ನೈರುತ್ಯ ಪದವೀಧರ ಕ್ಷೇತ್ರದ ಟಿಕೆಟ್ಗೆ ಶಿವಮೊಗ್ಗ ಜಿಲ್ಲೆಯಿಂದಲೇ ಹೆಚ್ಚಿನ ಪೈಪೋಟಿ ಇದೆ. ಐವರು ಅರ್ಜಿ ಸಲ್ಲಿಸಿದ್ದು ಹೈಕಮಾಂಡ್ಗೆ ಕಳುಹಿಸಲಾಗಿದೆ. ಎರಡು ಮೂರು ದಿನಗಳಲ್ಲಿ ಪಕ್ಷದ ಅಭ್ಯರ್ಥಿ ಹೆಸರು ಅಂತಿಮಗೊಳ್ಳಲಿದೆ.
–ಟಿ.ಡಿ.ಮೇಘರಾಜ್, ಬಿಜೆಪಿ ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷ
ನೈರುತ್ಯ ಶಿಕ್ಷಕರ ಕ್ಷೇತ್ರದ ಜೆಡಿಎಸ್–ಬಿಜೆಪಿ ಅಭ್ಯರ್ಥಿಯಾಗಿ ಸದ್ಯ ಮೇ 13ಕ್ಕೆ ಭೋಜೇಗೌಡರು ನಾಮಪತ್ರ ಸಲ್ಲಿಸಲಿದ್ದಾರೆ. ಈ ಚುನಾವಣೆಯಲ್ಲೂ ಮೈತ್ರಿ ಮುಂದುವರೆಯಲಿದೆ ಎಂದು ನಾವು ಭಾವಿಸಿದ್ದೇವೆ. ಅಂತಿಮ ತೀರ್ಮಾನ ವರಿಷ್ಠರು ತೆಗೆದುಕೊಳ್ಳಲಿದ್ದಾರೆ.
–ಕಡಿದಾಳ್ ಗೋಪಾಲ್, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ
ಟಿಕೆಟ್ ಸಿಗದೇ ಮುನಿಸಿಕೊಂಡಿರುವ ಎಸ್.ಪಿ.ದಿನೇಶ್ ಅವರೊಂದಿಗೆ ನಾನೂ ಚರ್ಚಿಸಿರುವೆ. ಪಕ್ಷದ ಹೈಕಮಾಂಡ್ ಕೂಡ ಸಂಧಾನದಲ್ಲಿ ತೊಡಗಿದೆ. ಅವರು ಕಣದಿಂದ ಹಿಂದಕ್ಕೆ ಸರಿಯುವ ವಿಶ್ವಾಸವಿದೆ.