<p><strong>ಸಾಗರ:</strong> ಪ್ರವಾಸೋದ್ಯಮವೆಂದರೆ ಕೇವಲ ಮೋಜು, ಮಸ್ತಿ ಮಾತ್ರವಲ್ಲ. ಪರಿಸರಕ್ಕೆ ಪೂರಕವಾಗಿಯೂ ಪ್ರವಾಸೋದ್ಯಮವನ್ನು ಬೆಳೆಸಲು ಸಾಧ್ಯವಿದೆ’ ಎಂದು ಬೆಂಗಳೂರಿನ ಅದಮ್ಯ ಚೇತನ ಸಂಸ್ಥೆ ಅಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್ ಹೇಳಿದರು.</p>.<p>ಇಲ್ಲಿನ ಹವ್ಯಕ ಅಭಿವೃದ್ಧಿ ಪ್ರತಿಷ್ಠಾನದ ಮಹಿಳಾ ವಸತಿ ನಿಲಯದಲ್ಲಿ ಈಚೆಗೆ ನಡೆದ ಪರಿಸರ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಪರಿಸರ ಸ್ನೇಹಿ ಪ್ರವಾಸೋದ್ಯಮದ ಬೆಳವಣಿಗೆಗೆ ಪ್ರೋತ್ಸಾಹ ದೊರಕಬೇಕಿದೆ’ ಎಂದರು.</p>.<p>‘ಮಲೆನಾಡು ಭಾಗಕ್ಕೆ ಪ್ರವಾಸಕ್ಕೆಂದು ಬರುವ ಕೆಲವರು ಕಂಡ ಕಂಡಲ್ಲಿ ಪ್ಲಾಸ್ಟಿಕ್ ತ್ಯಾಜ್ಯವನ್ನು ಎಸೆಯುತ್ತಿರುವುದು ಬೇಸರದ ಸಂಗತಿಯಾಗಿದೆ. ಪರಿಸರವನ್ನು ಸಂರಕ್ಷಿಸಲು ನಮ್ಮಿಂದಾಗುವ ಸಣ್ಣಪುಟ್ಟ ಕೆಲಸಗಳನ್ನು ನಾವು ಮಾಡಲೇಬೇಕಿದೆ’ ಎಂದು ಕಿವಿಮಾತು ಹೇಳಿದರು.</p>.<p>ಪ್ರಮುಖರಾದ ಕೆ.ಎಸ್.ಸುಬ್ರಾವ್, ಎಂ.ಜಿ.ಪ್ರಕಾಶ್ ಭಟ್, ಅಶ್ವಿನಿಕುಮಾರ್, ಅಬಸೆ ದಿನೇಶ್ ಕುಮಾರ್ ಜೋಷಿ, ಉಮೇಶ್ ಎಚ್.ಎನ್. ಪಿ.ಎನ್.ನಾಗರಾಜ್, ಲಕ್ಷ್ಮಿನಾರಾಯಣ, ವೆಂಕಟೇಶ್ ಕವಲಕೋಡು, ಅರುಣ್ ಕುಂಟಗೋಡು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ:</strong> ಪ್ರವಾಸೋದ್ಯಮವೆಂದರೆ ಕೇವಲ ಮೋಜು, ಮಸ್ತಿ ಮಾತ್ರವಲ್ಲ. ಪರಿಸರಕ್ಕೆ ಪೂರಕವಾಗಿಯೂ ಪ್ರವಾಸೋದ್ಯಮವನ್ನು ಬೆಳೆಸಲು ಸಾಧ್ಯವಿದೆ’ ಎಂದು ಬೆಂಗಳೂರಿನ ಅದಮ್ಯ ಚೇತನ ಸಂಸ್ಥೆ ಅಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್ ಹೇಳಿದರು.</p>.<p>ಇಲ್ಲಿನ ಹವ್ಯಕ ಅಭಿವೃದ್ಧಿ ಪ್ರತಿಷ್ಠಾನದ ಮಹಿಳಾ ವಸತಿ ನಿಲಯದಲ್ಲಿ ಈಚೆಗೆ ನಡೆದ ಪರಿಸರ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಪರಿಸರ ಸ್ನೇಹಿ ಪ್ರವಾಸೋದ್ಯಮದ ಬೆಳವಣಿಗೆಗೆ ಪ್ರೋತ್ಸಾಹ ದೊರಕಬೇಕಿದೆ’ ಎಂದರು.</p>.<p>‘ಮಲೆನಾಡು ಭಾಗಕ್ಕೆ ಪ್ರವಾಸಕ್ಕೆಂದು ಬರುವ ಕೆಲವರು ಕಂಡ ಕಂಡಲ್ಲಿ ಪ್ಲಾಸ್ಟಿಕ್ ತ್ಯಾಜ್ಯವನ್ನು ಎಸೆಯುತ್ತಿರುವುದು ಬೇಸರದ ಸಂಗತಿಯಾಗಿದೆ. ಪರಿಸರವನ್ನು ಸಂರಕ್ಷಿಸಲು ನಮ್ಮಿಂದಾಗುವ ಸಣ್ಣಪುಟ್ಟ ಕೆಲಸಗಳನ್ನು ನಾವು ಮಾಡಲೇಬೇಕಿದೆ’ ಎಂದು ಕಿವಿಮಾತು ಹೇಳಿದರು.</p>.<p>ಪ್ರಮುಖರಾದ ಕೆ.ಎಸ್.ಸುಬ್ರಾವ್, ಎಂ.ಜಿ.ಪ್ರಕಾಶ್ ಭಟ್, ಅಶ್ವಿನಿಕುಮಾರ್, ಅಬಸೆ ದಿನೇಶ್ ಕುಮಾರ್ ಜೋಷಿ, ಉಮೇಶ್ ಎಚ್.ಎನ್. ಪಿ.ಎನ್.ನಾಗರಾಜ್, ಲಕ್ಷ್ಮಿನಾರಾಯಣ, ವೆಂಕಟೇಶ್ ಕವಲಕೋಡು, ಅರುಣ್ ಕುಂಟಗೋಡು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>