<p><strong>ಸಾಗರ</strong>: ‘ಮಕ್ಕಳ ಮಾನಸಿಕ, ದೈಹಿಕ ಬೆಳವಣಿಗೆಗೆ ಪೂರಕವಾಗಿರುವ ಈಜು ಕಲಿಯಲು ಚಿಕ್ಕ ವಯಸ್ಸಿನಲ್ಲೇ ಮಕ್ಕಳಿಗೆ ಪೋಷಕರು ಪ್ರೋತ್ಸಾಹಿಸಬೇಕು’ ಎಂದು ನಗರಸಭೆ ಅಧ್ಯಕ್ಷೆ ಮೈತ್ರಿ ಪಾಟೀಲ್ ಹೇಳಿದರು.</p>.<p>ಇಲ್ಲಿನ ವಿಜಯನಗರ ಬಡಾವಣೆಯಲ್ಲಿರುವ ನಗರಸಭೆಯ ಈಜುಕೊಳದಲ್ಲಿ ಭಾನುವಾರ ನಡೆದ ಸಾಗರ- ಸಿದ್ದಾಪುರ ತಾಲ್ಲೂಕು ಮಟ್ಟದ ಈಜು ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಚಿಕ್ಕ ವಯಸ್ಸಿನಲ್ಲೇ ಮಕ್ಕಳು ಈಜು ಕಲಿಯಲು ಮುಂದಾದರೆ ಶೀಘ್ರವಾಗಿ ಅದರಲ್ಲಿ ಪರಿಣತಿ ಸಾಧಿಸುತ್ತಾರೆ’ ಎಂದರು.</p>.<p>‘ತಾಲ್ಲೂಕು ಕೇಂದ್ರದಲ್ಲಿ ನಗರಸಭೆ ವತಿಯಿಂದ ನಡೆಸುವ ಸುಸಜ್ಜಿತ ಈಜುಕೊಳ ಇರುವುದು ಈಜು ಪ್ರಿಯರಿಗೆ ವರದಾನವಾಗಿರುವ ಸಂಗತಿಯಾಗಿದೆ. ಆದಾಗ್ಯೂ ನಿರೀಕ್ಷಿತ ಸಂಖ್ಯೆಯಲ್ಲಿ ಈಜು ಕಲಿಯಲು ಮಕ್ಕಳು ಬರುತ್ತಿಲ್ಲ. ಈಜುಕೊಳದ ಸದುಪಯೋಗ ಪಡೆಯಲು ನಾಗರಿಕರು ಮುಂದಾಗಬೇಕು’ ಎಂದು ನಗರಸಭೆ ಉಪಾಧ್ಯಕ್ಷೆ ಸವಿತಾ ವಾಸು ಹೇಳಿದರು.</p>.<p>‘ದೇಹದ ಎಲ್ಲಾ ಅಂಗಗಳಿಗೆ ಏಕಕಾಲದಲ್ಲಿ ವ್ಯಾಯಾಮ ಕೊಡುವ ಕ್ರೀಡೆಯೆಂದರೆ ಅದು ಈಜು ಆಗಿದೆ. ಮತ್ತೊಬ್ಬರ ಪ್ರಾಣವನ್ನು ಉಳಿಸುವ ಶಕ್ತಿ ಸಾಮರ್ಥ್ಯವನ್ನು ಈಜು ನೀಡುತ್ತದೆ ಎಂಬುದನ್ನು ನಾವು ಮರೆಯಬಾರದು’ ಎಂದು ನಗರಸಭೆ ಸದಸ್ಯ ರವಿ ವಿಜಯನಗರ ಹೇಳಿದರು.</p>.<p>ಇದೇ ಸಂದರ್ಭದಲ್ಲಿ ಅಂತರರಾಷ್ಟ್ರೀಯ ಈಜುಪಟು ಶ್ಯಾಮ್ ಸುಂದರ್, ಈಜು ತರಬೇತುದಾರ ಹರೀಶ್ ನವಾತೆ ಅವರನ್ನು ಸನ್ಮಾನಿಸಲಾಯಿತು.</p>.<p>ನಗರಸಭೆ ಸದಸ್ಯ ಅರವಿಂದ ರಾಯ್ಕರ್, ಈಜು ತರಬೇತುದಾರ ಸಿದ್ದರಾಜು, ಐ.ಎನ್.ಸುರೇಶ್ ಬಾಬು, ಹರೀಶ್, ಡಿ.ದಿನೇಶ್, ಬಿ.ಗಿರಿಧರರಾವ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ</strong>: ‘ಮಕ್ಕಳ ಮಾನಸಿಕ, ದೈಹಿಕ ಬೆಳವಣಿಗೆಗೆ ಪೂರಕವಾಗಿರುವ ಈಜು ಕಲಿಯಲು ಚಿಕ್ಕ ವಯಸ್ಸಿನಲ್ಲೇ ಮಕ್ಕಳಿಗೆ ಪೋಷಕರು ಪ್ರೋತ್ಸಾಹಿಸಬೇಕು’ ಎಂದು ನಗರಸಭೆ ಅಧ್ಯಕ್ಷೆ ಮೈತ್ರಿ ಪಾಟೀಲ್ ಹೇಳಿದರು.</p>.<p>ಇಲ್ಲಿನ ವಿಜಯನಗರ ಬಡಾವಣೆಯಲ್ಲಿರುವ ನಗರಸಭೆಯ ಈಜುಕೊಳದಲ್ಲಿ ಭಾನುವಾರ ನಡೆದ ಸಾಗರ- ಸಿದ್ದಾಪುರ ತಾಲ್ಲೂಕು ಮಟ್ಟದ ಈಜು ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಚಿಕ್ಕ ವಯಸ್ಸಿನಲ್ಲೇ ಮಕ್ಕಳು ಈಜು ಕಲಿಯಲು ಮುಂದಾದರೆ ಶೀಘ್ರವಾಗಿ ಅದರಲ್ಲಿ ಪರಿಣತಿ ಸಾಧಿಸುತ್ತಾರೆ’ ಎಂದರು.</p>.<p>‘ತಾಲ್ಲೂಕು ಕೇಂದ್ರದಲ್ಲಿ ನಗರಸಭೆ ವತಿಯಿಂದ ನಡೆಸುವ ಸುಸಜ್ಜಿತ ಈಜುಕೊಳ ಇರುವುದು ಈಜು ಪ್ರಿಯರಿಗೆ ವರದಾನವಾಗಿರುವ ಸಂಗತಿಯಾಗಿದೆ. ಆದಾಗ್ಯೂ ನಿರೀಕ್ಷಿತ ಸಂಖ್ಯೆಯಲ್ಲಿ ಈಜು ಕಲಿಯಲು ಮಕ್ಕಳು ಬರುತ್ತಿಲ್ಲ. ಈಜುಕೊಳದ ಸದುಪಯೋಗ ಪಡೆಯಲು ನಾಗರಿಕರು ಮುಂದಾಗಬೇಕು’ ಎಂದು ನಗರಸಭೆ ಉಪಾಧ್ಯಕ್ಷೆ ಸವಿತಾ ವಾಸು ಹೇಳಿದರು.</p>.<p>‘ದೇಹದ ಎಲ್ಲಾ ಅಂಗಗಳಿಗೆ ಏಕಕಾಲದಲ್ಲಿ ವ್ಯಾಯಾಮ ಕೊಡುವ ಕ್ರೀಡೆಯೆಂದರೆ ಅದು ಈಜು ಆಗಿದೆ. ಮತ್ತೊಬ್ಬರ ಪ್ರಾಣವನ್ನು ಉಳಿಸುವ ಶಕ್ತಿ ಸಾಮರ್ಥ್ಯವನ್ನು ಈಜು ನೀಡುತ್ತದೆ ಎಂಬುದನ್ನು ನಾವು ಮರೆಯಬಾರದು’ ಎಂದು ನಗರಸಭೆ ಸದಸ್ಯ ರವಿ ವಿಜಯನಗರ ಹೇಳಿದರು.</p>.<p>ಇದೇ ಸಂದರ್ಭದಲ್ಲಿ ಅಂತರರಾಷ್ಟ್ರೀಯ ಈಜುಪಟು ಶ್ಯಾಮ್ ಸುಂದರ್, ಈಜು ತರಬೇತುದಾರ ಹರೀಶ್ ನವಾತೆ ಅವರನ್ನು ಸನ್ಮಾನಿಸಲಾಯಿತು.</p>.<p>ನಗರಸಭೆ ಸದಸ್ಯ ಅರವಿಂದ ರಾಯ್ಕರ್, ಈಜು ತರಬೇತುದಾರ ಸಿದ್ದರಾಜು, ಐ.ಎನ್.ಸುರೇಶ್ ಬಾಬು, ಹರೀಶ್, ಡಿ.ದಿನೇಶ್, ಬಿ.ಗಿರಿಧರರಾವ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>