ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ: ಉಂಬಳೇಬೈಲು ಸುತ್ತಮುತ್ತ ಆನೆಗಳ ಹಾವಳಿ

Last Updated 19 ಸೆಪ್ಟೆಂಬರ್ 2020, 10:05 IST
ಅಕ್ಷರ ಗಾತ್ರ

ಶಿವಮೊಗ್ಗ: ಉಂಬಳೇಬೈಲು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದೆ.

ಹುರುಳಿ ಹಳ್ಳಿ ಗ್ರಾಮದ ರೈತ ಮಂಜಣ್ಣ ಅವರ ತೆಂಗು, ಅಡಿಕೆ ತೋಟಕ್ಕೆ ಶುಕ್ರವಾರ ರಾತ್ರಿ ನುಗ್ಗಿದ ಆನೆಗಳ ಹಿಂಡು ತೆಂಗು, ಅಡಿಕೆ ಗಿಡಗಳನ್ನು ಮುರಿದು ಹಾಕಿವೆ. ಅದೇ ಊರಿನ ರೈತ ಕೃಷ್ಣಪ್ಪ ಅವರ ಭತ್ತದ ಬೆಳೆ ಸಂಪೂರ್ಣ ಹಾಳು ಮಾಡಿವೆ. ಆನೆಗಳ ದಾಳಿಯಿಂದ ರೈತರು ಕಂಗಾಲಾಗಿದ್ದಾರೆ.

ಪ್ರತಿ ವರ್ಷವೂ ರೈತರ ಜಮೀನುಗಳಿಗೆ ಆನೆಗಳು ನುಗ್ಗಿ ಬೆಳೆ ಹಾಳು ಮಾಡುತ್ತಿವೆ. ಅರಣ್ಯ ಅಧಿಕಾರಿಗಳು ಮುಂಜಾಗ್ರತಾ ಕ್ರಮವನ್ನು ಕೈಗೊಳ್ಳುತ್ತಿಲ್ಲ. ತಕ್ಷಣ ಕ್ರಮವನ್ನು ಕೈಗೊಳ್ಳಬೇಕು. ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT