<p>ಹೊಳೆಹೊನ್ನೂರು: ಪಠ್ಯ ಮತ್ತು ಪಠ್ಯೇತರ ಚಟುವಟಿಕೆ ಜೀವನದಲ್ಲಿ ಉನ್ನತ ಸಾಧನೆಗೆ ಅಗತ್ಯವಾಗಿದ್ದು, ಬದ್ಧತೆ ಇದ್ದಲ್ಲಿ ಯಾವುದೇ ಕ್ಷೇತ್ರದಲ್ಲಿ ಉನ್ನತ ಸಾಧನೆ ಸಾಧ್ಯ ಎಂದು ಏಕಲವ್ಯ ಪ್ರಶಸ್ತಿ ವಿಜೇತ ಎಸ್.ಎಸ್. ಅಶೋಕ್ಕುಮಾರ್ ತಿಳಿಸಿದರು.</p>.<p>ಸಮೀಪದ ಜಾವಳ್ಳಿಯ ಜ್ಞಾನದೀಪ ಶಾಲೆಯ ಬೆಳ್ಳಿ ಹಬ್ಬದ ಅಂಗವಾಗಿ ಕ್ರೀಡಾ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಬಹುಮಾನ ವಿತರಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ರಂಗಭೂಮಿ ನಟ ಎಸ್. ಸುರೇಶ್, ‘ಮಕ್ಕಳು ಸಾಂಸ್ಕೃತಿಕ ಚಟುವಟಿಕೆಯಲ್ಲಿ ಭಾಗವಹಿಸುವುದರಿಂದ ಆತ್ಮವಿಶ್ವಾಸ ಬೆಳೆಯುತ್ತದೆ. ಜೀವನದಲ್ಲಿ ಸವಾಲುಗಳನ್ನು ಎದುರಿಸಲು ಸಾಧ್ಯವಾಗುತ್ತದೆ. ಜೀವನಕ್ಕೆ ಸೌಂದರ್ಯ ಪ್ರಜ್ಞೆ ಹಾಗೂ ಹಾಸ್ಯ ಪ್ರಜ್ಞೆ ಅವಶ್ಯಕ. ಮಕ್ಕಳು ಉತ್ತಮ ಮಾತುಗಳನ್ನು ಮಾತ್ರ ಸ್ವೀಕರಿಸಬೇಕು. ಯಾವುದಕ್ಕೂ ಪ್ರತಿಕ್ರಿಯಿಸುವ ಮೊದಲು ಆ ಪ್ರದೇಶದ ಸಂಸ್ಕೃತಿಯನ್ನು ತಿಳಿದು ಪ್ರತಿಕ್ರಿಯಿಸಬೇಕು’ ಎಂದು ಸಲಹೆ ನೀಡಿದರು.</p>.<p>ವಿದ್ಯಾರ್ಥಿಗಳು ಶಾಲೆಯಿಂದ ಆಯೋಜಿಸುವ ಎಲ್ಲಾ ಚಟುವಟಿಕೆಯಲ್ಲಿ ಭಾಗವಹಿಸಬೇಕು. ತಮ್ಮ ಬಗ್ಗೆ ಹೆಮ್ಮೆ ಇರಬೇಕು, ಹಿರಿಯ ವಿದ್ಯಾರ್ಥಿಗಳ ಸಾಧನೆಯನ್ನು ನೆನಪಲ್ಲಿಡಬೇಕು ಎಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಶ್ರೀಕಾಂತ ಎಮ್ ಹೆಗ್ಡೆ ತಿಳಿಸಿದರು.</p>.<p>ಕಾರ್ಯಕ್ರಮದಲ್ಲಿ ಜ್ಞಾನದೀಪ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಬಿ.ಎಲ್. ನೀಲಕಂಠಮೂರ್ತಿ, ಉಪಪ್ರಾಂಶುಪಾಲ ವಾಣಿ ಕೃಷ್ಣಪ್ರಸಾದ್ ಉಪಸ್ಥಿತರಿದ್ದರು. ಹಿರಿಯ ಉಪಪ್ರಾಂಶುಪಾಲ ರೆಜಿಜೋಸೆಫ್ ಸ್ವಾಗತಿಸಿದರು. ಶಿಕ್ಷಕಿ ಸುಬಿಯಾ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊಳೆಹೊನ್ನೂರು: ಪಠ್ಯ ಮತ್ತು ಪಠ್ಯೇತರ ಚಟುವಟಿಕೆ ಜೀವನದಲ್ಲಿ ಉನ್ನತ ಸಾಧನೆಗೆ ಅಗತ್ಯವಾಗಿದ್ದು, ಬದ್ಧತೆ ಇದ್ದಲ್ಲಿ ಯಾವುದೇ ಕ್ಷೇತ್ರದಲ್ಲಿ ಉನ್ನತ ಸಾಧನೆ ಸಾಧ್ಯ ಎಂದು ಏಕಲವ್ಯ ಪ್ರಶಸ್ತಿ ವಿಜೇತ ಎಸ್.ಎಸ್. ಅಶೋಕ್ಕುಮಾರ್ ತಿಳಿಸಿದರು.</p>.<p>ಸಮೀಪದ ಜಾವಳ್ಳಿಯ ಜ್ಞಾನದೀಪ ಶಾಲೆಯ ಬೆಳ್ಳಿ ಹಬ್ಬದ ಅಂಗವಾಗಿ ಕ್ರೀಡಾ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಬಹುಮಾನ ವಿತರಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ರಂಗಭೂಮಿ ನಟ ಎಸ್. ಸುರೇಶ್, ‘ಮಕ್ಕಳು ಸಾಂಸ್ಕೃತಿಕ ಚಟುವಟಿಕೆಯಲ್ಲಿ ಭಾಗವಹಿಸುವುದರಿಂದ ಆತ್ಮವಿಶ್ವಾಸ ಬೆಳೆಯುತ್ತದೆ. ಜೀವನದಲ್ಲಿ ಸವಾಲುಗಳನ್ನು ಎದುರಿಸಲು ಸಾಧ್ಯವಾಗುತ್ತದೆ. ಜೀವನಕ್ಕೆ ಸೌಂದರ್ಯ ಪ್ರಜ್ಞೆ ಹಾಗೂ ಹಾಸ್ಯ ಪ್ರಜ್ಞೆ ಅವಶ್ಯಕ. ಮಕ್ಕಳು ಉತ್ತಮ ಮಾತುಗಳನ್ನು ಮಾತ್ರ ಸ್ವೀಕರಿಸಬೇಕು. ಯಾವುದಕ್ಕೂ ಪ್ರತಿಕ್ರಿಯಿಸುವ ಮೊದಲು ಆ ಪ್ರದೇಶದ ಸಂಸ್ಕೃತಿಯನ್ನು ತಿಳಿದು ಪ್ರತಿಕ್ರಿಯಿಸಬೇಕು’ ಎಂದು ಸಲಹೆ ನೀಡಿದರು.</p>.<p>ವಿದ್ಯಾರ್ಥಿಗಳು ಶಾಲೆಯಿಂದ ಆಯೋಜಿಸುವ ಎಲ್ಲಾ ಚಟುವಟಿಕೆಯಲ್ಲಿ ಭಾಗವಹಿಸಬೇಕು. ತಮ್ಮ ಬಗ್ಗೆ ಹೆಮ್ಮೆ ಇರಬೇಕು, ಹಿರಿಯ ವಿದ್ಯಾರ್ಥಿಗಳ ಸಾಧನೆಯನ್ನು ನೆನಪಲ್ಲಿಡಬೇಕು ಎಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಶ್ರೀಕಾಂತ ಎಮ್ ಹೆಗ್ಡೆ ತಿಳಿಸಿದರು.</p>.<p>ಕಾರ್ಯಕ್ರಮದಲ್ಲಿ ಜ್ಞಾನದೀಪ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಬಿ.ಎಲ್. ನೀಲಕಂಠಮೂರ್ತಿ, ಉಪಪ್ರಾಂಶುಪಾಲ ವಾಣಿ ಕೃಷ್ಣಪ್ರಸಾದ್ ಉಪಸ್ಥಿತರಿದ್ದರು. ಹಿರಿಯ ಉಪಪ್ರಾಂಶುಪಾಲ ರೆಜಿಜೋಸೆಫ್ ಸ್ವಾಗತಿಸಿದರು. ಶಿಕ್ಷಕಿ ಸುಬಿಯಾ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>