<p><strong>ನೆಲವಾಗಿಲು (ಶಿಕಾರಿಪುರ):</strong> ಗ್ರಾಮದಲ್ಲಿ ಸಾಲದ ಹೊರೆಯಿಂದ ಆತ್ಮಹತ್ಯೆ ಮಾಡಿಕೊಂಡ ರೈತ ಬಸವರಾಜಪ್ಪ ಅವರ ಮನೆಗೆ ಸೋಮವಾರ ಭೇಟಿ ನೀಡಿದ ಶಾಸಕ ಬಿ.ವೈ. ವಿಜಯೇಂದ್ರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.</p>.<p>‘ಧೈರ್ಯದಿಂದ ಜೀವನ ನಡೆಸಬೇಕು. ನಿಮ್ಮ ಮಕ್ಕಳ ಶಿಕ್ಷಣ ಸೇರಿದಂತೆ ಇತರೆ ಕಾರ್ಯಗಳಿಗೆ ಸ್ಪಂದಿಸುತ್ತೇನೆ’ ಎಂದ ಅವರು, ‘ಕುಟುಂಬಕ್ಕೆ ಆತ್ಮಹತ್ಯೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಶೀಘ್ರ ಕ್ರಮ ಕೈಗೊಳ್ಳಬೇಕು’ ಎಂದು ಸ್ಥಳದಲ್ಲಿದ್ದ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>ವೈಯಕ್ತಿಕವಾಗಿ ಧನ ಸಹಾಯ ನೀಡಿದರು.</p>.<p>ಮುಖಂಡರಾದ ಕೆ.ಎಸ್. ಗುರುಮೂರ್ತಿ, ನಿಂಬೆಗೊಂದಿ ಸಿದ್ದಲಿಂಗಪ್ಪ, ಸಂಕ್ಲಾಪುರ ಹನುಮಂತಪ್ಪ, ವೀರನಗೌಡ, ಮಾರವಳ್ಳಿ ಅಶೋಕ, ಬೆಣ್ಣೆ ಪ್ರವೀಣ್, ವಿನಯ್, ರವಿಕಾಂತ, ರಾಜು, ಗ್ರಾಮ ಪಂಚಾಯಿತಿ ಅಧ್ಯಕ್ಷ ಬಸವರಾಜ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನೆಲವಾಗಿಲು (ಶಿಕಾರಿಪುರ):</strong> ಗ್ರಾಮದಲ್ಲಿ ಸಾಲದ ಹೊರೆಯಿಂದ ಆತ್ಮಹತ್ಯೆ ಮಾಡಿಕೊಂಡ ರೈತ ಬಸವರಾಜಪ್ಪ ಅವರ ಮನೆಗೆ ಸೋಮವಾರ ಭೇಟಿ ನೀಡಿದ ಶಾಸಕ ಬಿ.ವೈ. ವಿಜಯೇಂದ್ರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.</p>.<p>‘ಧೈರ್ಯದಿಂದ ಜೀವನ ನಡೆಸಬೇಕು. ನಿಮ್ಮ ಮಕ್ಕಳ ಶಿಕ್ಷಣ ಸೇರಿದಂತೆ ಇತರೆ ಕಾರ್ಯಗಳಿಗೆ ಸ್ಪಂದಿಸುತ್ತೇನೆ’ ಎಂದ ಅವರು, ‘ಕುಟುಂಬಕ್ಕೆ ಆತ್ಮಹತ್ಯೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಶೀಘ್ರ ಕ್ರಮ ಕೈಗೊಳ್ಳಬೇಕು’ ಎಂದು ಸ್ಥಳದಲ್ಲಿದ್ದ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>ವೈಯಕ್ತಿಕವಾಗಿ ಧನ ಸಹಾಯ ನೀಡಿದರು.</p>.<p>ಮುಖಂಡರಾದ ಕೆ.ಎಸ್. ಗುರುಮೂರ್ತಿ, ನಿಂಬೆಗೊಂದಿ ಸಿದ್ದಲಿಂಗಪ್ಪ, ಸಂಕ್ಲಾಪುರ ಹನುಮಂತಪ್ಪ, ವೀರನಗೌಡ, ಮಾರವಳ್ಳಿ ಅಶೋಕ, ಬೆಣ್ಣೆ ಪ್ರವೀಣ್, ವಿನಯ್, ರವಿಕಾಂತ, ರಾಜು, ಗ್ರಾಮ ಪಂಚಾಯಿತಿ ಅಧ್ಯಕ್ಷ ಬಸವರಾಜ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>