<p><strong>ಸಾಗರ: </strong>ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜೂನ್ 24ರಂದು ಶಿವಮೊಗ್ಗದಲ್ಲಿ ರೈತರ ಸಮಾವೇಶ ಏರ್ಪಡಿಸಲಾಗಿದೆ ಎಂದು ರೈತ ಸಂಘ (ಎಚ್.ಗಣಪತಿಯಪ್ಪ ಬಣ)ದ ತಾಲ್ಲೂಕು ಘಟಕದ ಅಧ್ಯಕ್ಷ ರಾಮಚಂದ್ರಪ್ಪ ಮನೆಘಟ್ಟ ತಿಳಿಸಿದರು.</p>.<p>ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಬೇಕು. ಬೆಳೆ ವಿಮೆ ನೀತಿ ಬದಲಾಯಿಸಬೇಕು. ಎನ್.ಡಿ.ಎಫ್ ಪರಿಹಾರದ ಮಾನದಂಡ ಬದಲಿಸಬೇಕು ಎಂಬುದೂ ಸೇರಿ ಹಲವು ಬೇಡಿಕೆಗಳ ಕುರಿತು ಸಮಾವೇಶದಲ್ಲಿ ಚರ್ಚಿಸಿ ನಿರ್ಣಯ ಸ್ವೀಕರಿಸಲಾಗುವುದು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. </p>.<p>ಬರಗಾಲದಿಂದ ರೈತರು ಸಂಕಷ್ಟದಲ್ಲಿದ್ದಾರೆ. ಆದಾಗ್ಯೂ ರಾಷ್ಟ್ರೀಕೃತ ಹಾಗೂ ಸಹಕಾರ ಬ್ಯಾಂಕ್ಗಳು ಸಾಲ ಪಾವತಿ ಮಾಡದೆ ರೈತರ ಆಸ್ತಿ ಹರಾಜಿಗೆ ಮುಂದಾಗಿರುವುದು ಖಂಡನೀಯ. ಸಂಕಷ್ಟದಲ್ಲಿರುವ ರೈತರಿಗೆ ಸಾಲ ಮರು ಪಾವತಿ ಮಾಡಲು ಕಾಲಾವಕಾಶ ನೀಡಬೇಕು ಎಂದು ಅವರು ಒತ್ತಾಯಿಸಿದರು<strong>.</strong></p>.<p>ಪ್ರಮುಖರಾದ ಭದ್ರೇಶ್ ಬಾಳಗೋಡು, ಮೇಘರಾಜ ಪಡವಗೋಡು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ: </strong>ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜೂನ್ 24ರಂದು ಶಿವಮೊಗ್ಗದಲ್ಲಿ ರೈತರ ಸಮಾವೇಶ ಏರ್ಪಡಿಸಲಾಗಿದೆ ಎಂದು ರೈತ ಸಂಘ (ಎಚ್.ಗಣಪತಿಯಪ್ಪ ಬಣ)ದ ತಾಲ್ಲೂಕು ಘಟಕದ ಅಧ್ಯಕ್ಷ ರಾಮಚಂದ್ರಪ್ಪ ಮನೆಘಟ್ಟ ತಿಳಿಸಿದರು.</p>.<p>ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಬೇಕು. ಬೆಳೆ ವಿಮೆ ನೀತಿ ಬದಲಾಯಿಸಬೇಕು. ಎನ್.ಡಿ.ಎಫ್ ಪರಿಹಾರದ ಮಾನದಂಡ ಬದಲಿಸಬೇಕು ಎಂಬುದೂ ಸೇರಿ ಹಲವು ಬೇಡಿಕೆಗಳ ಕುರಿತು ಸಮಾವೇಶದಲ್ಲಿ ಚರ್ಚಿಸಿ ನಿರ್ಣಯ ಸ್ವೀಕರಿಸಲಾಗುವುದು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. </p>.<p>ಬರಗಾಲದಿಂದ ರೈತರು ಸಂಕಷ್ಟದಲ್ಲಿದ್ದಾರೆ. ಆದಾಗ್ಯೂ ರಾಷ್ಟ್ರೀಕೃತ ಹಾಗೂ ಸಹಕಾರ ಬ್ಯಾಂಕ್ಗಳು ಸಾಲ ಪಾವತಿ ಮಾಡದೆ ರೈತರ ಆಸ್ತಿ ಹರಾಜಿಗೆ ಮುಂದಾಗಿರುವುದು ಖಂಡನೀಯ. ಸಂಕಷ್ಟದಲ್ಲಿರುವ ರೈತರಿಗೆ ಸಾಲ ಮರು ಪಾವತಿ ಮಾಡಲು ಕಾಲಾವಕಾಶ ನೀಡಬೇಕು ಎಂದು ಅವರು ಒತ್ತಾಯಿಸಿದರು<strong>.</strong></p>.<p>ಪ್ರಮುಖರಾದ ಭದ್ರೇಶ್ ಬಾಳಗೋಡು, ಮೇಘರಾಜ ಪಡವಗೋಡು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>