<p><strong>ಹೊಸನಗರ: </strong>ತಾಲ್ಲೂಕಿನ ಹರಿದ್ರಾವತಿ ಗ್ರಾಮ ಪಂಚಾಯಿತಿ ಹೀಲಗೋಡು ವಾರ್ಡ್ ನಂ. 3ರ ಸದಸ್ಯ ಎಚ್.ವಿ. ಅಶೋಕ ಅವರು ಚುನಾವಣೆಯ ವೇಳೆ ನಾಮಪತ್ರ ಸಲ್ಲಿಸುವಾಗ ಸುಳ್ಳು ಮಾಹಿತಿ ನೀಡಿದ್ದರಿಂದ ಅವರ ಸದಸ್ಯತ್ವವನ್ನು ರದ್ದುಪಡಿಸಿ ಹೊಸನಗರ ಹಿರಿಯ ಸಿವಿಲ್ ನ್ಯಾಯಾಲಯ ಸೋಮವಾರ ತೀರ್ಪು ನೀಡಿದೆ.</p>.<p>ಅಶೋಕ ಅವರು ಕ್ಲಾಸ್ ಒನ್ ಗುತ್ತಿಗೆದಾರರಾಗಿದ್ದು, ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಇದ್ದರೂ ಅದನ್ನು ಮರೆಮಾಚಿದ್ದರು. ಇದನ್ನು ಪ್ರಶ್ನಿಸಿ ಅವರ ಪ್ರತಿಸ್ಪರ್ಧಿ ಎಚ್.ಎನ್. ಗೋಪಾಲ ಹೀಲಗೋಡು ನ್ಯಾಯಾಲಯದ ಮೆಟ್ಟಿಲು ಏರಿದ್ದರು. ಸುದೀರ್ಘ ವಾದ–ಪ್ರತಿವಾದ ಆಲಿಸಿದ ಹಿರಿಯ ನ್ಯಾಯಾಧೀಶ ರಾದ ಕೆ. ಪುಷ್ಪಲತಾ ಅವರು ಅಶೋಕರವರ ಸದಸ್ಯತ್ವ ಅನರ್ಹ ಎಂದೂ ಮತ್ತು ಕೇವಲ 3 ಮತಗಳ ಅಂತರದಲ್ಲಿ ಸೋತಿದ್ದ ಎಚ್.ಎನ್. ಗೋಪಾಲ ಹೀಲಗೋಡು ಅವರು ಸದಸ್ಯರಾಗಿ ಮುಂದುವರಿಸಬಹುದು ಎಂದೂ ತೀರ್ಪು ನೀಡಿದ್ದಾರೆ.</p>.<p>ಸಾಮಾನ್ಯ ಮೀಸಲು ಕ್ಷೇತ್ರವಾಗಿದ್ದ ಈ ಕ್ಷೇತ್ರಕ್ಕೆ ಕಳೆದ ವರ್ಷ ಡಿಸೆಂಬರ್ 27ರಂದು ಚುನಾವಣೆ ನಡೆದಿತ್ತು. ಅರ್ಜಿದಾರರ ಪರವಾಗಿ ವಕೀಲ ರವೀಶ್ ಸಾಗರ ಮತ್ತು ವೈ.ಪಿ. ಮಹೇಶ್ ವಾದಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸನಗರ: </strong>ತಾಲ್ಲೂಕಿನ ಹರಿದ್ರಾವತಿ ಗ್ರಾಮ ಪಂಚಾಯಿತಿ ಹೀಲಗೋಡು ವಾರ್ಡ್ ನಂ. 3ರ ಸದಸ್ಯ ಎಚ್.ವಿ. ಅಶೋಕ ಅವರು ಚುನಾವಣೆಯ ವೇಳೆ ನಾಮಪತ್ರ ಸಲ್ಲಿಸುವಾಗ ಸುಳ್ಳು ಮಾಹಿತಿ ನೀಡಿದ್ದರಿಂದ ಅವರ ಸದಸ್ಯತ್ವವನ್ನು ರದ್ದುಪಡಿಸಿ ಹೊಸನಗರ ಹಿರಿಯ ಸಿವಿಲ್ ನ್ಯಾಯಾಲಯ ಸೋಮವಾರ ತೀರ್ಪು ನೀಡಿದೆ.</p>.<p>ಅಶೋಕ ಅವರು ಕ್ಲಾಸ್ ಒನ್ ಗುತ್ತಿಗೆದಾರರಾಗಿದ್ದು, ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಇದ್ದರೂ ಅದನ್ನು ಮರೆಮಾಚಿದ್ದರು. ಇದನ್ನು ಪ್ರಶ್ನಿಸಿ ಅವರ ಪ್ರತಿಸ್ಪರ್ಧಿ ಎಚ್.ಎನ್. ಗೋಪಾಲ ಹೀಲಗೋಡು ನ್ಯಾಯಾಲಯದ ಮೆಟ್ಟಿಲು ಏರಿದ್ದರು. ಸುದೀರ್ಘ ವಾದ–ಪ್ರತಿವಾದ ಆಲಿಸಿದ ಹಿರಿಯ ನ್ಯಾಯಾಧೀಶ ರಾದ ಕೆ. ಪುಷ್ಪಲತಾ ಅವರು ಅಶೋಕರವರ ಸದಸ್ಯತ್ವ ಅನರ್ಹ ಎಂದೂ ಮತ್ತು ಕೇವಲ 3 ಮತಗಳ ಅಂತರದಲ್ಲಿ ಸೋತಿದ್ದ ಎಚ್.ಎನ್. ಗೋಪಾಲ ಹೀಲಗೋಡು ಅವರು ಸದಸ್ಯರಾಗಿ ಮುಂದುವರಿಸಬಹುದು ಎಂದೂ ತೀರ್ಪು ನೀಡಿದ್ದಾರೆ.</p>.<p>ಸಾಮಾನ್ಯ ಮೀಸಲು ಕ್ಷೇತ್ರವಾಗಿದ್ದ ಈ ಕ್ಷೇತ್ರಕ್ಕೆ ಕಳೆದ ವರ್ಷ ಡಿಸೆಂಬರ್ 27ರಂದು ಚುನಾವಣೆ ನಡೆದಿತ್ತು. ಅರ್ಜಿದಾರರ ಪರವಾಗಿ ವಕೀಲ ರವೀಶ್ ಸಾಗರ ಮತ್ತು ವೈ.ಪಿ. ಮಹೇಶ್ ವಾದಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>