<p><strong>ಶಿವಮೊಗ್ಗ:</strong> ನಗರದ ಕೆಲವೆಡೆ ಭಾನುವಾರ ಸೂರ್ಯ ಗ್ರಹಣವನ್ನು ಜನರು ಕುತೂಹಲದಿಂದ ವೀಕ್ಷಿಸಿದರು.</p>.<p>ನಗರದ ಪ್ರೆಸ್ಟ್ರಸ್ಟ್ ಎದುರಿನ ಕಟ್ಟಡದಲ್ಲಿ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯಿಂದ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು. ಬೆಳಿಗ್ಗೆ 10.30ರಿಂದ ಮಧ್ಯಾಹ್ನ 1.30 ವರೆಗೆ ಧೀರ್ಘಕಾಲದ ಸೂರ್ಯಗ್ರಹಣ ಸಂಭವಿಸುವುದನ್ನು ಸಾರ್ವಜನಿಕರು ಕುತೂಹಲದಿಂದ ವೀಕ್ಷಿಸುವುದು ಕಂಡುಬಂತು.</p>.<p>ಗ್ರಹಣದ ಸಮಯದಲ್ಲಿ ಆಹಾರ ಸೇವನೆ ಮಾಡಬಾರದು ಎಂಬ ಮೂಢನಂಬಿಕೆ ತೊರೆಯಲು ಗ್ರಹಣ ವೀಕ್ಷಿಸುತ್ತಾ ಮಂಡಕ್ಕಿ ತಿನ್ನುವ ವ್ಯವಸ್ಥೆಯನ್ನು ಸಮಿತಿ ಮಾಡಿತ್ತು. ಮಂಡಕ್ಕಿ ತಿನ್ನುತ್ತಾ ಜನರು ಗ್ರಹಣ ವೀಕ್ಷಿಸಿದರು.</p>.<p>ಸೂರ್ಯಗ್ರಹಣ ಇದ್ದ ಕಾರಣ ನಗರದ ಎಲ್ಲಾ ರಸ್ತೆಗಳು ಬಿಕೋ ಎನ್ನುತ್ತಿದ್ದವು. ಭಾನುವಾರವಾದ ಕಾರಣ ಮೊದಲೇ ವಾಹನ ಸಂಚಾರ ವಿರಳ. ಅದರಲ್ಲೂ ಗ್ರಹಣ ಬಂದಿದ್ದರಿಂದ ರಸ್ತೆಗಳಲ್ಲಿ ಜನರ ಓಡಾಟ ಕಡಿಮೆ ಇತ್ತು. ಮನೆಗಳಲ್ಲಿ ಜನರು ಧ್ಯಾನ, ಜಪಗಳಲ್ಲಿ ನಿರತರಾಗಿದ್ದುದ್ದು ಕಂಡುಬಂತು.</p>.<p>ನಗರದ ಎಲ್ಲಾ ದೇವಸ್ಥಾನಗಳ ಬಾಗಿಲು ಮುಚ್ಚಲಾಗಿತ್ತು. ಗ್ರಹಣ ಮೋಕ್ಷ ಕಾಲದ ನಂತರ ದೇವಸ್ಥಾನಗಳು, ಮನೆಗಳನ್ನು ಸ್ವಚ್ಛಗೊಳಿಸುವುದು ಅಲ್ಲಲ್ಲಿ ಕಂಡುಬಂತು. ಕೆಲವು ದೇವಸ್ಥಾನಗಳಲ್ಲಿ ದೇವರಿಗೆ ವಿಶೇಷ ಪೂಜೆ, ಹೋಮ ನಡೆಸಲಾಯಿತು. ನಂತರ ಸಾರ್ವಜನಿಕರ ದರ್ಶನಕ್ಕೆ ಅನುವು ಮಾಡಿಕೊಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ನಗರದ ಕೆಲವೆಡೆ ಭಾನುವಾರ ಸೂರ್ಯ ಗ್ರಹಣವನ್ನು ಜನರು ಕುತೂಹಲದಿಂದ ವೀಕ್ಷಿಸಿದರು.</p>.<p>ನಗರದ ಪ್ರೆಸ್ಟ್ರಸ್ಟ್ ಎದುರಿನ ಕಟ್ಟಡದಲ್ಲಿ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯಿಂದ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು. ಬೆಳಿಗ್ಗೆ 10.30ರಿಂದ ಮಧ್ಯಾಹ್ನ 1.30 ವರೆಗೆ ಧೀರ್ಘಕಾಲದ ಸೂರ್ಯಗ್ರಹಣ ಸಂಭವಿಸುವುದನ್ನು ಸಾರ್ವಜನಿಕರು ಕುತೂಹಲದಿಂದ ವೀಕ್ಷಿಸುವುದು ಕಂಡುಬಂತು.</p>.<p>ಗ್ರಹಣದ ಸಮಯದಲ್ಲಿ ಆಹಾರ ಸೇವನೆ ಮಾಡಬಾರದು ಎಂಬ ಮೂಢನಂಬಿಕೆ ತೊರೆಯಲು ಗ್ರಹಣ ವೀಕ್ಷಿಸುತ್ತಾ ಮಂಡಕ್ಕಿ ತಿನ್ನುವ ವ್ಯವಸ್ಥೆಯನ್ನು ಸಮಿತಿ ಮಾಡಿತ್ತು. ಮಂಡಕ್ಕಿ ತಿನ್ನುತ್ತಾ ಜನರು ಗ್ರಹಣ ವೀಕ್ಷಿಸಿದರು.</p>.<p>ಸೂರ್ಯಗ್ರಹಣ ಇದ್ದ ಕಾರಣ ನಗರದ ಎಲ್ಲಾ ರಸ್ತೆಗಳು ಬಿಕೋ ಎನ್ನುತ್ತಿದ್ದವು. ಭಾನುವಾರವಾದ ಕಾರಣ ಮೊದಲೇ ವಾಹನ ಸಂಚಾರ ವಿರಳ. ಅದರಲ್ಲೂ ಗ್ರಹಣ ಬಂದಿದ್ದರಿಂದ ರಸ್ತೆಗಳಲ್ಲಿ ಜನರ ಓಡಾಟ ಕಡಿಮೆ ಇತ್ತು. ಮನೆಗಳಲ್ಲಿ ಜನರು ಧ್ಯಾನ, ಜಪಗಳಲ್ಲಿ ನಿರತರಾಗಿದ್ದುದ್ದು ಕಂಡುಬಂತು.</p>.<p>ನಗರದ ಎಲ್ಲಾ ದೇವಸ್ಥಾನಗಳ ಬಾಗಿಲು ಮುಚ್ಚಲಾಗಿತ್ತು. ಗ್ರಹಣ ಮೋಕ್ಷ ಕಾಲದ ನಂತರ ದೇವಸ್ಥಾನಗಳು, ಮನೆಗಳನ್ನು ಸ್ವಚ್ಛಗೊಳಿಸುವುದು ಅಲ್ಲಲ್ಲಿ ಕಂಡುಬಂತು. ಕೆಲವು ದೇವಸ್ಥಾನಗಳಲ್ಲಿ ದೇವರಿಗೆ ವಿಶೇಷ ಪೂಜೆ, ಹೋಮ ನಡೆಸಲಾಯಿತು. ನಂತರ ಸಾರ್ವಜನಿಕರ ದರ್ಶನಕ್ಕೆ ಅನುವು ಮಾಡಿಕೊಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>