್ಟಿದೆ. ಈಗಾಗಲೇ ಅಂತಿಮ ಸಿದ್ಧತೆಗಳು ನಡೆದಿದ್ದು, ಆಯುಧಪೂಜೆ ಹಾಗೂ ವಿಜಯದಶಮಿ ಅಂಗವಾಗಿ ಮಾರುಕಟ್ಟೆಯಲ್ಲಿ ಹೂವು, ಹಣ್ಣು ಮತ್ತು ಇತರೆ ವಸ್ತುಗಳ ಮಾರಾಟ ಜೋರಾಗಿತ್ತು.</p>.<p class="Subhead">ಬೆಲೆ ಏರಿಕೆ ಬಿಸಿ: ಈ ಬಾರಿ ದಸರಾ ಹಬ್ಬಕ್ಕೆ ಬೆಲೆ ಏರಿಕೆ ಬಿಸಿ ತಟ್ಟಿದೆ. ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಏರಿದೆ. ಸೇವಂತಿಗೆ, ಚೆಂಡು ಹೂ ಬೆಲೆಯೂ ಅಧಿಕವಾಗಿದೆ. ಸೇಬು, ಮೂಸಂಬಿ, ಕಿತ್ತಲೆ, ಬಾಳೆ ಹಣ್ಣು ಹೀಗೆ ವಿವಿಧ ಹಣ್ಣುಗಳ ಬೆಲೆಯಲ್ಲೂ ಏರಿಕೆಯಾಗಿದೆ.</p>.<p class="Subhead">ನಗರದ ತುಂಬಾ ಬೂದುಕುಂಬಳ– ವ್ಯಾಪಾರ ಇಲ್ಲ: ಆಯುಧ ಪೂಜೆ ಪ್ರಯುಕ್ತ ನಗರಕ್ಕೆ ಬೂದುಕುಂಬಳ ಕಾಯಿ ರಾಶಿ ರಾಶಿ ಬಂದಿದೆ. ಎತ್ತ ನೋಡಿದರೂ ಕುಂಬಳಕಾಯಿ ರಾಶಿ ಕಾಣಿಸುತ್ತಿತ್ತು. ಆದರೆ, ಗ್ರಾಹಕರ ಸಂಖ್ಯೆ ಕಡಿಮೆ ಇತ್ತು.</p>.<p>ನಗರದ ದುರ್ಗಿಗುಡಿ, ಪ್ರವಾಸಿ ಮಂದಿರ, ಕುವೆಂಪು ರಸ್ತೆ, ಗೋಪಿ ಸರ್ಕಲ್, ಗಾಂಧಿ ಬಜಾರ್, ವಿನೋಬನಗರ, ವಿದ್ಯಾನಗರ, ಬಿಎಚ್ ರಸ್ತೆ ಹೀಗೆ ರಸ್ತೆ ಬದಿಗಳಲ್ಲಿ ಬೂದುಕುಂಬಳ ಕಾಯಿ ರಾಶಿ ಹಾಕಲಾಗಿದೆ.</p>.<p>ತಾಲ್ಲೂಕಿನ ವಿವಿಧೆಡೆಯಿಂದ ಬಂದಿದ್ದ ಜನರು ವಿವಿಧ ಅಂಗಡಿಗಳ ಪೂಜೆ, ದಿನಸಿ ಅಂಗಡಿ, ಕಾರ್ಖಾನೆ, ವಾಹನಗಳ ಪೂಜೆಗಾಗಿ ಬೂದುಕುಂಬಳ ಕಾಯಿಯನ್ನು<br />ಖರೀದಿಸಿದರು.</p>.<p>‘ನಮ್ಮಲ್ಲಿ ಕೆಲವರು ಈ ಕಾಯಿಯನ್ನು ಬೆಳೆಯುವವರಿದ್ದಾರೆ. ಆದರೆ, ನಾವು ರೈತರಿಂದ ಖರೀದಿಸಿ ತಂದು ಮಾರಾಟ ಮಾಡುತ್ತಿದ್ದೇವೆ. ಈ ಬಾರಿ ನಿರೀಕ್ಷೆಗಿಂತ ಹೆಚ್ಚು ಕಾಯಿ ಮಾರುಕಟ್ಟೆಗೆ ಬಂದಿದೆ. ಕಾಯಿ ಕೇಳುವವರೇ ಇಲ್ಲ. ಕಡಿಮೆ ಬೆಲೆಗೆ ಕೇಳುತ್ತಾರೆ. ತಂದಿರುವ ಕಾಯಿ ಮಾರಿದರೆ ಸಾಕು. ಕೊನೆಯ ಪಕ್ಷ ಬಾಡಿಗೆ ಹಾಗೂ ಅಸಲಿನ ದುಡ್ಡು ಹುಟ್ಟಿದರೆ ಸಾಕು ಎನ್ನುವಂತಾಗಿದೆ’ ಎನ್ನುತ್ತಾರೆ ವ್ಯಾಪಾರಿ ಸುರೇಶ್.</p>.<p class="Subhead">‘ಜಂಬೂಸವಾರಿಗೆ ಅನುಮತಿ ಇಲ್ಲ’</p>.<p>ಮೈಸೂರು ಮಾದರಿಯಲ್ಲಿ ಶಿವಮೊಗ್ಗದ ದಸರಾ ಜಂಬೂಸವಾರಿಯ ಚಿಂತನೆ ಇತ್ತು. ಆದರೆ, ಈ ಬಾರಿ ಜಂಬೂಸವಾರಿಗೆ ಸರ್ಕಾರದ ಅನುಮತಿ ಇಲ್ಲ. ಹೀಗಾಗಿ ಈ ಬಾರಿ ಜಂಬೂಸವಾರಿ ಇಲ್ಲ. ದಸರಾ ಉತ್ಸವಕ್ಕೆ ಸಕ್ರೆಬೈಲು ಆನೆಗಳನ್ನು ಆಹ್ವಾನಿಸಲಾಗಿದ್ದು, ಅವುಗಳಿಗೆ ವಿಶೇಷ ಪೂಜೆ ಸಲ್ಲಿಸಲಾಗುವುದು. ಅಂಬುಛೇದನ ಕಾರ್ಯಕ್ರಮದಲ್ಲಿ ಮುಜರಾಯಿ ದೇವರು ಮಾತ್ರ ಭಾಗವಹಿಸಲಿವೆ ಎಂದು ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ್ ವಟಾರೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>