<p><strong>ಶಿವಮೊಗ್ಗ :</strong> ಬಡವರಿಗೆ ನಿವೇಶನ ಕೊಡುವಂತೆ ನಡೆಸುತ್ತಿರುವ ಪ್ರತಿಭಟನೆಯನ್ನು ಗಂಭೀರವಾಗಿ ಪರಿಗಣಿಸದೇ ಹೋದರೇ ನ. 24ರಿಂದ ಜಿಲ್ಲಾಡಳಿತದ ವಿರುದ್ಧ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ಮಾನವ ಹಕ್ಕುಗಳ ಹೋರಾಟ ಸಮಿತಿ ಆಧ್ಯಕ್ಷ ಬಿ.ಎಲ್. ರಾಜು ಹೇಳಿದರು.</p>.<p>ಬಡವರಿಗೆ ನಿವೇಶನ ನೀಡುವಂತೆ ಒತ್ತಾಯಿಸಿ ಡಿಸಿ ಕಚೇರಿ ಮುಂದೆ ನ.18 ರಿಂದ ಧರಣಿ ಸತ್ಯಾಗ್ರಹ ನಡೆಯುತ್ತಿದೆ, ಆದರೆ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಬಗ್ಗೆ ಕೇಳದೆ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>ಭದ್ರಾವತಿ ತಾಲ್ಲೂಕು ಬಿಳಕಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ನವುಲೇ ಬಸಾಪುರ ಗ್ರಾಮದಲ್ಲಿ 5 ಎಕರೆ 35 ಗುಂಟೆ ಗ್ರಾಮಠಾಣಾ ಜಾಗವಿದೆ. ಅಲ್ಲಿ ಅರ್ಹ ಬಡವರಿಗೆ ನಿವೇಶನ ನೀಡುವಂತೆ ಹಲವು ವಷಗಳಿಂದ ಹೋರಾಟ ನಡೆಸುತ್ತಾ ಬಂದಿದ್ದೇವೆ. ಈ ಹೋರಾಟದ ಹಿನ್ನೆಲೆಯಲ್ಲಿ 129 ನಿವೇಶನ ರಚಿಸಿ, 30 ಬಡವರಿಗೆ ನಿವೇಶನ ನೀಡುವುದಕ್ಕೆ ಆಯ್ಕೆ ಮಾಡಲಾಗಿತ್ತು. ಆದರೆ ಬಿಳಿಕಿ ಗ್ರಾಮ ಪಂಚಾಯ್ತಿ ಅಧಿಕಾರಿಗಳು ತಪ್ಪು ದಾಖಲೆಗಳನ್ನು ನೀಡಿದ ಪರಿಣಾಮ ಆಯ್ಕೆ ಪಟ್ಟಿ ವಾಪಸ್ ಆಗಿದೆ. ಇದಕ್ಕೆ ಪಂಚಾಯ್ತಿ ಅಧಿಕಾರಿಗಳೇ ಹೊಣೆಗಾರರು ಎಂದರು.</p>.<p>ಗ್ರಾಮಸ್ಥರಾದ ವರಲಕ್ಷ್ಮಿ, ಶಾರದಮ್ಮ, ಸರೋಜಮ್ಮ, ಲಕ್ಷ್ಮಮ್ಮ, ಬಸವರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ :</strong> ಬಡವರಿಗೆ ನಿವೇಶನ ಕೊಡುವಂತೆ ನಡೆಸುತ್ತಿರುವ ಪ್ರತಿಭಟನೆಯನ್ನು ಗಂಭೀರವಾಗಿ ಪರಿಗಣಿಸದೇ ಹೋದರೇ ನ. 24ರಿಂದ ಜಿಲ್ಲಾಡಳಿತದ ವಿರುದ್ಧ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ಮಾನವ ಹಕ್ಕುಗಳ ಹೋರಾಟ ಸಮಿತಿ ಆಧ್ಯಕ್ಷ ಬಿ.ಎಲ್. ರಾಜು ಹೇಳಿದರು.</p>.<p>ಬಡವರಿಗೆ ನಿವೇಶನ ನೀಡುವಂತೆ ಒತ್ತಾಯಿಸಿ ಡಿಸಿ ಕಚೇರಿ ಮುಂದೆ ನ.18 ರಿಂದ ಧರಣಿ ಸತ್ಯಾಗ್ರಹ ನಡೆಯುತ್ತಿದೆ, ಆದರೆ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಬಗ್ಗೆ ಕೇಳದೆ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>ಭದ್ರಾವತಿ ತಾಲ್ಲೂಕು ಬಿಳಕಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ನವುಲೇ ಬಸಾಪುರ ಗ್ರಾಮದಲ್ಲಿ 5 ಎಕರೆ 35 ಗುಂಟೆ ಗ್ರಾಮಠಾಣಾ ಜಾಗವಿದೆ. ಅಲ್ಲಿ ಅರ್ಹ ಬಡವರಿಗೆ ನಿವೇಶನ ನೀಡುವಂತೆ ಹಲವು ವಷಗಳಿಂದ ಹೋರಾಟ ನಡೆಸುತ್ತಾ ಬಂದಿದ್ದೇವೆ. ಈ ಹೋರಾಟದ ಹಿನ್ನೆಲೆಯಲ್ಲಿ 129 ನಿವೇಶನ ರಚಿಸಿ, 30 ಬಡವರಿಗೆ ನಿವೇಶನ ನೀಡುವುದಕ್ಕೆ ಆಯ್ಕೆ ಮಾಡಲಾಗಿತ್ತು. ಆದರೆ ಬಿಳಿಕಿ ಗ್ರಾಮ ಪಂಚಾಯ್ತಿ ಅಧಿಕಾರಿಗಳು ತಪ್ಪು ದಾಖಲೆಗಳನ್ನು ನೀಡಿದ ಪರಿಣಾಮ ಆಯ್ಕೆ ಪಟ್ಟಿ ವಾಪಸ್ ಆಗಿದೆ. ಇದಕ್ಕೆ ಪಂಚಾಯ್ತಿ ಅಧಿಕಾರಿಗಳೇ ಹೊಣೆಗಾರರು ಎಂದರು.</p>.<p>ಗ್ರಾಮಸ್ಥರಾದ ವರಲಕ್ಷ್ಮಿ, ಶಾರದಮ್ಮ, ಸರೋಜಮ್ಮ, ಲಕ್ಷ್ಮಮ್ಮ, ಬಸವರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>