ರಂಗಭೂಮಿ ನಟ ಎಸ್. ಸುರೇಶ್, ‘ಮಕ್ಕಳು ಸಾಂಸ್ಕೃತಿಕ ಚಟುವಟಿಕೆಯಲ್ಲಿ ಭಾಗವಹಿಸುವುದರಿಂದ ಆತ್ಮವಿಶ್ವಾಸ ಬೆಳೆಯುತ್ತದೆ. ಜೀವನದಲ್ಲಿ ಸವಾಲುಗಳನ್ನು ಎದುರಿಸಲು ಸಾಧ್ಯವಾಗುತ್ತದೆ. ಜೀವನಕ್ಕೆ ಸೌಂದರ್ಯ ಪ್ರಜ್ಞೆ ಹಾಗೂ ಹಾಸ್ಯ ಪ್ರಜ್ಞೆ ಅವಶ್ಯಕ. ಮಕ್ಕಳು ಉತ್ತಮ ಮಾತುಗಳನ್ನು ಮಾತ್ರ ಸ್ವೀಕರಿಸಬೇಕು. ಯಾವುದಕ್ಕೂ ಪ್ರತಿಕ್ರಿಯಿಸುವ ಮೊದಲು ಆ ಪ್ರದೇಶದ ಸಂಸ್ಕೃತಿಯನ್ನು ತಿಳಿದು ಪ್ರತಿಕ್ರಿಯಿಸಬೇಕು’ ಎಂದು ಸಲಹೆ ನೀಡಿದರು.