<p><strong>ಪ್ರಜಾವಾಣಿ ವಾರ್ತೆ</strong></p>.<p><strong>ಸಾಗರ: ಶಿಕ್ಷಣ ಸಂಸ್ಥೆಗಳ ಬೆಳವಣಿಗೆಯಲ್ಲಿ ಬೋಧಕೇತರ ಸಿಬ್ಬಂದಿ ಪಾತ್ರವೂ ಅತ್ಯಂತ ಪ್ರಮುಖವಾಗಿರುತ್ತದೆ ಎಂದು ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷ ಬಿ.ಆರ್.ಜಯಂತ್ ಹೇಳಿದರು. </strong></p>.<p><strong>ಇಲ್ಲಿನ ಎಲ್ ಬಿ ಮತ್ತು ಎಸ್ ಬಿಎಸ್ ಕಾಲೇಜಿನಲ್ಲಿ ಪ್ರತಿಷ್ಠಾನ ಶುಕ್ರವಾರ ಏರ್ಪಡಿಸಿದ್ದ ಬೋಧಕೇತರ ಸಿಬ್ಬಂದಿಗೆ ಸವಲತ್ತು ವಿತರಣೆ, ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</strong></p>.<p><strong>1963 ರಿಂದ ನಮ್ಮ ಸಂಸ್ಥೆಯಲ್ಲಿ 62 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿಕ್ಷಣ ಪಡೆದು ತಮ್ಮ ಬದುಕನ್ನು ಕಟ್ಟಿಕೊಂಡಿದ್ದಾರೆ. ಶಿಕ್ಷಣ ಸಂಸ್ಥೆಯ ಆಡಳಿತ ಸಮರ್ಪಕವಾಗಿ ನಡೆಯುವಲ್ಲಿ ಬೋಧಕೇತರ ಸಿಬ್ಬಂದಿಯ ದಕ್ಷತೆ ಕಾರಣವಾಗಿದೆ ಎಂದರು.</strong></p>.<p><strong>ಅನೇಕ ಸಂದರ್ಭಗಳಲ್ಲಿ ಬೋಧಕೇತರ ಸಿಬ್ಬಂದಿ ಅತ್ಯಂತ ಕಡಿಮೆ ವೇತನ ಪಡೆದು ಸಂಸ್ಥೆಯ ಏಳಿಗೆಗಾಗಿ ಶ್ರಮಿಸಿದ್ದಾರೆ. ಅವರನ್ನು ಗುರುತಿಸಿ ಗೌರವಿಸುವುದು ಸಂಸ್ಥೆಯ ಆದ್ಯ ಕರ್ತವ್ಯ ಎಂದು ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಎಚ್.ಎಂ.ಶಿವಕುಮಾರ್ ಹೇಳಿದರು.</strong></p>.<p><strong>ಬೋಧಕೇತರ ಸಿಬ್ಬಂದಿಗೆ ರೂ. 15 ಲಕ್ಷ ಮೊತ್ತದ ಉಪ ದಾನದ ಚೆಕ್ ವಿತರಿಸಲಾಯಿತು. ನಿವೃತ್ತ ಸಿಬ್ಬಂದಿ ವರ್ಗದವರನ್ನು ಸನ್ಮಾನಿಸಲಾಯಿತು. ಪ್ರತಿಷ್ಠಾನದ ಕೋಶಾಧ್ಯಕ್ಷ ಕವಲಕೋಡು ವೆಂಕಟೇಶ್, ಉಪಾಧ್ಯಕ್ಷ ಕೆ.ಎಂ.ಸೂರ್ಯನಾರಾಯಣ, ಪ್ರಮುಖರಾದ ಎಂ.ಆರ್.ಸತ್ಯನಾರಾಯಣ, ಬಿ.ಸಿ.ಶಶಿಧರ್, ಎ.ಎಸ್.ಲಕ್ಷ್ಮೀಶ್, ಜಗದೀಶ್ ಎಂ.ಭಂಡಾರಿ, ಶಿಲ್ಪಾ ವಿ.ಎನ್. ವಿಜಯಲಕ್ಷ್ಮಿ ಇದ್ದರು.</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪ್ರಜಾವಾಣಿ ವಾರ್ತೆ</strong></p>.<p><strong>ಸಾಗರ: ಶಿಕ್ಷಣ ಸಂಸ್ಥೆಗಳ ಬೆಳವಣಿಗೆಯಲ್ಲಿ ಬೋಧಕೇತರ ಸಿಬ್ಬಂದಿ ಪಾತ್ರವೂ ಅತ್ಯಂತ ಪ್ರಮುಖವಾಗಿರುತ್ತದೆ ಎಂದು ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷ ಬಿ.ಆರ್.ಜಯಂತ್ ಹೇಳಿದರು. </strong></p>.<p><strong>ಇಲ್ಲಿನ ಎಲ್ ಬಿ ಮತ್ತು ಎಸ್ ಬಿಎಸ್ ಕಾಲೇಜಿನಲ್ಲಿ ಪ್ರತಿಷ್ಠಾನ ಶುಕ್ರವಾರ ಏರ್ಪಡಿಸಿದ್ದ ಬೋಧಕೇತರ ಸಿಬ್ಬಂದಿಗೆ ಸವಲತ್ತು ವಿತರಣೆ, ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</strong></p>.<p><strong>1963 ರಿಂದ ನಮ್ಮ ಸಂಸ್ಥೆಯಲ್ಲಿ 62 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿಕ್ಷಣ ಪಡೆದು ತಮ್ಮ ಬದುಕನ್ನು ಕಟ್ಟಿಕೊಂಡಿದ್ದಾರೆ. ಶಿಕ್ಷಣ ಸಂಸ್ಥೆಯ ಆಡಳಿತ ಸಮರ್ಪಕವಾಗಿ ನಡೆಯುವಲ್ಲಿ ಬೋಧಕೇತರ ಸಿಬ್ಬಂದಿಯ ದಕ್ಷತೆ ಕಾರಣವಾಗಿದೆ ಎಂದರು.</strong></p>.<p><strong>ಅನೇಕ ಸಂದರ್ಭಗಳಲ್ಲಿ ಬೋಧಕೇತರ ಸಿಬ್ಬಂದಿ ಅತ್ಯಂತ ಕಡಿಮೆ ವೇತನ ಪಡೆದು ಸಂಸ್ಥೆಯ ಏಳಿಗೆಗಾಗಿ ಶ್ರಮಿಸಿದ್ದಾರೆ. ಅವರನ್ನು ಗುರುತಿಸಿ ಗೌರವಿಸುವುದು ಸಂಸ್ಥೆಯ ಆದ್ಯ ಕರ್ತವ್ಯ ಎಂದು ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಎಚ್.ಎಂ.ಶಿವಕುಮಾರ್ ಹೇಳಿದರು.</strong></p>.<p><strong>ಬೋಧಕೇತರ ಸಿಬ್ಬಂದಿಗೆ ರೂ. 15 ಲಕ್ಷ ಮೊತ್ತದ ಉಪ ದಾನದ ಚೆಕ್ ವಿತರಿಸಲಾಯಿತು. ನಿವೃತ್ತ ಸಿಬ್ಬಂದಿ ವರ್ಗದವರನ್ನು ಸನ್ಮಾನಿಸಲಾಯಿತು. ಪ್ರತಿಷ್ಠಾನದ ಕೋಶಾಧ್ಯಕ್ಷ ಕವಲಕೋಡು ವೆಂಕಟೇಶ್, ಉಪಾಧ್ಯಕ್ಷ ಕೆ.ಎಂ.ಸೂರ್ಯನಾರಾಯಣ, ಪ್ರಮುಖರಾದ ಎಂ.ಆರ್.ಸತ್ಯನಾರಾಯಣ, ಬಿ.ಸಿ.ಶಶಿಧರ್, ಎ.ಎಸ್.ಲಕ್ಷ್ಮೀಶ್, ಜಗದೀಶ್ ಎಂ.ಭಂಡಾರಿ, ಶಿಲ್ಪಾ ವಿ.ಎನ್. ವಿಜಯಲಕ್ಷ್ಮಿ ಇದ್ದರು.</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>