<p><strong>ಶಿವಮೊಗ್ಗ:</strong> ಸಂಯುಕ್ತ ಕಿಸಾನ್ ಮೋರ್ಚಾದ ವತಿಯಿಂದ ದೇಶದಾದ್ಯಂತ ರೈತರು ನಡೆಸುತ್ತಿರುವ ರೈಲ್ ರೋಖೋ ಚಳವಳಿ ಅಂಗವಾಗಿ ಗುರುವಾರ ಶಿವಮೊಗ್ಗ ರೈಲ್ವೆ ನಿಲ್ದಾಣ ಎದುರು ಪೊಲೀಸರ ಬಿಗಿ ಬಂದೋಬಸ್ತ್ ಮಧ್ಯೆ ರೈತರು ಪ್ರತಿಭಟನಾ ಸಭೆ ನಡೆಸಿದರು.</p>.<p>ಗುರುವಾರ ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಪ್ರತಿಭಟನಾನಿರತ ರೈತರನ್ನು ರೈಲು ನಿಲ್ದಾಣದ ಒಳಗೆ ಬರಲು ಬಿಡದೆ ತಡೆ ಹಿಡಿಯಲಾಯಿತು.</p>.<p class="Subhead"><strong>ನಿಲ್ದಾಣಕ್ಕೆ ಪೊಲೀಸ್ ಬಂದೋಬಸ್ತ್:</strong></p>.<p>ರೈಲ್ ರೋಖೋ ಚಳವಳಿಯ ಅಂಗವಾಗಿ ಶಿವಮೊಗ್ಗ ರೈಲ್ವೆ ನಿಲ್ದಾಣ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ರೈಲ್ವೆ ನಿಲ್ದಾಣದ ಮುಖ್ಯದ್ವಾರದಲ್ಲಿ ಬ್ಯಾರಿಕೇಡ್ಗಳನ್ನು ಅಳವಡಿಸಲಾಗಿತ್ತು. ಪ್ರಯಾಣಿಕರನ್ನು ಮಾತ್ರ ಒಳಬಿಡಲಾಗುತ್ತಿತ್ತು. ಪ್ರತಿಭಟನೆ ನಡೆಸಲು ಬಂದ ರೈತರನ್ನು ಪೊಲೀಸರು ಮುಖ್ಯದ್ವಾರದಲ್ಲೇ ತಡೆದರು.</p>.<p class="Subhead">ರೈತರು–ಪೊಲೀಸರ ನಡುವೆ ಮಾತಿ ಚಕಮಕಿ: ನಿಲ್ದಾಣದ ಮುಖ್ಯದ್ವಾರದಲ್ಲಿ ಪೊಲೀಸರು ಮತ್ತು ರೈತರ ನಡುವೆ ಮಾತಿನ ಚಕಮಕಿ ನಡೆಯಿತು. ರೈಲ್ ರೋಖೋಗೆ ಅವಕಾಶ ನೀಡುವಂತೆ ರೈತರು ಪಟ್ಟು ಹಿಡಿದರೆ, ನಿಲ್ದಾಣದ ಒಳಗೆ ಬಿಡಲು ಪೊಲೀಸರು ಒಪ್ಪಲಿಲ್ಲ. ಈ ವೇಳೆ ಬೇಕಾದರೆ ತಮ್ಮನ್ನು ಬಂಧಿಸಿ, ಪ್ರಕರಣ ದಾಖಲಿಸಿ. ಆದರೆ, ರೈಲು ನಿಲ್ದಾಣದ ಒಳಗೆ ಬಿಡಿ ಎಂದು ರೈತರು ಆಗ್ರಹಿಸಿದರು.</p>.<p class="Subhead"><strong>ಆವರಣದಲ್ಲಿ ಪ್ರತಿಭಟನೆಗೆ ಅವಕಾಶ:</strong></p>.<p>ರೈಲ್ ರೋಖೋಗೆ ಅವಕಾಶ ನೀಡುವುದಿಲ್ಲ ಎಂದು ತಿಳಿಸಿದ ಪೊಲೀಸರು, ರೈಲ್ವೆ ನಿಲ್ದಾಣದ ಆವರಣದಲ್ಲಿ ಪ್ರತಿಭಟನಾ ಸಭೆಗೆ ಅವಕಾಶ ನೀಡಿದರು.</p>.<p>ರೈತ ಮುಖಂಡ ಕೆ.ಟಿ.ಗಂಗಾಧರ್, ‘ಕೇಂದ್ರ ಸರ್ಕಾರ ಕಾಯ್ದೆಗಳನ್ನು ಹಿಂಪಡೆಯಬೇಕು. ಇಲ್ಲವಾದರೆ ರೈತರು ಸಂಕಷ್ಟಕ್ಕೀಡಾಗಬೇಕಾಗುತ್ತದೆ’ ಎಂದರು.</p>.<p>ಪ್ರಗತಿಪರ ಸಂಘಟನೆಗಳ ಮುಖಂಡ ಕೆ.ಎಲ್. ಅಶೋಕ್, ಹಾಲೇಶಪ್ಪ, ರೈತ ಸಂಘದ ವೀರೇಶ್, ಶಿವಮೂರ್ತಿ, ಹಿಟ್ಟೂರು ರಾಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಸಂಯುಕ್ತ ಕಿಸಾನ್ ಮೋರ್ಚಾದ ವತಿಯಿಂದ ದೇಶದಾದ್ಯಂತ ರೈತರು ನಡೆಸುತ್ತಿರುವ ರೈಲ್ ರೋಖೋ ಚಳವಳಿ ಅಂಗವಾಗಿ ಗುರುವಾರ ಶಿವಮೊಗ್ಗ ರೈಲ್ವೆ ನಿಲ್ದಾಣ ಎದುರು ಪೊಲೀಸರ ಬಿಗಿ ಬಂದೋಬಸ್ತ್ ಮಧ್ಯೆ ರೈತರು ಪ್ರತಿಭಟನಾ ಸಭೆ ನಡೆಸಿದರು.</p>.<p>ಗುರುವಾರ ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಪ್ರತಿಭಟನಾನಿರತ ರೈತರನ್ನು ರೈಲು ನಿಲ್ದಾಣದ ಒಳಗೆ ಬರಲು ಬಿಡದೆ ತಡೆ ಹಿಡಿಯಲಾಯಿತು.</p>.<p class="Subhead"><strong>ನಿಲ್ದಾಣಕ್ಕೆ ಪೊಲೀಸ್ ಬಂದೋಬಸ್ತ್:</strong></p>.<p>ರೈಲ್ ರೋಖೋ ಚಳವಳಿಯ ಅಂಗವಾಗಿ ಶಿವಮೊಗ್ಗ ರೈಲ್ವೆ ನಿಲ್ದಾಣ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ರೈಲ್ವೆ ನಿಲ್ದಾಣದ ಮುಖ್ಯದ್ವಾರದಲ್ಲಿ ಬ್ಯಾರಿಕೇಡ್ಗಳನ್ನು ಅಳವಡಿಸಲಾಗಿತ್ತು. ಪ್ರಯಾಣಿಕರನ್ನು ಮಾತ್ರ ಒಳಬಿಡಲಾಗುತ್ತಿತ್ತು. ಪ್ರತಿಭಟನೆ ನಡೆಸಲು ಬಂದ ರೈತರನ್ನು ಪೊಲೀಸರು ಮುಖ್ಯದ್ವಾರದಲ್ಲೇ ತಡೆದರು.</p>.<p class="Subhead">ರೈತರು–ಪೊಲೀಸರ ನಡುವೆ ಮಾತಿ ಚಕಮಕಿ: ನಿಲ್ದಾಣದ ಮುಖ್ಯದ್ವಾರದಲ್ಲಿ ಪೊಲೀಸರು ಮತ್ತು ರೈತರ ನಡುವೆ ಮಾತಿನ ಚಕಮಕಿ ನಡೆಯಿತು. ರೈಲ್ ರೋಖೋಗೆ ಅವಕಾಶ ನೀಡುವಂತೆ ರೈತರು ಪಟ್ಟು ಹಿಡಿದರೆ, ನಿಲ್ದಾಣದ ಒಳಗೆ ಬಿಡಲು ಪೊಲೀಸರು ಒಪ್ಪಲಿಲ್ಲ. ಈ ವೇಳೆ ಬೇಕಾದರೆ ತಮ್ಮನ್ನು ಬಂಧಿಸಿ, ಪ್ರಕರಣ ದಾಖಲಿಸಿ. ಆದರೆ, ರೈಲು ನಿಲ್ದಾಣದ ಒಳಗೆ ಬಿಡಿ ಎಂದು ರೈತರು ಆಗ್ರಹಿಸಿದರು.</p>.<p class="Subhead"><strong>ಆವರಣದಲ್ಲಿ ಪ್ರತಿಭಟನೆಗೆ ಅವಕಾಶ:</strong></p>.<p>ರೈಲ್ ರೋಖೋಗೆ ಅವಕಾಶ ನೀಡುವುದಿಲ್ಲ ಎಂದು ತಿಳಿಸಿದ ಪೊಲೀಸರು, ರೈಲ್ವೆ ನಿಲ್ದಾಣದ ಆವರಣದಲ್ಲಿ ಪ್ರತಿಭಟನಾ ಸಭೆಗೆ ಅವಕಾಶ ನೀಡಿದರು.</p>.<p>ರೈತ ಮುಖಂಡ ಕೆ.ಟಿ.ಗಂಗಾಧರ್, ‘ಕೇಂದ್ರ ಸರ್ಕಾರ ಕಾಯ್ದೆಗಳನ್ನು ಹಿಂಪಡೆಯಬೇಕು. ಇಲ್ಲವಾದರೆ ರೈತರು ಸಂಕಷ್ಟಕ್ಕೀಡಾಗಬೇಕಾಗುತ್ತದೆ’ ಎಂದರು.</p>.<p>ಪ್ರಗತಿಪರ ಸಂಘಟನೆಗಳ ಮುಖಂಡ ಕೆ.ಎಲ್. ಅಶೋಕ್, ಹಾಲೇಶಪ್ಪ, ರೈತ ಸಂಘದ ವೀರೇಶ್, ಶಿವಮೂರ್ತಿ, ಹಿಟ್ಟೂರು ರಾಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>