<p>ಶಿಕಾರಿಪುರ: ಪಠ್ಯದ ಜ್ಞಾನ ಮಾತ್ರ ಶಿಕ್ಷಣವಲ್ಲ. ಅದರ ಪರಿಭಾಷೆ ಬದಲಾಗಿದ್ದು, ವಿಸ್ತೃತ ಸ್ವರೂಪದ ಕಲಿಕೆ ಎಲ್ಲರಿಗೂ ಸಿಗುವಂತ ಶಿಕ್ಷಣ ವ್ಯವಸ್ಥೆ ಬರಬೇಕಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.</p>.<p>ಪಟ್ಟಣದ ಕುಮದ್ವತಿ ಬಿ.ಇಡಿ. ಕಾಲೇಜಿನಲ್ಲಿ ಶುಕ್ರವಾರ ನಡೆದ ಮೂರನೇ ಅಂತರರಾಷ್ಟ್ರೀಯ ಶೈಕ್ಷಣಿಕ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ರ್ಯಾಂಕ್ ಪಡೆದವರು ಜೀವನದಲ್ಲಿ ಸೋತರೆ ಶಿಕ್ಷಣಕ್ಕೆ ಬೆಲೆ ಎಲ್ಲಿರುತ್ತದೆ. ಉದ್ಯೋಗ ಸಿಗದಿದ್ದಾಗ ಬೇಸರವಾಗದೇ ಸ್ವಯಂ ಉದ್ಯೋಗ ಮಾಡುವ ಮನಸ್ಸು ಬರಬೇಕು. ಸಿಕ್ಕ ಕೆಲಸ ಮಾಡುವ ಮನೋಭಾವ ಬೆಳೆಯಬೇಕು. ಜೀವನದಲ್ಲಿ ಎಷ್ಟೇ ಕಷ್ಟ ಬಂದರೂ ಅದನ್ನು ಎದುರಿಸುವ ಶಕ್ತಿ ಶಿಕ್ಷಣಕ್ಕೆ ಬರಬೇಕಿದೆ’ ಎಂದರು.</p>.<p>ಶಿಕ್ಷಣ ಮಗುವಿನ ಸುಪ್ತವಾಗಿರುವ ಶಕ್ತಿ. ಅದನ್ನು ಕ್ರಿಯಾತ್ಮಕವಾಗಿ ಹೊರತರುವ ಶಕ್ತಿ ಶಿಕ್ಷಕರಲ್ಲಿರುತ್ತದೆ. ಶಿಕ್ಷಣ ಎಂದರೆ ಎಲ್ಲವನ್ನೂ ಕಲಿಸುವುದಲ್ಲ. ಕಲಿಯುವಂತೆ ಮಾರ್ಗದರ್ಶನ ಮಾಡುವ ಜತೆ ಮಗುವಿನಲ್ಲಿರುವ ಅಂತಃಸತ್ವವನ್ನು ಹೇಗೆ ಹೊಸತನದೊಂದಿಗೆ ಪ್ರಸ್ತುತಪಡಿಸಬೇಕು ಎಂಬುದಾಗಿದೆ ಎಂದು ಕುವೆಂಪು ವಿವಿ ಕುಲಪತಿ ಶರತ್ ಅನಂತಮೂರ್ತಿ ಹೇಳಿದರು.</p>.<p>ಸಮ್ಮೇಳನದ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಾಯಿತು. ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಅಧ್ಯಕ್ಷ ಎಂ.ಬಿ.ಶಿವಕುಮಾರ್, ಡೀಮ್ಡ್ ವಿವಿ ಬೆಂಗಳೂರಿನ ಜಿ.ಆರ್.ಅಂಗಡಿ, ಕಲಬುರಗಿ ಕೇಂದ್ರೀಯ ವಿವಿ ಪ್ರಾಚಾರ್ಯ ಜಿ.ಎಸ್.ಶಿವಕುಮಾರ್, ಪ್ರಾಚಾರ್ಯ ಜಿ.ಎಸ್.ಶಿವಕುಮಾರ್, ಸಂಪನ್ಮೂಲ ವ್ಯಕ್ತಿಗಳು, ಪ್ರಶಿಕ್ಷಣಾರ್ಥಿಗಳು ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿಕಾರಿಪುರ: ಪಠ್ಯದ ಜ್ಞಾನ ಮಾತ್ರ ಶಿಕ್ಷಣವಲ್ಲ. ಅದರ ಪರಿಭಾಷೆ ಬದಲಾಗಿದ್ದು, ವಿಸ್ತೃತ ಸ್ವರೂಪದ ಕಲಿಕೆ ಎಲ್ಲರಿಗೂ ಸಿಗುವಂತ ಶಿಕ್ಷಣ ವ್ಯವಸ್ಥೆ ಬರಬೇಕಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.</p>.<p>ಪಟ್ಟಣದ ಕುಮದ್ವತಿ ಬಿ.ಇಡಿ. ಕಾಲೇಜಿನಲ್ಲಿ ಶುಕ್ರವಾರ ನಡೆದ ಮೂರನೇ ಅಂತರರಾಷ್ಟ್ರೀಯ ಶೈಕ್ಷಣಿಕ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ರ್ಯಾಂಕ್ ಪಡೆದವರು ಜೀವನದಲ್ಲಿ ಸೋತರೆ ಶಿಕ್ಷಣಕ್ಕೆ ಬೆಲೆ ಎಲ್ಲಿರುತ್ತದೆ. ಉದ್ಯೋಗ ಸಿಗದಿದ್ದಾಗ ಬೇಸರವಾಗದೇ ಸ್ವಯಂ ಉದ್ಯೋಗ ಮಾಡುವ ಮನಸ್ಸು ಬರಬೇಕು. ಸಿಕ್ಕ ಕೆಲಸ ಮಾಡುವ ಮನೋಭಾವ ಬೆಳೆಯಬೇಕು. ಜೀವನದಲ್ಲಿ ಎಷ್ಟೇ ಕಷ್ಟ ಬಂದರೂ ಅದನ್ನು ಎದುರಿಸುವ ಶಕ್ತಿ ಶಿಕ್ಷಣಕ್ಕೆ ಬರಬೇಕಿದೆ’ ಎಂದರು.</p>.<p>ಶಿಕ್ಷಣ ಮಗುವಿನ ಸುಪ್ತವಾಗಿರುವ ಶಕ್ತಿ. ಅದನ್ನು ಕ್ರಿಯಾತ್ಮಕವಾಗಿ ಹೊರತರುವ ಶಕ್ತಿ ಶಿಕ್ಷಕರಲ್ಲಿರುತ್ತದೆ. ಶಿಕ್ಷಣ ಎಂದರೆ ಎಲ್ಲವನ್ನೂ ಕಲಿಸುವುದಲ್ಲ. ಕಲಿಯುವಂತೆ ಮಾರ್ಗದರ್ಶನ ಮಾಡುವ ಜತೆ ಮಗುವಿನಲ್ಲಿರುವ ಅಂತಃಸತ್ವವನ್ನು ಹೇಗೆ ಹೊಸತನದೊಂದಿಗೆ ಪ್ರಸ್ತುತಪಡಿಸಬೇಕು ಎಂಬುದಾಗಿದೆ ಎಂದು ಕುವೆಂಪು ವಿವಿ ಕುಲಪತಿ ಶರತ್ ಅನಂತಮೂರ್ತಿ ಹೇಳಿದರು.</p>.<p>ಸಮ್ಮೇಳನದ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಾಯಿತು. ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಅಧ್ಯಕ್ಷ ಎಂ.ಬಿ.ಶಿವಕುಮಾರ್, ಡೀಮ್ಡ್ ವಿವಿ ಬೆಂಗಳೂರಿನ ಜಿ.ಆರ್.ಅಂಗಡಿ, ಕಲಬುರಗಿ ಕೇಂದ್ರೀಯ ವಿವಿ ಪ್ರಾಚಾರ್ಯ ಜಿ.ಎಸ್.ಶಿವಕುಮಾರ್, ಪ್ರಾಚಾರ್ಯ ಜಿ.ಎಸ್.ಶಿವಕುಮಾರ್, ಸಂಪನ್ಮೂಲ ವ್ಯಕ್ತಿಗಳು, ಪ್ರಶಿಕ್ಷಣಾರ್ಥಿಗಳು ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>