<p><strong>ಹೊಳೆಹೊನ್ನೂರು</strong>: ಶಿವಾಜಿಯ ಪುತ್ಥಳಿಗಳು ವಿದೇಶದಲ್ಲೂ ಸ್ಥಾಪನೆಯಾಗಿವೆ. ಮಹಾಪುರುಷರು ಮಾತ್ರ ಸಾಧನೆಯಿಂದ ಜಗತ್ತಿನಾದ್ಯಂತ ಗುರುತಿಸಿಕೊಳ್ಳುತ್ತಾರೆ ಎಂದು ಮರಾಠ ಜಗದ್ಗುರು ವೇದಾಂತಾಚಾರ್ಯ ಮಂಜುನಾಥ ಸ್ವಾಮೀಜಿ<br />ಹೇಳಿದರು.</p>.<p>ಸಮೀಪದ ಕೆರೆಬೀರನಹಳ್ಳಿಯಲ್ಲಿ ಮಂಗಳವಾರ ಛತ್ರಪತಿ ಶಿವಾಜಿ ಮಹಾರಾಜರ ಕಂಚಿನ ಪುತ್ಥಳಿ ಅನಾವರಣ ಸಮಾರಂಭದಲ್ಲಿ ಮಾತನಾಡಿದರು.</p>.<p>‘ಮಕ್ಕಳಲ್ಲಿ ಹಿರಿಯರಿಗೆ ಗೌರವ ನೀಡುವುದನ್ನು ರೂಢಿಸಬೇಕು. ಗಂಟೆಗೆ ಬಂಗಾರದ ಬೆಲೆ ನೀಡಿ ಸದ್ಬಳಕೆ ಮಾಡಿಕೊಂಡರೆ ಭವಿಷ್ಯ ಉಜ್ವಲವಾಗುತ್ತದೆ.ಗ್ರಾಮಗಳಲ್ಲಿ ಮಹಾಪುರುಷರ ಪುತ್ಥಳಿಗಳನ್ನು ಸ್ಥಾಪಿಸಿ ದಾರ್ಶನಿಕರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಧರ್ಮ ಮಾರ್ಗದಲ್ಲಿ ನಡೆಯಬೇಕು’ ಎಂದು ಸಲಹೆ ನೀಡಿದರು.</p>.<p>ಆಧುನಿಕತೆಯ ಭರಾಟೆಗೆ ಸಿಲುಕಿ ನಗರಗಳಲ್ಲಿ ಸಂಸ್ಕೃತಿ ಮರೆಯಾಗುತ್ತಿದೆ. ಹಳ್ಳಿ ಜೀವನ ನೆಮ್ಮದಿ ನೀಡುತ್ತದೆ. ಅನ್ಯ ಧರ್ಮೀಯರೊಂದಿಗೆ ಹೊಂದಿಕೊಂಡು ಹೋಗುವ ಗುಣ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.</p>.<p>ಗ್ರಾಮಾಂತರ ಶಾಸಕ ಕೆ.ಬಿ. ಅಶೋಕ್ನಾಯ್ಕ, ‘ಈ ಬಾರಿ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಗಮನಸೆಳೆದು ಮರಾಠ ಸಮಾಜಕ್ಕೆ ಪ್ರತ್ಯೇಕ ನಿಗಮ ಸ್ಥಾಪನೆಗೆ ಒತ್ತಾಯಿಸಲಾಗುವುದು. ಶಿವಾಜಿ ಮಹಾರಾಜರು ಒಂದು ಧರ್ಮಕ್ಕೆ ಮಾತ್ರ ಸಿಮೀತವಲ್ಲ. ದಾರ್ಶನಿಕರ ತತ್ವ, ಸಿದ್ಧಾಂಗಳನ್ನು ಅಳವಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಮಾಜಿ ಶಾಸಕಿ ಶಾರದ ಪೂರ್ಯಾನಾಯ್ಕ್, ಎಪಿಎಂಸಿ ಅಧ್ಯಕ್ಷ ಸತೀಶ್, ಮೂಡಬಾಗಿಲು ಚಂದ್ರಶೇಖರ್ ಮಾತನಾಡಿದರು.</p>.<p>ತಾಲ್ಲೂಕು ಮರಾಠ ಸಂಘದ ಅಧ್ಯಕ್ಷ ಯಶವಂತರಾವ್ ಘೋರ್ಪಡೆ, ಗ್ರಾಮ ಸಮಿತಿ ಅಧ್ಯಕ್ಷ ಯಲ್ಲೋಜಿರಾವ್ ಗಡದೆ, ಮುಖಂಡರಾದ ಜಿ.ಎನ್. ಪರುಶುರಾಮ್, ಸಚಿನ್ ಸಿಂಧ್ಯಾ, ರಾಮಚಂದ್ರರಾವ್ ಕದಂ, ರಾಜರಾವ್ ಗಡದೆ, ಪರುಶುರಾಮ್ ಪವಾರ್, ನಾಗರಾಜ್ರಾವ್, ರಂಗಪ್ಪಮದ್ನೆ,ರವಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಳೆಹೊನ್ನೂರು</strong>: ಶಿವಾಜಿಯ ಪುತ್ಥಳಿಗಳು ವಿದೇಶದಲ್ಲೂ ಸ್ಥಾಪನೆಯಾಗಿವೆ. ಮಹಾಪುರುಷರು ಮಾತ್ರ ಸಾಧನೆಯಿಂದ ಜಗತ್ತಿನಾದ್ಯಂತ ಗುರುತಿಸಿಕೊಳ್ಳುತ್ತಾರೆ ಎಂದು ಮರಾಠ ಜಗದ್ಗುರು ವೇದಾಂತಾಚಾರ್ಯ ಮಂಜುನಾಥ ಸ್ವಾಮೀಜಿ<br />ಹೇಳಿದರು.</p>.<p>ಸಮೀಪದ ಕೆರೆಬೀರನಹಳ್ಳಿಯಲ್ಲಿ ಮಂಗಳವಾರ ಛತ್ರಪತಿ ಶಿವಾಜಿ ಮಹಾರಾಜರ ಕಂಚಿನ ಪುತ್ಥಳಿ ಅನಾವರಣ ಸಮಾರಂಭದಲ್ಲಿ ಮಾತನಾಡಿದರು.</p>.<p>‘ಮಕ್ಕಳಲ್ಲಿ ಹಿರಿಯರಿಗೆ ಗೌರವ ನೀಡುವುದನ್ನು ರೂಢಿಸಬೇಕು. ಗಂಟೆಗೆ ಬಂಗಾರದ ಬೆಲೆ ನೀಡಿ ಸದ್ಬಳಕೆ ಮಾಡಿಕೊಂಡರೆ ಭವಿಷ್ಯ ಉಜ್ವಲವಾಗುತ್ತದೆ.ಗ್ರಾಮಗಳಲ್ಲಿ ಮಹಾಪುರುಷರ ಪುತ್ಥಳಿಗಳನ್ನು ಸ್ಥಾಪಿಸಿ ದಾರ್ಶನಿಕರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಧರ್ಮ ಮಾರ್ಗದಲ್ಲಿ ನಡೆಯಬೇಕು’ ಎಂದು ಸಲಹೆ ನೀಡಿದರು.</p>.<p>ಆಧುನಿಕತೆಯ ಭರಾಟೆಗೆ ಸಿಲುಕಿ ನಗರಗಳಲ್ಲಿ ಸಂಸ್ಕೃತಿ ಮರೆಯಾಗುತ್ತಿದೆ. ಹಳ್ಳಿ ಜೀವನ ನೆಮ್ಮದಿ ನೀಡುತ್ತದೆ. ಅನ್ಯ ಧರ್ಮೀಯರೊಂದಿಗೆ ಹೊಂದಿಕೊಂಡು ಹೋಗುವ ಗುಣ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.</p>.<p>ಗ್ರಾಮಾಂತರ ಶಾಸಕ ಕೆ.ಬಿ. ಅಶೋಕ್ನಾಯ್ಕ, ‘ಈ ಬಾರಿ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಗಮನಸೆಳೆದು ಮರಾಠ ಸಮಾಜಕ್ಕೆ ಪ್ರತ್ಯೇಕ ನಿಗಮ ಸ್ಥಾಪನೆಗೆ ಒತ್ತಾಯಿಸಲಾಗುವುದು. ಶಿವಾಜಿ ಮಹಾರಾಜರು ಒಂದು ಧರ್ಮಕ್ಕೆ ಮಾತ್ರ ಸಿಮೀತವಲ್ಲ. ದಾರ್ಶನಿಕರ ತತ್ವ, ಸಿದ್ಧಾಂಗಳನ್ನು ಅಳವಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಮಾಜಿ ಶಾಸಕಿ ಶಾರದ ಪೂರ್ಯಾನಾಯ್ಕ್, ಎಪಿಎಂಸಿ ಅಧ್ಯಕ್ಷ ಸತೀಶ್, ಮೂಡಬಾಗಿಲು ಚಂದ್ರಶೇಖರ್ ಮಾತನಾಡಿದರು.</p>.<p>ತಾಲ್ಲೂಕು ಮರಾಠ ಸಂಘದ ಅಧ್ಯಕ್ಷ ಯಶವಂತರಾವ್ ಘೋರ್ಪಡೆ, ಗ್ರಾಮ ಸಮಿತಿ ಅಧ್ಯಕ್ಷ ಯಲ್ಲೋಜಿರಾವ್ ಗಡದೆ, ಮುಖಂಡರಾದ ಜಿ.ಎನ್. ಪರುಶುರಾಮ್, ಸಚಿನ್ ಸಿಂಧ್ಯಾ, ರಾಮಚಂದ್ರರಾವ್ ಕದಂ, ರಾಜರಾವ್ ಗಡದೆ, ಪರುಶುರಾಮ್ ಪವಾರ್, ನಾಗರಾಜ್ರಾವ್, ರಂಗಪ್ಪಮದ್ನೆ,ರವಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>