<p><strong>ಸಾಗರ: ನಗರ ವ್ಯಾಪ್ತಿಯ ಪ್ರತಿ ವಾರ್ಡ್ಗಳಲ್ಲೂ ಸಭಾಭವನ ನಿರ್ಮಾಣಕ್ಕೆ ಒತ್ತು ನೀಡಲಾಗುವುದು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. </strong></p>.<p><strong>ನಗರದ ಅರಮನೆ ಕೇರಿಯಲ್ಲಿ ಬಿ.ಆರ್.ಅಂಬೇಡ್ಕರ್ ಸಭಾಭವನದ ಹೆಚ್ಚುವರಿ ಕಾಮಗಾರಿಗೆ ಸೋಮವಾರ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಸಣ್ಣ ಗಾತ್ರದ ಸಭಾಭವನವಿದ್ದರೆ ಆರ್ಥಿಕವಾಗಿ ಹಿಂದುಳಿದವರಿಗೆ ಕಾರ್ಯಕ್ರಮ ನಡೆಸಲು ಸಹಾಯವಾಗುತ್ತದೆ ಎಂದರು. </strong></p>.<p><strong>‘₹29 ಲಕ್ಷ ವೆಚ್ಚದಲ್ಲಿ ಅರಮನೆ ಕೇರಿಯ ಸಭಾಭವನವನ್ನು ಉನ್ನತೀಕರಣಗೊಳಿಸಲಾಗುತ್ತಿದೆ. ಅದೇ ರೀತಿ ನಗರದ ವಿವಿಧ ವಾರ್ಡ್ಗಳಲ್ಲಿ ಅಪೂರ್ಣಗೊಂಡಿರುವ ಸಭಾಭವನಗಳ ಕಾಮಗಾರಿಯನ್ನು ಚುರುಕುಗೊಳಿಸಲಾಗುವುದು’ ಎಂದು ಮಾಹಿತಿ ನೀಡಿದರು. </strong></p>.<p><strong>‘ನಗರದ ವಿವಿಧೆಡೆ ಎಲ್ಲೆಂದರಲ್ಲಿ ಕಸ ಎಸೆಯುವ ಪ್ರವೃತ್ತಿ ಹೆಚ್ಚುತ್ತಿದೆ. ಹೀಗೆ ಕಸ ಎಸೆಯುವ ಸ್ಥಳಗಳನ್ನು ಗುರುತಿಸಿ ಅಲ್ಲಿ ಸಿ.ಸಿ. ಟಿವಿ ಕ್ಯಾಮೆರಾ ಅಳವಡಿಸಲಾಗುವುದು. ಈ ಮೂಲಕ ಕಸ ಎಸೆಯುವವರನ್ನು ಗುರುತಿಸಿ ಅವರ ಮೇಲೆ ಕ್ರಮ ಕೈಗೊಳ್ಳಲಾಗುವುದು’ ಎಂದರು. </strong></p>.<p><strong>‘ಕೆಲವು ಬಡಾವಣೆಗಳಲ್ಲಿ ನಗರೋತ್ಥಾನ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳು ಆಮೆಗತಿಯಲ್ಲಿ ಸಾಗಿವೆ. ಮಳೆಗಾಲ ಆರಂಭವಾಗುವುದರೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಬೇಕು’ ಎಂದು ನಗರಸಭೆ ಅಧ್ಯಕ್ಷೆ ಮೈತ್ರಿ ಪಾಟೀಲ್ ಅಧಿಕಾರಿಗಳಿಗೆ ಸೂಚಿಸಿದರು. </strong></p>.<p><strong>ನಗರಸಭೆ ಉಪಾಧ್ಯಕ್ಷೆ ಸವಿತಾ ವಾಸು, ಸದಸ್ಯರಾದ ಗಣಪತಿ ಮಂಡಗಳಲೆ, ಸೈಯದ್ ಜಾಕೀರ್, ಮಧುಮಾಲತಿ, ಎಲ್.ಚಂದ್ರಪ್ಪ, ಪೌರಾಯುಕ್ತ ಎಚ್.ಕೆ.ನಾಗಪ್ಪ, ಪ್ರಮುಖರಾದ ನಾರಾಯಣ ಅರಮನೆಕೇರಿ, ಕಲಸೆ ಚಂದ್ರಪ್ಪ ಇದ್ದರು.</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ: ನಗರ ವ್ಯಾಪ್ತಿಯ ಪ್ರತಿ ವಾರ್ಡ್ಗಳಲ್ಲೂ ಸಭಾಭವನ ನಿರ್ಮಾಣಕ್ಕೆ ಒತ್ತು ನೀಡಲಾಗುವುದು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. </strong></p>.<p><strong>ನಗರದ ಅರಮನೆ ಕೇರಿಯಲ್ಲಿ ಬಿ.ಆರ್.ಅಂಬೇಡ್ಕರ್ ಸಭಾಭವನದ ಹೆಚ್ಚುವರಿ ಕಾಮಗಾರಿಗೆ ಸೋಮವಾರ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಸಣ್ಣ ಗಾತ್ರದ ಸಭಾಭವನವಿದ್ದರೆ ಆರ್ಥಿಕವಾಗಿ ಹಿಂದುಳಿದವರಿಗೆ ಕಾರ್ಯಕ್ರಮ ನಡೆಸಲು ಸಹಾಯವಾಗುತ್ತದೆ ಎಂದರು. </strong></p>.<p><strong>‘₹29 ಲಕ್ಷ ವೆಚ್ಚದಲ್ಲಿ ಅರಮನೆ ಕೇರಿಯ ಸಭಾಭವನವನ್ನು ಉನ್ನತೀಕರಣಗೊಳಿಸಲಾಗುತ್ತಿದೆ. ಅದೇ ರೀತಿ ನಗರದ ವಿವಿಧ ವಾರ್ಡ್ಗಳಲ್ಲಿ ಅಪೂರ್ಣಗೊಂಡಿರುವ ಸಭಾಭವನಗಳ ಕಾಮಗಾರಿಯನ್ನು ಚುರುಕುಗೊಳಿಸಲಾಗುವುದು’ ಎಂದು ಮಾಹಿತಿ ನೀಡಿದರು. </strong></p>.<p><strong>‘ನಗರದ ವಿವಿಧೆಡೆ ಎಲ್ಲೆಂದರಲ್ಲಿ ಕಸ ಎಸೆಯುವ ಪ್ರವೃತ್ತಿ ಹೆಚ್ಚುತ್ತಿದೆ. ಹೀಗೆ ಕಸ ಎಸೆಯುವ ಸ್ಥಳಗಳನ್ನು ಗುರುತಿಸಿ ಅಲ್ಲಿ ಸಿ.ಸಿ. ಟಿವಿ ಕ್ಯಾಮೆರಾ ಅಳವಡಿಸಲಾಗುವುದು. ಈ ಮೂಲಕ ಕಸ ಎಸೆಯುವವರನ್ನು ಗುರುತಿಸಿ ಅವರ ಮೇಲೆ ಕ್ರಮ ಕೈಗೊಳ್ಳಲಾಗುವುದು’ ಎಂದರು. </strong></p>.<p><strong>‘ಕೆಲವು ಬಡಾವಣೆಗಳಲ್ಲಿ ನಗರೋತ್ಥಾನ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳು ಆಮೆಗತಿಯಲ್ಲಿ ಸಾಗಿವೆ. ಮಳೆಗಾಲ ಆರಂಭವಾಗುವುದರೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಬೇಕು’ ಎಂದು ನಗರಸಭೆ ಅಧ್ಯಕ್ಷೆ ಮೈತ್ರಿ ಪಾಟೀಲ್ ಅಧಿಕಾರಿಗಳಿಗೆ ಸೂಚಿಸಿದರು. </strong></p>.<p><strong>ನಗರಸಭೆ ಉಪಾಧ್ಯಕ್ಷೆ ಸವಿತಾ ವಾಸು, ಸದಸ್ಯರಾದ ಗಣಪತಿ ಮಂಡಗಳಲೆ, ಸೈಯದ್ ಜಾಕೀರ್, ಮಧುಮಾಲತಿ, ಎಲ್.ಚಂದ್ರಪ್ಪ, ಪೌರಾಯುಕ್ತ ಎಚ್.ಕೆ.ನಾಗಪ್ಪ, ಪ್ರಮುಖರಾದ ನಾರಾಯಣ ಅರಮನೆಕೇರಿ, ಕಲಸೆ ಚಂದ್ರಪ್ಪ ಇದ್ದರು.</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>