ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅನವಶ್ಯಕ ಅಭಿವೃದ್ಧಿ ಯೋಜನೆಗಳು ಪಶ್ಚಿಮ ಘಟ್ಟವನ್ನು ವಿನಾಶದಂಚಿಗೆ ತಂದು ನಿಲ್ಲಿಸಿವೆ. ಹವಾಗುಣ ಬದಲಾವಣೆ ಎಂಬ ಇಂದಿನ ತುರ್ತು ಪರಿಸ್ಥಿತಿಯಲ್ಲಿ ಈಗಿರುವ ಅರಣ್ಯ ಪ್ರದೇಶಗಳನ್ನು ಉಳಿಸಿಕೊಳ್ಳುವುದು ತೀರಾ ಮುಖ್ಯ.ಸರ್ವಋತು ಜಲಪಾತ ಯೋಜನೆ ಜಾರಿಯಾದರೆ ಪಶ್ಚಿಮ ಘಟ್ಟದ ದಟ್ಟ ಅರಣ್ಯ ಪ್ರದೇಶ
ವ್ಯಾಪಕ ಪ್ರಮಾಣದಲ್ಲಿ ನಾಶವಾಗಲಿದೆ. ಅಭಿವೃದ್ಧಿ ಹೆಸರಿನಲ್ಲಿ ಪರಿಸರ ನಾಶ ಮಾಡುವ ಇಂತಹ ಯೋಜನೆಗಳ ಅಗತ್ಯ
ವಿಲ್ಲ’ ಎಂದು ಪ್ರತಿಪಾದಿಸಿದರು.