ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರದ ನಿವಾಸಿ ಇಲಿಯಾಸ್ (41) ದಂಡ ಪಾವತಿಸಬೇಕಾದವರು. ಇಲಿಯಾಸ್ ಅವರ 17 ವರ್ಷದ ಪುತ್ರ ಕಳೆದ ಸೆ.9ರಂದು ಶಿವಮೊಗ್ಗ ನಗರದಲ್ಲಿ ಒಮಿನಿ ವಾಹನ ಚಲಾಯಿಸಿಕೊಂಡು ಬಂದಿದ್ದಾನೆ. ಕರ್ನಾಟಕ ಸಂಘದ ಬಳಿಯ ಬಿ.ಎಚ್.ರಸ್ತೆಯಲ್ಲಿ ಶಿವಮೊಗ್ಗ ಪೂರ್ವ ಸಂಚಾರ ಪೊಲೀಸ್ ಠಾಣೆಯ ಪಿಎಸ್ಐ ಎಚ್.ಎಸ್.ಶಿವಣ್ಣನವರ್ ವಾಹನ ತಪಾಸಣೆ ನಡೆಸಿದ್ದು, ಒಮ್ನಿ ವಾಹನವನ್ನು ಪರವಾನಗಿ ಇಲ್ಲದೇ ಬಾಲಕ ಓಡಿಸಿ ನಿಯಮ ಉಲ್ಲಂಘನೆ ಮಾಡಿರುವುದು ಗೊತ್ತಾಗಿದೆ.