<p><strong>ಶಿವಮೊಗ್ಗ:</strong> ಇಲ್ಲಿನ ಮಹಾನಗರ ಪಾಲಿಕೆ ಆಯೋಜಿಸಿದ್ದ ದಸರಾ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲು ಕರೆತಂದಿದ್ದ ಸಕ್ರೆಬೈಲಿನ ಆನೆ ನೇತ್ರಾವತಿ (27) ಸೋಮವಾರ ತಡರಾತ್ರಿ ಹೆಣ್ಣು ಮರಿಗೆ ಜನ್ಮನೀಡಿದೆ. ಈ ಹಿನ್ನೆಲೆಯಲ್ಲಿ ಇದರಿಂದ ದಸರಾ ಭಾಗವಾದ ಸಾಂಪ್ರದಾಯಿಕ ಜಂಬೂಸವಾರಿ ಮೆರವಣಿಗೆಯನ್ನು ರದ್ದುಪಡಿಸಲಾಯಿತು.</p>.<p>ದಸರಾ ಮೆರವಣಿಗೆಗೆ ಕರೆತಂದಿದ್ದ ಮೂರು ಆನೆಗಳನ್ನು ವಾಸವಿ ಶಾಲೆ ಆವರಣದಲ್ಲಿ ಬೀಡುಬಿಟ್ಟಿದ್ದವು. ಅಲ್ಲಿಯೇ ಮರಿಯ ಜನನವಾಗಿದೆ. ತಾಯಿ ಆನೆ ಮತ್ತು ಮರಿ ಆನೆ ಆರೋಗ್ಯವಾಗಿವೆ.</p>.<p>ವಿಷಯ ತಿಳಿದು ಶಿವಮೊಗ್ಗ ವನ್ಯಜೀವಿ ವಿಭಾಗದ ಡಿಸಿಎಫ್ ಪ್ರಸನ್ನಕೃಷ್ಣ ಪಟಗಾರ ಹಾಗೂ ವೈದ್ಯ ಡಾ.ವಿನಯ್ ಸ್ಥಳಕ್ಕೆ ಬಂದು ಪರಿಶೀಲಿಸಿ ನೇತ್ರಾವತಿಯನ್ನು ಮರಿಯೊಂದಿಗೆ ಲಾರಿಯಲ್ಲಿ ಸಕ್ರೆಬೈಲು ಬಿಡಾರಕ್ಕೆ ಕರೆದೊಯ್ಯಲು ವ್ಯವಸ್ಥೆ ಮಾಡಿದರು.</p>.<p>ಜಂಬೂ ಸವಾರಿ ರದ್ದು: ಅಂಬಾರಿ ಹೊರಲಿದ್ದ ‘ಸಾಗರ‘ ಆನೆಯ ಅಕ್ಕಪಕ್ಕ ಎರಡು ಆನೆಗಳು ಇಲ್ಲದ್ದರಿಂದ ಜಂಬೂಸವಾರಿ ರದ್ದುಗೊಳಿಸಿದ ಮಹಾನಗರ ಪಾಲಿಕೆ ಆಡಳಿತ, ಭುವನೇಶ್ವರಿ ಪುತ್ಥಳಿಯನ್ನು ವಾಹನದ ಮೂಲಕ ಮೆರವಣಿಗೆ ನಡೆಸಲು ನಿರ್ಧರಿಸಿತು. ಮೆರವಣಿಗೆಯಲ್ಲಿ ಸಾಗರ ಹಾಗೂ ಹೇಮಾವತಿ ಪಾಲ್ಗೊಂಡಿದ್ದವು.</p>.<p>ಮಾಹಿತಿ ಇರಲಿಲ್ಲ: ಜಂಬೂಸವಾರಿಗೆ ನೇತ್ರಾವತಿಯನ್ನು ಕರೆತಂದರೂ ಅದು ಗರ್ಭ ಧರಿಸಿರುವ ಮಾಹಿತಿ ಸಕ್ರೆಬೈಲು ಆನೆ ಬಿಡಾರದ ಮಾವುತ ಹಾಗೂ ವೈದ್ಯರಿಗೆ ಇರಲಿಲ್ಲ ಎಂಬುದು ಚರ್ಚೆಗೆ ಗ್ರಾಸವಾಗಿದೆ. ಗರ್ಭ ಧರಿಸಿದ್ದ ಆನೆಯನ್ನೇ ಕರೆತಂದು ತಾಲೀಮು ನಡೆಸಲಾಗಿದೆ ಎಂಬ ಆಕ್ರೋಶವೂ ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತವಾಗಿದೆ.</p>.<p>ಮೈಸೂರು ದಸರಾ ಜಂಬೂ ಸವಾರಿಗೆ ಆನೆಗಳ ಆಯ್ಕೆ ಪ್ರಕ್ರಿಯೆ ನಡೆದಿತ್ತು. ಆಗ ಆರೋಗ್ಯ ಪರೀಕ್ಷೆ ನಡೆದಿದ್ದು, ನೇತ್ರಾವತಿ ಗರ್ಭಿಣಿ ಎಂಬುದು ಗೊತ್ತಾಗಿರಲಿಲ್ಲ. ಶಿವಮೊಗ್ಗ ದಸರಾ ಹಿನ್ನೆಲೆಯಲ್ಲಿ ನೇತ್ರಾವತಿಯನ್ನು ಮೈಸೂರಿಗೆ ಕಳುಹಿಸಿರಲಿಲ್ಲ ಎಂದು ಆನೆ ಬಿಡಾರದ ಸಿಬ್ಬಂದಿ ಹೇಳುತ್ತಾರೆ.</p>.<p>ನೇತ್ರಾವತಿ ಈಗ 5ನೇ ಬಾರಿಗೆ ಮರಿ ಹಾಕಿದೆ. ಇದರೊಂದಿಗೆ ಸಕ್ರೆಬೈಲಿನ ಬಿಡಾರದಲ್ಲಿ ಆನೆಗಳ ಸಂಖ್ಯೆ 21ಕ್ಕೆ ಏರಿಕೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಇಲ್ಲಿನ ಮಹಾನಗರ ಪಾಲಿಕೆ ಆಯೋಜಿಸಿದ್ದ ದಸರಾ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲು ಕರೆತಂದಿದ್ದ ಸಕ್ರೆಬೈಲಿನ ಆನೆ ನೇತ್ರಾವತಿ (27) ಸೋಮವಾರ ತಡರಾತ್ರಿ ಹೆಣ್ಣು ಮರಿಗೆ ಜನ್ಮನೀಡಿದೆ. ಈ ಹಿನ್ನೆಲೆಯಲ್ಲಿ ಇದರಿಂದ ದಸರಾ ಭಾಗವಾದ ಸಾಂಪ್ರದಾಯಿಕ ಜಂಬೂಸವಾರಿ ಮೆರವಣಿಗೆಯನ್ನು ರದ್ದುಪಡಿಸಲಾಯಿತು.</p>.<p>ದಸರಾ ಮೆರವಣಿಗೆಗೆ ಕರೆತಂದಿದ್ದ ಮೂರು ಆನೆಗಳನ್ನು ವಾಸವಿ ಶಾಲೆ ಆವರಣದಲ್ಲಿ ಬೀಡುಬಿಟ್ಟಿದ್ದವು. ಅಲ್ಲಿಯೇ ಮರಿಯ ಜನನವಾಗಿದೆ. ತಾಯಿ ಆನೆ ಮತ್ತು ಮರಿ ಆನೆ ಆರೋಗ್ಯವಾಗಿವೆ.</p>.<p>ವಿಷಯ ತಿಳಿದು ಶಿವಮೊಗ್ಗ ವನ್ಯಜೀವಿ ವಿಭಾಗದ ಡಿಸಿಎಫ್ ಪ್ರಸನ್ನಕೃಷ್ಣ ಪಟಗಾರ ಹಾಗೂ ವೈದ್ಯ ಡಾ.ವಿನಯ್ ಸ್ಥಳಕ್ಕೆ ಬಂದು ಪರಿಶೀಲಿಸಿ ನೇತ್ರಾವತಿಯನ್ನು ಮರಿಯೊಂದಿಗೆ ಲಾರಿಯಲ್ಲಿ ಸಕ್ರೆಬೈಲು ಬಿಡಾರಕ್ಕೆ ಕರೆದೊಯ್ಯಲು ವ್ಯವಸ್ಥೆ ಮಾಡಿದರು.</p>.<p>ಜಂಬೂ ಸವಾರಿ ರದ್ದು: ಅಂಬಾರಿ ಹೊರಲಿದ್ದ ‘ಸಾಗರ‘ ಆನೆಯ ಅಕ್ಕಪಕ್ಕ ಎರಡು ಆನೆಗಳು ಇಲ್ಲದ್ದರಿಂದ ಜಂಬೂಸವಾರಿ ರದ್ದುಗೊಳಿಸಿದ ಮಹಾನಗರ ಪಾಲಿಕೆ ಆಡಳಿತ, ಭುವನೇಶ್ವರಿ ಪುತ್ಥಳಿಯನ್ನು ವಾಹನದ ಮೂಲಕ ಮೆರವಣಿಗೆ ನಡೆಸಲು ನಿರ್ಧರಿಸಿತು. ಮೆರವಣಿಗೆಯಲ್ಲಿ ಸಾಗರ ಹಾಗೂ ಹೇಮಾವತಿ ಪಾಲ್ಗೊಂಡಿದ್ದವು.</p>.<p>ಮಾಹಿತಿ ಇರಲಿಲ್ಲ: ಜಂಬೂಸವಾರಿಗೆ ನೇತ್ರಾವತಿಯನ್ನು ಕರೆತಂದರೂ ಅದು ಗರ್ಭ ಧರಿಸಿರುವ ಮಾಹಿತಿ ಸಕ್ರೆಬೈಲು ಆನೆ ಬಿಡಾರದ ಮಾವುತ ಹಾಗೂ ವೈದ್ಯರಿಗೆ ಇರಲಿಲ್ಲ ಎಂಬುದು ಚರ್ಚೆಗೆ ಗ್ರಾಸವಾಗಿದೆ. ಗರ್ಭ ಧರಿಸಿದ್ದ ಆನೆಯನ್ನೇ ಕರೆತಂದು ತಾಲೀಮು ನಡೆಸಲಾಗಿದೆ ಎಂಬ ಆಕ್ರೋಶವೂ ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತವಾಗಿದೆ.</p>.<p>ಮೈಸೂರು ದಸರಾ ಜಂಬೂ ಸವಾರಿಗೆ ಆನೆಗಳ ಆಯ್ಕೆ ಪ್ರಕ್ರಿಯೆ ನಡೆದಿತ್ತು. ಆಗ ಆರೋಗ್ಯ ಪರೀಕ್ಷೆ ನಡೆದಿದ್ದು, ನೇತ್ರಾವತಿ ಗರ್ಭಿಣಿ ಎಂಬುದು ಗೊತ್ತಾಗಿರಲಿಲ್ಲ. ಶಿವಮೊಗ್ಗ ದಸರಾ ಹಿನ್ನೆಲೆಯಲ್ಲಿ ನೇತ್ರಾವತಿಯನ್ನು ಮೈಸೂರಿಗೆ ಕಳುಹಿಸಿರಲಿಲ್ಲ ಎಂದು ಆನೆ ಬಿಡಾರದ ಸಿಬ್ಬಂದಿ ಹೇಳುತ್ತಾರೆ.</p>.<p>ನೇತ್ರಾವತಿ ಈಗ 5ನೇ ಬಾರಿಗೆ ಮರಿ ಹಾಕಿದೆ. ಇದರೊಂದಿಗೆ ಸಕ್ರೆಬೈಲಿನ ಬಿಡಾರದಲ್ಲಿ ಆನೆಗಳ ಸಂಖ್ಯೆ 21ಕ್ಕೆ ಏರಿಕೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>