ಈ ಹಿಂದೆ ಸಾಹಿತ್ಯ ಸಂಗ್ರಹಣೆ ಮತ್ತು ಮುದ್ರಣ ಬಹಳ ಕಷ್ಟವಾಗಿತ್ತು. ಕಾಗದ, ಲೇಖನ ಸಾಮಗ್ರಿ, ಮುದ್ರಣ ಸೇರಿ ಇತರೆ ಸೌಲಭ್ಯಗಳು ಇರಲಿಲ್ಲ. ಅಂತಹ ಕಷ್ಟಕರ ಪರಿಸ್ಥಿತಿಯಲ್ಲಿಯೂ ಸಹ ಫ.ಗು.ಹಳಕಟ್ಟಿ ವಚನ ಸಾಹಿತ್ಯ ಸಂರಕ್ಷಿಸುವ ಕೆಲಸ ಮಾಡಿರುವುದು ಸ್ಮರಣೀಯ. ಸರ್ಕಾರದಿಂದ ಇದೇ ಮೊದಲ ವರ್ಷ ಅವರ ಜನ್ಮದಿನ ಪ್ರಯುಕ್ತ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಸರಳವಾಗಿ ಆಚರಿಸಲಾಗುತ್ತಿದೆ ಎಂದರು.