ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

VIDEO: ಶಿವಮೊಗ್ಗದಲ್ಲಿ ರೈತರ ಮಹಾ ಪಂಚಾಯತ್

Last Updated 20 ಮಾರ್ಚ್ 2021, 15:54 IST
ಅಕ್ಷರ ಗಾತ್ರ

ಶಿವಮೊಗ್ಗ: ಇಲ್ಲಿನ ಸೈನ್ಸ್ ಮೈದಾನದಲ್ಲಿ ರೈತರ ಮಹಾ ಪಂಚಾಯತ್‌ ಆರಂಭವಾಗಿದೆ. ರೈತರ ಗೀತೆಗೆ ರೈತರೆಲ್ಲ ಹಸಿರು ಶಾಲನ್ನು ಬೀಸುತ್ತಾ ಒಗ್ಗಟ್ಟು ಪ್ರದರ್ಶಿಸಿದರು. ಬಿಸಿಲಿನ ಬೇಗೆಯಲ್ಲಿ ಬರುವ ರೈತರಿಗೆ ದಾಹ ತಣಿಸಲು ನೀರು, ಮಜ್ಜಿಗೆ, ಕಲ್ಲಂಗಡಿ, ನೆರಳಿನ ವ್ಯವಸ್ಥೆ ಮಾಡಲಾಗಿದೆ. ಏಕಕಾಲಕ್ಕೆ 25 ಸಾವಿರ ಜನರು ಕುಳಿತುಕೊಳ್ಳಲು ಅವಕಾಶ ಒದಗಿಸಲಾಗಿದೆ. ಸಂಯುಕ್ತ ಕಿಸಾನ್ ಮೊರ್ಚಾದ ನಾಯಕರಾದ ದರ್ಶನ್‌ ಪಾಲ್, ರಾಕೇಶ್ ಟಿಕಾಯತ್‌, ಯದುವೀರ್‌ ಸಿಂಗ್, ರಾಜ್ಯ ಸಂಘದ ಮುಖಂಡರಾದ ಚುಕ್ಕಿ ನಂಜುಂಡಸ್ವಾಮಿ ಮತ್ತಿತರರು ಭಾಗವಹಿಸುತ್ತಿದ್ದಾರೆ. ಬೆಂಗಳೂರಿನ ಮೌರ್ಯ ವೃತ್ತದಿಂದ ಬೆಳಿಗ್ಗೆ 7ಕ್ಕೆ ಹೊರಟು ತುಮಕೂರು, ತಿಪಟೂರು, ಅರಸೀಕೆರೆ, ಭದ್ರಾವತಿ ಮಾರ್ಗವಾಗಿ ಭಾಗವಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT