<p>ಶಿವಮೊಗ್ಗ: ‘ಆಶ್ರಯ ಯೋಜನೆಯ ಫಲಾನುಭವಿಗಳು ನಿಗದಿಪಡಿಸಿದ ಹಣ ಕಟ್ಟಬೇಕು. ಇಲ್ಲದಿದ್ದರೆ ಹಂಚಿಕೆಯಾದ ಮನೆ ರದ್ದು ಆಗುವ ಸಾಧ್ಯತೆ ಇದೆ. ಹೀಗಾಗಿ ಯೋಜನೆಯ ಅಶಯ ಈಡೇರುವುದಿಲ್ಲ’ ಎಂದು ಶಾಸಕಕೆ.ಎಸ್.ಈಶ್ವರಪ್ಪ ಹೇಳಿದರು.</p>.<p>ಇಲ್ಲಿನ ಗೋಪಶೆಟ್ಟಿಕೊಪ್ಪದಲ್ಲಿ ಗುರುವಾರ ರಾಜೀವ್ ಗಾಂಧಿ ವಸತಿ ಯೋಜನೆಯಡಿಯಲ್ಲಿ 1,836 ಮನೆಗಳ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>‘ಆಶ್ರಯ ಯೋಜನೆಯಡಿ ಮನೆಗಳ ನಿರ್ಮಾಣ ಕಾರ್ಯ ಸಾಗುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಇದಕ್ಕೆ ಹಣ ಕೊಡಬೇಕಾಗುತ್ತದೆ. ಆದ್ದರಿಂದ ಫಲಾನುಭವಿಗಳು ನಿಗದಿಪಡಿಸಿದ ಮೊದಲ ಕಂತು ₹ 80 ಸಾವಿರ ಹಣ ತಕ್ಷಣ ಕಟ್ಟಬೇಕು ಎಂದ ಅವರು, ನಗರದ ಎಲ್ಲಾ ಬಡವರಿಗೂ ಮನೆ ಹಂಚಿಕೆಯಾಗುತ್ತದೆ. ಆದರೆಕಾಲ ಕಾಲಕ್ಕೆ ನೀಡುವ ಆದೇಶ ಕಟ್ಟುನಿಟ್ಟಾಗಿ ಪಾಲಿಸಬೇಕು’ ಎಂದು ಮನವಿ ಮಾಡಿದರು.</p>.<p>ಇಲ್ಲಿ ಒಟ್ಟು 1836 ಮನೆಗಳ ನಿರ್ಮಾಣವಾಗುತ್ತದೆ. 400 ಜನರು ಮಾತ್ರ ₹ 80 ಸಾವಿರ ಅಥವಾ ₹ 50 ಸಾವಿರ ಹಣ ಕಟ್ಟಿದ್ದಾರೆ. ಇವರಿಗೆಲ್ಲ ಕೇಂದ್ರ ಮತ್ತು ರಾಜ್ಯ ಸರ್ಕಾರದ ಹಣ ಕೂಡ ಬಿಡುಗಡೆಯಾಗಿದೆ. ಮನೆಗಳ ನಿರ್ಮಾಣಕ್ಕೆ ಟೆಂಡರ್ ಕೂಡ ಕರೆಯಲಾಗಿದೆ. ಗುತ್ತಿಗೆದಾರ ಕೂಡ ಸಿದ್ಧವಾಗಿದ್ದಾರೆ. ನಾಳೆಯಿಂದಲೇ ಕಾಮಗಾರಿ ಆರಂಭವಾಗುತ್ತದೆ. ಹಣ ಕಟ್ಟದ ಫಲಾನುಭವಿಗಳು ತಕ್ಷಣ ಹಣ ಕಟ್ಟಬೇಕು ಎಂದರು.</p>.<p>ಈಗಾಗಲೇ ರಸ್ತೆಗಳು ಆಗಿವೆ. ಕುಡಿಯುವ ನೀರಿನ ಸರಬರಾಜು ಕೆಲಸ ನಡೆಯುತ್ತಿದೆ. ₹ 11 ಕೋಟಿ ವೆಚ್ಚದಲ್ಲಿ ವಿದ್ಯುತ್ ಸಂಪರ್ಕ ಕೂಡ ಕಲ್ಪಿಸಲಾಗುತ್ತಿದೆ. ಕೆಲಸ ಶೀಘ್ರವೇ ಆರಂಭಗೊಳ್ಳುತ್ತದೆ. ಎಲ್ಲ ಬಡವರಿಗೂ ಮನೆ ನೀಡುವುದೇ ಸರ್ಕಾರದ ಉದ್ದೇಶ. ಫಲಾನುಭವಿಗಳು ಈ ಯೋಜನೆ ವಿಫಲವಾಗದಂತೆ ನೋಡಿಕೊಳ್ಳಬೇಕು ಎಂದರು.</p>.<p>‘ಗೋವಿಂದಾ ಪುರದಲ್ಲಿ ಈಗಾಗಲೇ 3,000 ಮನೆಗಳು ವೇಗವಾಗಿ ನಿರ್ಮಾಣವಾಗುತ್ತಿವೆ. ಅಲ್ಲಿ ಎಲ್ಲರೂ ಹಣ ಕಟ್ಟಿದ್ದಾರೆ.<br />ರಾಜ್ಯ ಮತ್ತು ಕೇಂದ್ರ ಸರ್ಕಾರದ ಹಣ ಕೂಡ ಬಿಡುಗಡೆಯಾಗಿದೆ. ಅದೇ ರೀತಿ ಇಲ್ಲಿಯೂ ಕೂಡ ಶೀಘ್ರವೇ ಮನೆ ನಿರ್ಮಾಣವಾಗುತ್ತದೆ’ ಎಂದರು.</p>.<p>ಆಶ್ರಯ ಸಮಿತಿಯ ಶಶಿಧರ್, ಸೂಡಾ ಅಧ್ಯಕ್ಷ ಎನ್.ಜಿ.ನಾಗರಾಜ್, ಪಾಲಿಕೆ ಸದಸ್ಯರಾದ ಎಸ್.ಜ್ಞಾನೇಶ್ವರ್, ಈ.ವಿಶ್ವಾಸ್, ಲಕ್ಷ್ಮೀ ಶಂಕರನಾಯ್ಕ, ಮುಖಂಡ ಲಕ್ಷ್ಮಣ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿವಮೊಗ್ಗ: ‘ಆಶ್ರಯ ಯೋಜನೆಯ ಫಲಾನುಭವಿಗಳು ನಿಗದಿಪಡಿಸಿದ ಹಣ ಕಟ್ಟಬೇಕು. ಇಲ್ಲದಿದ್ದರೆ ಹಂಚಿಕೆಯಾದ ಮನೆ ರದ್ದು ಆಗುವ ಸಾಧ್ಯತೆ ಇದೆ. ಹೀಗಾಗಿ ಯೋಜನೆಯ ಅಶಯ ಈಡೇರುವುದಿಲ್ಲ’ ಎಂದು ಶಾಸಕಕೆ.ಎಸ್.ಈಶ್ವರಪ್ಪ ಹೇಳಿದರು.</p>.<p>ಇಲ್ಲಿನ ಗೋಪಶೆಟ್ಟಿಕೊಪ್ಪದಲ್ಲಿ ಗುರುವಾರ ರಾಜೀವ್ ಗಾಂಧಿ ವಸತಿ ಯೋಜನೆಯಡಿಯಲ್ಲಿ 1,836 ಮನೆಗಳ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>‘ಆಶ್ರಯ ಯೋಜನೆಯಡಿ ಮನೆಗಳ ನಿರ್ಮಾಣ ಕಾರ್ಯ ಸಾಗುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಇದಕ್ಕೆ ಹಣ ಕೊಡಬೇಕಾಗುತ್ತದೆ. ಆದ್ದರಿಂದ ಫಲಾನುಭವಿಗಳು ನಿಗದಿಪಡಿಸಿದ ಮೊದಲ ಕಂತು ₹ 80 ಸಾವಿರ ಹಣ ತಕ್ಷಣ ಕಟ್ಟಬೇಕು ಎಂದ ಅವರು, ನಗರದ ಎಲ್ಲಾ ಬಡವರಿಗೂ ಮನೆ ಹಂಚಿಕೆಯಾಗುತ್ತದೆ. ಆದರೆಕಾಲ ಕಾಲಕ್ಕೆ ನೀಡುವ ಆದೇಶ ಕಟ್ಟುನಿಟ್ಟಾಗಿ ಪಾಲಿಸಬೇಕು’ ಎಂದು ಮನವಿ ಮಾಡಿದರು.</p>.<p>ಇಲ್ಲಿ ಒಟ್ಟು 1836 ಮನೆಗಳ ನಿರ್ಮಾಣವಾಗುತ್ತದೆ. 400 ಜನರು ಮಾತ್ರ ₹ 80 ಸಾವಿರ ಅಥವಾ ₹ 50 ಸಾವಿರ ಹಣ ಕಟ್ಟಿದ್ದಾರೆ. ಇವರಿಗೆಲ್ಲ ಕೇಂದ್ರ ಮತ್ತು ರಾಜ್ಯ ಸರ್ಕಾರದ ಹಣ ಕೂಡ ಬಿಡುಗಡೆಯಾಗಿದೆ. ಮನೆಗಳ ನಿರ್ಮಾಣಕ್ಕೆ ಟೆಂಡರ್ ಕೂಡ ಕರೆಯಲಾಗಿದೆ. ಗುತ್ತಿಗೆದಾರ ಕೂಡ ಸಿದ್ಧವಾಗಿದ್ದಾರೆ. ನಾಳೆಯಿಂದಲೇ ಕಾಮಗಾರಿ ಆರಂಭವಾಗುತ್ತದೆ. ಹಣ ಕಟ್ಟದ ಫಲಾನುಭವಿಗಳು ತಕ್ಷಣ ಹಣ ಕಟ್ಟಬೇಕು ಎಂದರು.</p>.<p>ಈಗಾಗಲೇ ರಸ್ತೆಗಳು ಆಗಿವೆ. ಕುಡಿಯುವ ನೀರಿನ ಸರಬರಾಜು ಕೆಲಸ ನಡೆಯುತ್ತಿದೆ. ₹ 11 ಕೋಟಿ ವೆಚ್ಚದಲ್ಲಿ ವಿದ್ಯುತ್ ಸಂಪರ್ಕ ಕೂಡ ಕಲ್ಪಿಸಲಾಗುತ್ತಿದೆ. ಕೆಲಸ ಶೀಘ್ರವೇ ಆರಂಭಗೊಳ್ಳುತ್ತದೆ. ಎಲ್ಲ ಬಡವರಿಗೂ ಮನೆ ನೀಡುವುದೇ ಸರ್ಕಾರದ ಉದ್ದೇಶ. ಫಲಾನುಭವಿಗಳು ಈ ಯೋಜನೆ ವಿಫಲವಾಗದಂತೆ ನೋಡಿಕೊಳ್ಳಬೇಕು ಎಂದರು.</p>.<p>‘ಗೋವಿಂದಾ ಪುರದಲ್ಲಿ ಈಗಾಗಲೇ 3,000 ಮನೆಗಳು ವೇಗವಾಗಿ ನಿರ್ಮಾಣವಾಗುತ್ತಿವೆ. ಅಲ್ಲಿ ಎಲ್ಲರೂ ಹಣ ಕಟ್ಟಿದ್ದಾರೆ.<br />ರಾಜ್ಯ ಮತ್ತು ಕೇಂದ್ರ ಸರ್ಕಾರದ ಹಣ ಕೂಡ ಬಿಡುಗಡೆಯಾಗಿದೆ. ಅದೇ ರೀತಿ ಇಲ್ಲಿಯೂ ಕೂಡ ಶೀಘ್ರವೇ ಮನೆ ನಿರ್ಮಾಣವಾಗುತ್ತದೆ’ ಎಂದರು.</p>.<p>ಆಶ್ರಯ ಸಮಿತಿಯ ಶಶಿಧರ್, ಸೂಡಾ ಅಧ್ಯಕ್ಷ ಎನ್.ಜಿ.ನಾಗರಾಜ್, ಪಾಲಿಕೆ ಸದಸ್ಯರಾದ ಎಸ್.ಜ್ಞಾನೇಶ್ವರ್, ಈ.ವಿಶ್ವಾಸ್, ಲಕ್ಷ್ಮೀ ಶಂಕರನಾಯ್ಕ, ಮುಖಂಡ ಲಕ್ಷ್ಮಣ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>