<p><strong>ಸಾಗರ:</strong> ಮಲೆನಾಡಿನ ‘ಮಣ್ಣಿನ ವಾಸನೆ’ ಹಿಡಿದ ಬರಹಗಾರ ಎಂದೇ ಚಿರಪರಿಚಿತರಾಗಿದ್ದ ನಾಡಿನ ಹಿರಿಯ ಸಾಹಿತಿ ನಾ.ಡಿಸೋಜ ಅವರ ಅಂತ್ಯಕ್ರಿಯೆ ಇಲ್ಲಿನ ಸಂತ ಜೋಸೆಫರ ದೇವಾಲಯದ ಪಕ್ಕದಲ್ಲಿರುವ ಸಮಾಧಿ ಸ್ಥಳದಲ್ಲಿ ಮಂಗಳವಾರ ಸಂಜೆ ನಡೆಯಿತು.</p>.<p>ಧರ್ಮಗುರು ಫಾದರ್ ಫೆಲಿಕ್ಸ್ ಜೋಸೆಫ್ ನರೋನಾ, ಸಹಾಯಕ ಧರ್ಮಗುರು ವಿನುತ್, ಕಿರಣ್ ಲೀಮಾ ಕ್ಯಾಥೊಲಿಕ್ ಕ್ರಿಶ್ಚಿಯನ್ ಸಂಪ್ರದಾಯದಂತೆ ವಿಧಿವಿಧಾನ ಪೂರೈಸಿದರು. ಡಿಸೋಜ ಅವರ ಪತ್ನಿ ಫಿಲೊಮಿನಾ, ಪುತ್ರರಾದ ನವೀನ್, ಸಂತೋಷ್, ಪುತ್ರಿ ಶೋಭಾ ಮತ್ತಿತರರು ಹಾಜರಿದ್ದರು.</p>.<p>ಬೆಳಿಗ್ಗೆ ಡಿಸೋಜ ಅವರ ಪಾರ್ಥಿವ ಶರೀರದ ಮೆರವಣಿಗೆ ತೆರೆದ ವಾಹನದಲ್ಲಿ ನಗರದ ಪ್ರಮುಖ ಬೀದಿಗಳಲ್ಲಿ ನಡೆಯಿತು. ರಸ್ತೆಯ ಇಕ್ಕೆಲಗಳಲ್ಲಿ ನಿಂತ ಸಾರ್ವಜನಿಕರು ಮೆರವಣಿಗೆ ವೀಕ್ಷಿಸಿ ಅಂತಿಮ ನಮನ ಸಲ್ಲಿಸಿದರು. ನಂತರ ಗಾಂಧಿ ಮೈದಾನದಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು.</p>.<p>ತಾಲ್ಲೂಕು ಆಡಳಿತದ ವತಿಯಿಂದ ಕುಶಾಲತೋಪು ಹಾರಿಸುವ ಮೂಲಕ ಡಿಸೋಜ ಅವರಿಗೆ ಸರ್ಕಾರಿ ಗೌರವ ಸಲ್ಲಿಸಲಾಯಿತು. ಶಾಸಕ ಗೋಪಾಲಕೃಷ್ಣ ಬೇಳೂರು, ಉಪವಿಭಾಗಾಧಿಕಾರಿ ಯತೀಶ್ ಆರ್., ತಹಶೀಲ್ದಾರ್ ಚಂದ್ರಶೇಖರ್ ನಾಯ್ಕ ಉಪಸ್ಥಿತರಿದ್ದರು.</p>.<p>ಮೂಲೆಗದ್ದೆ ಮಠದ ಅಭಿನವ ಚನ್ನಬಸವ ಸ್ವಾಮೀಜಿ, ರಂಗಕರ್ಮಿಗಳಾದ ಚಿದಂಬರರಾವ್ ಜಂಬೆ, ಕೆ.ವಿ.ಅಕ್ಷರ, ಕೆ.ಜಿ.ಕೃಷ್ಣಮೂರ್ತಿ, ಇಕ್ಬಾಲ್ ಅಹ್ಮದ್, ಕುಪ್ಪಳಿಯ ಕುವೆಂಪು ಪ್ರತಿಷ್ಠಾನದ ಸಮ ಕಾರ್ಯದರ್ಶಿ ಕಡಿದಾಳ್ ಪ್ರಕಾಶ್ ಸೇರಿದಂತೆ ಹಲವು ಗಣ್ಯರು ಡಿಸೋಜ ಅವರ ಅಂತಿಮ ದರ್ಶನ ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ:</strong> ಮಲೆನಾಡಿನ ‘ಮಣ್ಣಿನ ವಾಸನೆ’ ಹಿಡಿದ ಬರಹಗಾರ ಎಂದೇ ಚಿರಪರಿಚಿತರಾಗಿದ್ದ ನಾಡಿನ ಹಿರಿಯ ಸಾಹಿತಿ ನಾ.ಡಿಸೋಜ ಅವರ ಅಂತ್ಯಕ್ರಿಯೆ ಇಲ್ಲಿನ ಸಂತ ಜೋಸೆಫರ ದೇವಾಲಯದ ಪಕ್ಕದಲ್ಲಿರುವ ಸಮಾಧಿ ಸ್ಥಳದಲ್ಲಿ ಮಂಗಳವಾರ ಸಂಜೆ ನಡೆಯಿತು.</p>.<p>ಧರ್ಮಗುರು ಫಾದರ್ ಫೆಲಿಕ್ಸ್ ಜೋಸೆಫ್ ನರೋನಾ, ಸಹಾಯಕ ಧರ್ಮಗುರು ವಿನುತ್, ಕಿರಣ್ ಲೀಮಾ ಕ್ಯಾಥೊಲಿಕ್ ಕ್ರಿಶ್ಚಿಯನ್ ಸಂಪ್ರದಾಯದಂತೆ ವಿಧಿವಿಧಾನ ಪೂರೈಸಿದರು. ಡಿಸೋಜ ಅವರ ಪತ್ನಿ ಫಿಲೊಮಿನಾ, ಪುತ್ರರಾದ ನವೀನ್, ಸಂತೋಷ್, ಪುತ್ರಿ ಶೋಭಾ ಮತ್ತಿತರರು ಹಾಜರಿದ್ದರು.</p>.<p>ಬೆಳಿಗ್ಗೆ ಡಿಸೋಜ ಅವರ ಪಾರ್ಥಿವ ಶರೀರದ ಮೆರವಣಿಗೆ ತೆರೆದ ವಾಹನದಲ್ಲಿ ನಗರದ ಪ್ರಮುಖ ಬೀದಿಗಳಲ್ಲಿ ನಡೆಯಿತು. ರಸ್ತೆಯ ಇಕ್ಕೆಲಗಳಲ್ಲಿ ನಿಂತ ಸಾರ್ವಜನಿಕರು ಮೆರವಣಿಗೆ ವೀಕ್ಷಿಸಿ ಅಂತಿಮ ನಮನ ಸಲ್ಲಿಸಿದರು. ನಂತರ ಗಾಂಧಿ ಮೈದಾನದಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು.</p>.<p>ತಾಲ್ಲೂಕು ಆಡಳಿತದ ವತಿಯಿಂದ ಕುಶಾಲತೋಪು ಹಾರಿಸುವ ಮೂಲಕ ಡಿಸೋಜ ಅವರಿಗೆ ಸರ್ಕಾರಿ ಗೌರವ ಸಲ್ಲಿಸಲಾಯಿತು. ಶಾಸಕ ಗೋಪಾಲಕೃಷ್ಣ ಬೇಳೂರು, ಉಪವಿಭಾಗಾಧಿಕಾರಿ ಯತೀಶ್ ಆರ್., ತಹಶೀಲ್ದಾರ್ ಚಂದ್ರಶೇಖರ್ ನಾಯ್ಕ ಉಪಸ್ಥಿತರಿದ್ದರು.</p>.<p>ಮೂಲೆಗದ್ದೆ ಮಠದ ಅಭಿನವ ಚನ್ನಬಸವ ಸ್ವಾಮೀಜಿ, ರಂಗಕರ್ಮಿಗಳಾದ ಚಿದಂಬರರಾವ್ ಜಂಬೆ, ಕೆ.ವಿ.ಅಕ್ಷರ, ಕೆ.ಜಿ.ಕೃಷ್ಣಮೂರ್ತಿ, ಇಕ್ಬಾಲ್ ಅಹ್ಮದ್, ಕುಪ್ಪಳಿಯ ಕುವೆಂಪು ಪ್ರತಿಷ್ಠಾನದ ಸಮ ಕಾರ್ಯದರ್ಶಿ ಕಡಿದಾಳ್ ಪ್ರಕಾಶ್ ಸೇರಿದಂತೆ ಹಲವು ಗಣ್ಯರು ಡಿಸೋಜ ಅವರ ಅಂತಿಮ ದರ್ಶನ ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>