<p>ಸಾಗರ: ಯಾವುದೇ ಪರೀಕ್ಷೆಯಲ್ಲಿ ಯಶಸ್ಸಿನ ಸವಿ ಸವಿಯಬೇಕಾದರೆ ಸಾಕಷ್ಟು ಪೂರ್ವ ತಯಾರಿ ಇರಲೇಬೇಕಾಗುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದ ಸ್ವಾಮಿ ಹೇಳಿದರು.</p>.<p>ತಾಲ್ಲೂಕಿನ ಗಿಣಿವಾರ ಗ್ರಾಮದ ಕೊಡಚಾದ್ರಿ ಶಿಕ್ಷಣ ಸಂಸ್ಥೆಯಲ್ಲಿ ಈಚೆಗೆ ಶಿಕ್ಷಣ ಇಲಾಖೆ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಕಲಿಕಾ ಬಲವರ್ಧನ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.</p>.<p>ಕಲಿಕೆ ಎಂಬುದು ನಿರಂತರ ಪ್ರಕ್ರಿಯೆಯಾಗಿದೆ. ಕಲಿತು ಮುಗಿಯಿತು ಎನ್ನುವ ಮನೋಭಾವ ವಿದ್ಯಾರ್ಥಿಗಳಲ್ಲಿ ಬರದಂತೆ ನೋಡಿಕೊಳ್ಳುವ ಜವಾಬ್ಧಾರಿ ಪೋಷಕರು ಹಾಗೂ ಶಿಕ್ಷಕರ ಮೇಲಿದೆ. ಅಂತಹ ಮಾನಸಿಕತೆಯನ್ನು ಅವರಲ್ಲಿ ಬೆಳೆಸಬೇಕು ಎಂದು ಕಿವಿಮಾತು ಹೇಳಿದರು.</p>.<p>ಒತ್ತಡದ ವಾತಾವರಣವಿಲ್ಲದೆ ವಿದ್ಯಾರ್ಥಿಗಳು ಸ್ವಯಂಸ್ಫೂರ್ತಿಯಿಂದ ಕಲಿಕೆಗೆ ಮುಂದಾಗುವಂತೆ ಪ್ರೇರೇಪಿಸಬೇಕಿದೆ. ಆ ಮೂಲಕ ಅವರ ಮಾನಸಿಕ ಸ್ಥೈರ್ಯವನ್ನು ಗಟ್ಟಿಗೊಳಿಸಬೇಕು ಎಂದು ಮುಖ್ಯ ಶಿಕ್ಷಕ ನಾಗರಾಜ್ ಹೆಗಡೆ ಹೇಳಿದರು.</p>.<p>ಪ್ರಮುಖರಾದ ಪ್ರಕಾಶ್ ಕೆ.ಆರ್. ರಮೇಶ್, ವಿ.ಟಿ.ಸ್ವಾಮಿ, ಕುಮಾರಸ್ವಾಮಿ, ನಂದಕುಮಾರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಾಗರ: ಯಾವುದೇ ಪರೀಕ್ಷೆಯಲ್ಲಿ ಯಶಸ್ಸಿನ ಸವಿ ಸವಿಯಬೇಕಾದರೆ ಸಾಕಷ್ಟು ಪೂರ್ವ ತಯಾರಿ ಇರಲೇಬೇಕಾಗುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದ ಸ್ವಾಮಿ ಹೇಳಿದರು.</p>.<p>ತಾಲ್ಲೂಕಿನ ಗಿಣಿವಾರ ಗ್ರಾಮದ ಕೊಡಚಾದ್ರಿ ಶಿಕ್ಷಣ ಸಂಸ್ಥೆಯಲ್ಲಿ ಈಚೆಗೆ ಶಿಕ್ಷಣ ಇಲಾಖೆ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಕಲಿಕಾ ಬಲವರ್ಧನ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.</p>.<p>ಕಲಿಕೆ ಎಂಬುದು ನಿರಂತರ ಪ್ರಕ್ರಿಯೆಯಾಗಿದೆ. ಕಲಿತು ಮುಗಿಯಿತು ಎನ್ನುವ ಮನೋಭಾವ ವಿದ್ಯಾರ್ಥಿಗಳಲ್ಲಿ ಬರದಂತೆ ನೋಡಿಕೊಳ್ಳುವ ಜವಾಬ್ಧಾರಿ ಪೋಷಕರು ಹಾಗೂ ಶಿಕ್ಷಕರ ಮೇಲಿದೆ. ಅಂತಹ ಮಾನಸಿಕತೆಯನ್ನು ಅವರಲ್ಲಿ ಬೆಳೆಸಬೇಕು ಎಂದು ಕಿವಿಮಾತು ಹೇಳಿದರು.</p>.<p>ಒತ್ತಡದ ವಾತಾವರಣವಿಲ್ಲದೆ ವಿದ್ಯಾರ್ಥಿಗಳು ಸ್ವಯಂಸ್ಫೂರ್ತಿಯಿಂದ ಕಲಿಕೆಗೆ ಮುಂದಾಗುವಂತೆ ಪ್ರೇರೇಪಿಸಬೇಕಿದೆ. ಆ ಮೂಲಕ ಅವರ ಮಾನಸಿಕ ಸ್ಥೈರ್ಯವನ್ನು ಗಟ್ಟಿಗೊಳಿಸಬೇಕು ಎಂದು ಮುಖ್ಯ ಶಿಕ್ಷಕ ನಾಗರಾಜ್ ಹೆಗಡೆ ಹೇಳಿದರು.</p>.<p>ಪ್ರಮುಖರಾದ ಪ್ರಕಾಶ್ ಕೆ.ಆರ್. ರಮೇಶ್, ವಿ.ಟಿ.ಸ್ವಾಮಿ, ಕುಮಾರಸ್ವಾಮಿ, ನಂದಕುಮಾರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>