<p><strong>ಶಿವಮೊಗ್ಗ:</strong> ಬೆಂಗಳೂರಿನ ಹೊರಗೆ ಕೈಗಾರಿಕಾ ವಲಯಗಳನ್ನು ಅಭಿವೃದ್ಧಿ ಪಡಿಸಲು ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತದೆ. ಅಂತಹ ಉದ್ಯಮಿಗಳಿಗೆ ನೆರವು, ಅಗತ್ಯ ಮೂಲ ಸೌಕರ್ಯ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.</p>.<p>ನಗರದಲ್ಲಿ ಸೋಮವಾರ ಅವರು ಸುದ್ದಿಗಾರರ ಜತೆ ಮಾತನಾಡಿ, ರಾಜ್ಯದ ಬೇರೆಬೇರೆ ಭಾಗಗಳಲ್ಲಿ ದೊಡ್ಡದೊಡ್ಡ ಕೈಗಾರಿಕೆಗಳು ಸ್ಥಾಪನೆಯಾಗಬೇಕು. ಸ್ಥಳೀಯರಿಗೆ ಉದ್ಯೋಗಾವಕಾಶ ದೊರಕಬೇಕು. ಕೃಷಿ ಮತ್ತು ಕೈಗಾರಿಕಾ ವಲಯ ಸಮಾನಾಂತರವಾಗಿ ಸಾಗಿದರೆ ನಿರುದ್ಯೋಗ ಸಮಸ್ಯೆ ನಿವಾರಣೆ ಜತೆಗೆ, ರಾಜ್ಯದ ಅಭಿವೃದ್ಧಿಗೂ ಸಹಕಾರಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.</p>.<p><strong>ಟ್ರಂಪ್ ಭೇಟಿಗೆ ಗೈರು</strong></p>.<p>ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿಗೆ ತಮಗೂ ಆಹ್ವಾನ ಬಂದಿದೆ. ಕೆಲಸ ಕಾರ್ಯಗಳ ಒತ್ತಡದಿಂದ ಅಲ್ಲಿಗೆ ಹೋಗುತ್ತಿಲ್ಲ. ವಿಶ್ವದ ಬಲಿಷ್ಠ ರಾಷ್ಟ್ರ ಅಮೆರಿಕ. ಮೋದಿ ಅವರ ವೈಯಕ್ತಿಕ ಸ್ನೇಹದ ಕಾರಣಕ್ಕೆ ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ. ಅವರ ಬರುವಿಕೆಗೆ ಸ್ವಾಗತ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಬೆಂಗಳೂರಿನ ಹೊರಗೆ ಕೈಗಾರಿಕಾ ವಲಯಗಳನ್ನು ಅಭಿವೃದ್ಧಿ ಪಡಿಸಲು ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತದೆ. ಅಂತಹ ಉದ್ಯಮಿಗಳಿಗೆ ನೆರವು, ಅಗತ್ಯ ಮೂಲ ಸೌಕರ್ಯ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.</p>.<p>ನಗರದಲ್ಲಿ ಸೋಮವಾರ ಅವರು ಸುದ್ದಿಗಾರರ ಜತೆ ಮಾತನಾಡಿ, ರಾಜ್ಯದ ಬೇರೆಬೇರೆ ಭಾಗಗಳಲ್ಲಿ ದೊಡ್ಡದೊಡ್ಡ ಕೈಗಾರಿಕೆಗಳು ಸ್ಥಾಪನೆಯಾಗಬೇಕು. ಸ್ಥಳೀಯರಿಗೆ ಉದ್ಯೋಗಾವಕಾಶ ದೊರಕಬೇಕು. ಕೃಷಿ ಮತ್ತು ಕೈಗಾರಿಕಾ ವಲಯ ಸಮಾನಾಂತರವಾಗಿ ಸಾಗಿದರೆ ನಿರುದ್ಯೋಗ ಸಮಸ್ಯೆ ನಿವಾರಣೆ ಜತೆಗೆ, ರಾಜ್ಯದ ಅಭಿವೃದ್ಧಿಗೂ ಸಹಕಾರಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.</p>.<p><strong>ಟ್ರಂಪ್ ಭೇಟಿಗೆ ಗೈರು</strong></p>.<p>ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿಗೆ ತಮಗೂ ಆಹ್ವಾನ ಬಂದಿದೆ. ಕೆಲಸ ಕಾರ್ಯಗಳ ಒತ್ತಡದಿಂದ ಅಲ್ಲಿಗೆ ಹೋಗುತ್ತಿಲ್ಲ. ವಿಶ್ವದ ಬಲಿಷ್ಠ ರಾಷ್ಟ್ರ ಅಮೆರಿಕ. ಮೋದಿ ಅವರ ವೈಯಕ್ತಿಕ ಸ್ನೇಹದ ಕಾರಣಕ್ಕೆ ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ. ಅವರ ಬರುವಿಕೆಗೆ ಸ್ವಾಗತ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>