<p><strong>ಶಿವಮೊಗ್ಗ</strong>: ಶಿವಮೊಗ್ಗ ದಸರಾದಲ್ಲಿ ಪಾಲ್ಗೊಂಡಿದ್ದ ಆನೆ ಬಾಲಣ್ಣ ಸೇರಿದಂತೆ ಇಲ್ಲಿನ ಸಕ್ರೆಬೈಲು ಶಿಬಿರದ ನಾಲ್ಕು ಆನೆಗಳು ಕಾಡಾನೆ ದಾಳಿ ಹಾಗೂ ಚುಚ್ಚುಮದ್ದು ನೀಡುವಾಗ ಆದ ತಪ್ಪಿನಿಂದ ಗಾಯಗೊಂಡಿರುವುದನ್ನು ಅರಣ್ಯ ಸಚಿವ ಈಶ್ವರ ಬಿ.ಖಂಡ್ರೆ ಗಂಭೀರವಾಗಿ ಪರಿಗಣಿಸಿದ್ದಾರೆ. ಈ ಕುರಿತು ವಾರದೊಳಗೆ ವರದಿ ನೀಡುವಂತೆ ಸೂಚಿಸಿ ಪತ್ರ ಬರೆದಿದ್ದಾರೆ.</p>.<p>ಚುಚ್ಚುಮದ್ದು ನೀಡುವಾಗ ಪ್ರಮಾದ ಆಗಿದ್ದರೆ ನಿರ್ಲಕ್ಷ್ಯ ತೋರಿದ ವೈದ್ಯರು ಹಾಗೂ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಾಗೂ ಸಕ್ರೆಬೈಲು ಆನೆ ಶಿಬಿರಕ್ಕೆ ಗುತ್ತಿಗೆ ಇಲ್ಲವೇ ನಿಯೋಜನೆ ಮೇಲೆ ವೈದ್ಯರ ನೇಮಕ ಮಾಡಿಕೊಳ್ಳುವಂತೆ ಪತ್ರದಲ್ಲಿ ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ</strong>: ಶಿವಮೊಗ್ಗ ದಸರಾದಲ್ಲಿ ಪಾಲ್ಗೊಂಡಿದ್ದ ಆನೆ ಬಾಲಣ್ಣ ಸೇರಿದಂತೆ ಇಲ್ಲಿನ ಸಕ್ರೆಬೈಲು ಶಿಬಿರದ ನಾಲ್ಕು ಆನೆಗಳು ಕಾಡಾನೆ ದಾಳಿ ಹಾಗೂ ಚುಚ್ಚುಮದ್ದು ನೀಡುವಾಗ ಆದ ತಪ್ಪಿನಿಂದ ಗಾಯಗೊಂಡಿರುವುದನ್ನು ಅರಣ್ಯ ಸಚಿವ ಈಶ್ವರ ಬಿ.ಖಂಡ್ರೆ ಗಂಭೀರವಾಗಿ ಪರಿಗಣಿಸಿದ್ದಾರೆ. ಈ ಕುರಿತು ವಾರದೊಳಗೆ ವರದಿ ನೀಡುವಂತೆ ಸೂಚಿಸಿ ಪತ್ರ ಬರೆದಿದ್ದಾರೆ.</p>.<p>ಚುಚ್ಚುಮದ್ದು ನೀಡುವಾಗ ಪ್ರಮಾದ ಆಗಿದ್ದರೆ ನಿರ್ಲಕ್ಷ್ಯ ತೋರಿದ ವೈದ್ಯರು ಹಾಗೂ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಾಗೂ ಸಕ್ರೆಬೈಲು ಆನೆ ಶಿಬಿರಕ್ಕೆ ಗುತ್ತಿಗೆ ಇಲ್ಲವೇ ನಿಯೋಜನೆ ಮೇಲೆ ವೈದ್ಯರ ನೇಮಕ ಮಾಡಿಕೊಳ್ಳುವಂತೆ ಪತ್ರದಲ್ಲಿ ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>