<p><strong>ಹೊಸನಗರ:</strong> ರೈತರನ್ನು ಆರ್ಥಿಕವಾಗಿ ಸ್ವಾವಲಂಬಿಗಳಾಗಿಸುವುದು ಸಂಘದ ಗುರಿ ಎಂದು ತ್ರಿಣಿವೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಗುರಶಕ್ತಿ ವಿದ್ಯಾಧರ ರಾವ್ ತಿಳಿಸಿದರು. </p>.<p>ತ್ರಿಣಿವೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2023-24ನೇ ಸಾಲಿನ ವಾರ್ಷಿಕ ಸರ್ವ ಸದಸ್ಯರ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ಸಂಘವು 1949ರಲ್ಲಿ ಆರಂಭಗೊಂಡು ಗ್ರಾಮೀಣ ಭಾಗದ ಸಹಕಾರಿ ಸಂಸ್ಥೆಯಾಗಿ ಜಿಲ್ಲೆಯಲ್ಲಿ ನಂಬರ್ ಒನ್ ಸ್ಥಾನದಲ್ಲಿದೆ. ಷೇರುದಾರರ ನಿರಂತರ ಪ್ರೋತ್ಸಾಹ ಇದಕ್ಕೆ ಕಾರಣ ಎಂದು ಹೇಳಿದರು.</p>.<p>ಸಂಘವು 74 ವಸಂತಗಳನ್ನು ಪೂರೈಸಿ ಅಮೃತ ಮಹೋತ್ಸವದತ್ತ ಕಾಲಿರಿಸಿದೆ. ಕಳೆದ ಸಾಲಿನಲ್ಲಿ ₹ 1.68 ಕೋಟಿ ಠೇವಣಿ ಸಂಗ್ರಹವಾಗಿದ್ದು, ಈ ಬಾರಿ ₹ 24.21 ಲಕ್ಷ ನಿವ್ವಳ ಲಾಭ ಗಳಿಸಿದೆ ಎಂದರು.</p>.<p>ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷರಾಗಿ ಎರಡನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಸಂಘದ ಅಧ್ಯಕ್ಷ ವಿದ್ಯಾಧರ್ ರಾವ್ ಹಾಗೂ ನಿರ್ದೇಶಕ ಜಿ.ಎನ್. ಸುಧೀರ್ ಅವರನ್ನು ಗ್ರಾಮಸ್ಥರು ಸನ್ಮಾನಿಸಿದರು.</p>.<p>ಸಿಇಒ ಕೆ.ಆರ್. ವೆಂಕಟೇಶ್ ಸಭಾ ನಡಾವಳಿ ವಾಚಿಸಿದರು. ಉಪಾಧ್ಯಕ್ಷ ಸಾಲಗೇರಿ ಲಕ್ಷ್ಮಣಗೌಡ, ನಿರ್ದೇಶಕರಾದ ಆರ್. ರಾಜಕುಮಾರ್, ನೆಲ್ಲುಂಡೆ ವರುಣ್, ಎಂ.ಎನ್. ನಟರಾಜ್, ಚಂದ್ರಶೇಖರ್, ಗೀತಾ ಜಯರಾಮ್ ಶೆಟ್ಟಿ, ಎ.ಕೆ. ಹಾಲಮ್ಮ ಹಾಗೂ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸನಗರ:</strong> ರೈತರನ್ನು ಆರ್ಥಿಕವಾಗಿ ಸ್ವಾವಲಂಬಿಗಳಾಗಿಸುವುದು ಸಂಘದ ಗುರಿ ಎಂದು ತ್ರಿಣಿವೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಗುರಶಕ್ತಿ ವಿದ್ಯಾಧರ ರಾವ್ ತಿಳಿಸಿದರು. </p>.<p>ತ್ರಿಣಿವೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2023-24ನೇ ಸಾಲಿನ ವಾರ್ಷಿಕ ಸರ್ವ ಸದಸ್ಯರ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ಸಂಘವು 1949ರಲ್ಲಿ ಆರಂಭಗೊಂಡು ಗ್ರಾಮೀಣ ಭಾಗದ ಸಹಕಾರಿ ಸಂಸ್ಥೆಯಾಗಿ ಜಿಲ್ಲೆಯಲ್ಲಿ ನಂಬರ್ ಒನ್ ಸ್ಥಾನದಲ್ಲಿದೆ. ಷೇರುದಾರರ ನಿರಂತರ ಪ್ರೋತ್ಸಾಹ ಇದಕ್ಕೆ ಕಾರಣ ಎಂದು ಹೇಳಿದರು.</p>.<p>ಸಂಘವು 74 ವಸಂತಗಳನ್ನು ಪೂರೈಸಿ ಅಮೃತ ಮಹೋತ್ಸವದತ್ತ ಕಾಲಿರಿಸಿದೆ. ಕಳೆದ ಸಾಲಿನಲ್ಲಿ ₹ 1.68 ಕೋಟಿ ಠೇವಣಿ ಸಂಗ್ರಹವಾಗಿದ್ದು, ಈ ಬಾರಿ ₹ 24.21 ಲಕ್ಷ ನಿವ್ವಳ ಲಾಭ ಗಳಿಸಿದೆ ಎಂದರು.</p>.<p>ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷರಾಗಿ ಎರಡನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಸಂಘದ ಅಧ್ಯಕ್ಷ ವಿದ್ಯಾಧರ್ ರಾವ್ ಹಾಗೂ ನಿರ್ದೇಶಕ ಜಿ.ಎನ್. ಸುಧೀರ್ ಅವರನ್ನು ಗ್ರಾಮಸ್ಥರು ಸನ್ಮಾನಿಸಿದರು.</p>.<p>ಸಿಇಒ ಕೆ.ಆರ್. ವೆಂಕಟೇಶ್ ಸಭಾ ನಡಾವಳಿ ವಾಚಿಸಿದರು. ಉಪಾಧ್ಯಕ್ಷ ಸಾಲಗೇರಿ ಲಕ್ಷ್ಮಣಗೌಡ, ನಿರ್ದೇಶಕರಾದ ಆರ್. ರಾಜಕುಮಾರ್, ನೆಲ್ಲುಂಡೆ ವರುಣ್, ಎಂ.ಎನ್. ನಟರಾಜ್, ಚಂದ್ರಶೇಖರ್, ಗೀತಾ ಜಯರಾಮ್ ಶೆಟ್ಟಿ, ಎ.ಕೆ. ಹಾಲಮ್ಮ ಹಾಗೂ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>