<p><strong>ಶಿವಮೊಗ್ಗ: </strong>ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ಜನ್ಮದಿನದ ಪ್ರಯುಕ್ತ ಮಂಗಳವಾರ ಜಿಲ್ಲೆಯಾದ್ಯಂತ ‘ಈದ್ ಮಿಲಾದ್’ ಹಬ್ಬವನ್ನು ಮುಸ್ಲಿಮರು ಸರಳವಾಗಿ ಆಚರಿಸಿದರು.</p>.<p>ನಗರ ಮುಸ್ಲಿಂ ಒಕ್ಕೂಟದಿಂದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ರೋಗಿಗಳಿಗೆ ಬ್ರೆಡ್ ಹಾಗೂ<br />ಹಣ್ಣು ವಿತರಿಸಲಾಯಿತು. ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ಮೊಹಮ್ಮದ್ ನಿಹಾಲ್, ಅಖಿಲ್ ರಝಾ, ಮೊಹ್ಮದ್ ಆರಿಫ್ ವುಲ್ಲಾ, ಸಾಹುಲ್ ಹಮೀದ್, ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್, ಎನ್. ರಮೇಶ್, ಕಲೀಂ ಪಾಷ, ಇರ್ಫಾನ್ ಖಾನ್, ಪೂರ್ಣೇಶ್ ಕುಮಾರ್ ಅವರೂ ಇದ್ದರು.</p>.<p>ರೈಲ್ವೇ ನಿಲ್ದಾಣದ ಆಟೊ ಚಾಲಕರು ಮತ್ತು ಮಾಲೀಕರ ಸಂಘದಿಂದ ಸಾರ್ವಜನಿಕರಿಗೆ ರೈಲ್ವೇ ನಿಲ್ದಾಣ ಮುಂಭಾಗ ಹಣ್ಣು ವಿತರಿಸಲಾಯಿತು. ಸಂಘದ ಅಧ್ಯಕ್ಷ ಅಲ್ಲಾಬಕ್ಷ್, ಸ್ಥಳೀಯ ಕಾರ್ಪೊರೇಟರ್ ರಮೇಶ್ ಹೆಗ್ಡೆ, ಸಂತೋಷ್ ಬಳ್ಳೆಕೆರೆ, ಪ್ರಧಾನ ಕಾರ್ಯದರ್ಶಿ ನಾಸೀರ್, ಕಲೀಂ ಇದ್ದರು.</p>.<p>ಸುನ್ನಿ ಜಮಾಯತ್ ಉಲ್ಲಾ ಕಮಿಟಿಯಿಂದ ಗಾಂಧಿ ಬಜಾರ್ನಲ್ಲಿರುವ ಜಾಮಿಯಾ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು. ಹಬ್ಬದ ನಿಮಿತ್ತ ವಿಶೇಷ ಅಡುಗೆ ಮಾಡಿ ಸವಿದರು. ಅನೇಕರು ಬಡವರಿಗೆ ಹಬ್ಬದ ಊಟ ನೀಡಿದರು. ಈ ಹಿಂದೆ ಈದ್ ಮಿಲಾದ್ ಜಿಲ್ಲೆಯಲ್ಲಿ ಸಂಭ್ರಮದಿಂದ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ: </strong>ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ಜನ್ಮದಿನದ ಪ್ರಯುಕ್ತ ಮಂಗಳವಾರ ಜಿಲ್ಲೆಯಾದ್ಯಂತ ‘ಈದ್ ಮಿಲಾದ್’ ಹಬ್ಬವನ್ನು ಮುಸ್ಲಿಮರು ಸರಳವಾಗಿ ಆಚರಿಸಿದರು.</p>.<p>ನಗರ ಮುಸ್ಲಿಂ ಒಕ್ಕೂಟದಿಂದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ರೋಗಿಗಳಿಗೆ ಬ್ರೆಡ್ ಹಾಗೂ<br />ಹಣ್ಣು ವಿತರಿಸಲಾಯಿತು. ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ಮೊಹಮ್ಮದ್ ನಿಹಾಲ್, ಅಖಿಲ್ ರಝಾ, ಮೊಹ್ಮದ್ ಆರಿಫ್ ವುಲ್ಲಾ, ಸಾಹುಲ್ ಹಮೀದ್, ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್, ಎನ್. ರಮೇಶ್, ಕಲೀಂ ಪಾಷ, ಇರ್ಫಾನ್ ಖಾನ್, ಪೂರ್ಣೇಶ್ ಕುಮಾರ್ ಅವರೂ ಇದ್ದರು.</p>.<p>ರೈಲ್ವೇ ನಿಲ್ದಾಣದ ಆಟೊ ಚಾಲಕರು ಮತ್ತು ಮಾಲೀಕರ ಸಂಘದಿಂದ ಸಾರ್ವಜನಿಕರಿಗೆ ರೈಲ್ವೇ ನಿಲ್ದಾಣ ಮುಂಭಾಗ ಹಣ್ಣು ವಿತರಿಸಲಾಯಿತು. ಸಂಘದ ಅಧ್ಯಕ್ಷ ಅಲ್ಲಾಬಕ್ಷ್, ಸ್ಥಳೀಯ ಕಾರ್ಪೊರೇಟರ್ ರಮೇಶ್ ಹೆಗ್ಡೆ, ಸಂತೋಷ್ ಬಳ್ಳೆಕೆರೆ, ಪ್ರಧಾನ ಕಾರ್ಯದರ್ಶಿ ನಾಸೀರ್, ಕಲೀಂ ಇದ್ದರು.</p>.<p>ಸುನ್ನಿ ಜಮಾಯತ್ ಉಲ್ಲಾ ಕಮಿಟಿಯಿಂದ ಗಾಂಧಿ ಬಜಾರ್ನಲ್ಲಿರುವ ಜಾಮಿಯಾ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು. ಹಬ್ಬದ ನಿಮಿತ್ತ ವಿಶೇಷ ಅಡುಗೆ ಮಾಡಿ ಸವಿದರು. ಅನೇಕರು ಬಡವರಿಗೆ ಹಬ್ಬದ ಊಟ ನೀಡಿದರು. ಈ ಹಿಂದೆ ಈದ್ ಮಿಲಾದ್ ಜಿಲ್ಲೆಯಲ್ಲಿ ಸಂಭ್ರಮದಿಂದ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>