‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಉಪಮುಖ್ಯಮಂತ್ರಿ, ನಾಲ್ಕು ಬಾರಿ ಮುಖ್ಯಮಂತ್ರಿಯಾಗಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಾವಿರಾರು ಕೋಟಿ ಅನುದಾನ ನೀಡಿದ್ದಾರೆ. ಜಿಲ್ಲೆಯ ಸಮಗ್ರ ನೀರಾವರಿ ಯೋಜನೆಗಳು, ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ, ವಿಮಾನ ನಿಲ್ದಾಣ, ರಸ್ತೆಗಳು, ಸೇತುವೆಗಳು, ಹೊಸ ರೈಲು ಮಾರ್ಗಗಳು, ರೈಲು ಸೇತುವೆಗಳ ನಿರ್ಮಾಣ, ಜಿಲ್ಲಾ
ಡಳಿತ ಭವನ, ಬಸ್ನಿಲ್ದಾಣಗಳಿಗೆ ಆಧುನಿಕ ಸ್ಪರ್ಶ ಸೇರಿದಂತೆ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಆಯುಷ್ ವಿಶ್ವವಿದ್ಯಾಲಯಕ್ಕೆ ₹ 10 ಕೋಟಿ ಬಿಡುಗಡೆ ಮಾಡಿದ್ದಾರೆ. ಇಂತಹ ಮುಖ್ಯಮಂತ್ರಿಯನ್ನು ಪಕ್ಷಾತೀತವಾಗಿ ಸನ್ಮಾನಿಸಲು ಜಿಲ್ಲೆಯ ಜನರು ನಿರ್ಧರಿಸಿದ್ದಾರೆ’ ಎಂದು ಬಿ.ಎಸ್.ಯಡಿಯೂರಪ್ಪ ಅಭಿನಂದನಾ ಸಮಿತಿಯ ಮುಖ್ಯಸ್ಥ ಎಸ್.ಎಸ್. ಜ್ಯೋತಿಪ್ರಕಾಶ್ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.