<p><strong>ಶಿವಮೊಗ್ಗ</strong>: ಹಾವೇರಿ ಬಳಿ ಈಚೆಗೆ ನಡೆದ ಅಪಘಾತದಲ್ಲಿ ಸಾವಿಗೀಡಾಗಿದ್ದ ಭದ್ರಾವತಿ ತಾಲ್ಲೂಕಿನ ಎಮ್ಮೇಹಟ್ಟಿಯ 13 ಮಂದಿ ಹಾಗೂ ಇಬ್ಬರು ಗಾಯಾಳುಗಳಿಗೆ ನಟ ಶಿವರಾಜಕುಮಾರ್ ಹಾಗೂ ಗೀತಾ ದಂಪತಿ ಸೋಮವಾರ ವೈಯಕ್ತಿಕವಾಗಿ ₹13 ಲಕ್ಷ ಪರಿಹಾರ ವಿತರಣೆ ಮಾಡಿದರು.</p><p>ಎಮ್ಮೇಹಟ್ಟಿಯ ಮೃತರ ಮನೆಗಳಿಗೆ ಮಳೆಯ ನಡುವೆ ಭೇಟಿ ನೀಡಿದ ಶಿವರಾಜಕುಮಾರ್-ಗೀತಾ ದಂಪತಿ ಕುಟುಂಬಸ್ಥರ ಅಳಲು ಆಲಿಸಿದರು. ಸಾಂತ್ವನ ಹೇಳಿದರು.</p><p>ಅಪಘಾತದಲ್ಲಿ ಸಾವಿಗೀಡಾದವರ ಕುಟುಂಬಗಳ ಸದ್ಯದ ಸ್ಥಿತಿಗತಿ, ಬದುಕಿ ಉಳಿದವರ ಪರಿಸ್ಥಿತಿಯ ಬಗ್ಗೆಯೂ ಗ್ರಾಮಸ್ಥರಿಂದ ಮಾಹಿತಿ ಪಡೆದರು.</p><p>ಅಪಘಾತದಲ್ಲಿ ಸಾವಿಗೀಡಾದ 13 ಮಂದಿಗೆ ₹10 ಲಕ್ಷ ಹಾಗೂ ಬದುಕುಳಿದು ಶಿವಮೊಗ್ಗದ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇಬ್ಬರಿಗೆ ಚಿಕಿತ್ಸಾ ವೆಚ್ಚವಾಗಿ ತಲಾ ₹1.5 ಲಕ್ಷ ನಗದು ಹಣ ನೀಡಿದರು.</p><p>ಈ ವೇಳೆ ಮಾತನಾಡಿದ ಶಿವರಾಜಕುಮಾರ್, ಹಣ ಕೊಟ್ಟ ತಕ್ಷಣ ಅವರ ಬದುಕಿಗೆ ಆಸರೆ ಆಗುವುದಿಲ್ಲ. ಕುಟುಂಬಸ್ಥರಿಗೆ ಶಾಶ್ವತ ನೆರವು ಕೊಡುವ ಅಗತ್ಯವಿದೆ. ಆ ನಿಟ್ಟಿನಲ್ಲಿ ಸಾವಿಗೀಡಾದವರ ಕುಟುಂಬದ ಮಕ್ಕಳ ಶಿಕ್ಷಣಕ್ಕೆ ನೆರವು ನೀಡುವುದಾಗಿ ಹೇಳಿದರು.</p><p>ಅಪಘಾತದ ನಂತರ ಸಾವಿಗೀಡಾದವರ ಕುಟುಂಬಗಳಿಗೆ ನೆರವು ಹಾಗೂ ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸುವಲ್ಲಿ ಗ್ರಾಮಸ್ಥರು ತೋರಿದ ಕಾಳಜಿಯನ್ನು ಗೀತಾ ಶಿವರಾಜಕುಮಾರ್ ಶ್ಲಾಘಿಸಿದರು. </p><p>ಕುಟುಂಬದ ಎಲ್ಲ ಸದಸ್ಯರನ್ನು ಕಳೆದುಕೊಂಡಿರುವ ಅಂಗವಿಕಲೆ ಅರ್ಪಿತಾ ಭವಿಷ್ಯಕ್ಕೆ ನೆರವಾಗುವ ಭರವಸೆ ನೀಡಿದರು.</p><p>ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ, ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಆರ್.ಪ್ರಸನ್ನಕುಮಾರ್, ಪಕ್ಷದ ಜಿಲ್ಲಾ ಹಿಂದುಳಿದ ವರ್ಗಗಳ ಸಮಿತಿ ಪ್ರಧಾನ ಕಾರ್ಯದರ್ಶಿ ಜಿ.ಡಿ.ಮಂಜುನಾಥ್ ಈ ವೇಳೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ</strong>: ಹಾವೇರಿ ಬಳಿ ಈಚೆಗೆ ನಡೆದ ಅಪಘಾತದಲ್ಲಿ ಸಾವಿಗೀಡಾಗಿದ್ದ ಭದ್ರಾವತಿ ತಾಲ್ಲೂಕಿನ ಎಮ್ಮೇಹಟ್ಟಿಯ 13 ಮಂದಿ ಹಾಗೂ ಇಬ್ಬರು ಗಾಯಾಳುಗಳಿಗೆ ನಟ ಶಿವರಾಜಕುಮಾರ್ ಹಾಗೂ ಗೀತಾ ದಂಪತಿ ಸೋಮವಾರ ವೈಯಕ್ತಿಕವಾಗಿ ₹13 ಲಕ್ಷ ಪರಿಹಾರ ವಿತರಣೆ ಮಾಡಿದರು.</p><p>ಎಮ್ಮೇಹಟ್ಟಿಯ ಮೃತರ ಮನೆಗಳಿಗೆ ಮಳೆಯ ನಡುವೆ ಭೇಟಿ ನೀಡಿದ ಶಿವರಾಜಕುಮಾರ್-ಗೀತಾ ದಂಪತಿ ಕುಟುಂಬಸ್ಥರ ಅಳಲು ಆಲಿಸಿದರು. ಸಾಂತ್ವನ ಹೇಳಿದರು.</p><p>ಅಪಘಾತದಲ್ಲಿ ಸಾವಿಗೀಡಾದವರ ಕುಟುಂಬಗಳ ಸದ್ಯದ ಸ್ಥಿತಿಗತಿ, ಬದುಕಿ ಉಳಿದವರ ಪರಿಸ್ಥಿತಿಯ ಬಗ್ಗೆಯೂ ಗ್ರಾಮಸ್ಥರಿಂದ ಮಾಹಿತಿ ಪಡೆದರು.</p><p>ಅಪಘಾತದಲ್ಲಿ ಸಾವಿಗೀಡಾದ 13 ಮಂದಿಗೆ ₹10 ಲಕ್ಷ ಹಾಗೂ ಬದುಕುಳಿದು ಶಿವಮೊಗ್ಗದ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇಬ್ಬರಿಗೆ ಚಿಕಿತ್ಸಾ ವೆಚ್ಚವಾಗಿ ತಲಾ ₹1.5 ಲಕ್ಷ ನಗದು ಹಣ ನೀಡಿದರು.</p><p>ಈ ವೇಳೆ ಮಾತನಾಡಿದ ಶಿವರಾಜಕುಮಾರ್, ಹಣ ಕೊಟ್ಟ ತಕ್ಷಣ ಅವರ ಬದುಕಿಗೆ ಆಸರೆ ಆಗುವುದಿಲ್ಲ. ಕುಟುಂಬಸ್ಥರಿಗೆ ಶಾಶ್ವತ ನೆರವು ಕೊಡುವ ಅಗತ್ಯವಿದೆ. ಆ ನಿಟ್ಟಿನಲ್ಲಿ ಸಾವಿಗೀಡಾದವರ ಕುಟುಂಬದ ಮಕ್ಕಳ ಶಿಕ್ಷಣಕ್ಕೆ ನೆರವು ನೀಡುವುದಾಗಿ ಹೇಳಿದರು.</p><p>ಅಪಘಾತದ ನಂತರ ಸಾವಿಗೀಡಾದವರ ಕುಟುಂಬಗಳಿಗೆ ನೆರವು ಹಾಗೂ ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸುವಲ್ಲಿ ಗ್ರಾಮಸ್ಥರು ತೋರಿದ ಕಾಳಜಿಯನ್ನು ಗೀತಾ ಶಿವರಾಜಕುಮಾರ್ ಶ್ಲಾಘಿಸಿದರು. </p><p>ಕುಟುಂಬದ ಎಲ್ಲ ಸದಸ್ಯರನ್ನು ಕಳೆದುಕೊಂಡಿರುವ ಅಂಗವಿಕಲೆ ಅರ್ಪಿತಾ ಭವಿಷ್ಯಕ್ಕೆ ನೆರವಾಗುವ ಭರವಸೆ ನೀಡಿದರು.</p><p>ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ, ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಆರ್.ಪ್ರಸನ್ನಕುಮಾರ್, ಪಕ್ಷದ ಜಿಲ್ಲಾ ಹಿಂದುಳಿದ ವರ್ಗಗಳ ಸಮಿತಿ ಪ್ರಧಾನ ಕಾರ್ಯದರ್ಶಿ ಜಿ.ಡಿ.ಮಂಜುನಾಥ್ ಈ ವೇಳೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>