<p><strong>ಶಿವಮೊಗ್ಗ:</strong> ಇಲ್ಲಿನ ಶೇಷಾದ್ರಿಪುರಂನ ಶಂಕರಮಠ ರಸ್ತೆಯಲ್ಲಿರುವ ರಾಹುಲ್ ಹುಂಡೈ ಶೋ ರೂಂನಲ್ಲಿ ಶುಕ್ರವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿ 3 ಕಾರುಗಳು ಸುಟ್ಟು ಭಸ್ಮವಾಗಿವೆ. ಶೋ ರೂಂ ಹೊರಗೆ ನಿಲ್ಲಿಸಿದ್ದ ನಾಲ್ಕು ಕಾರುಗಳಿಗೆ ಭಾಗಶಃ ಹಾನಿಯಾಗಿದೆ. ಶೋರೂಂ ಕಟ್ಟಡ ಬೆಂಕಿಯಿಂದ ಹಾನಿಗೀಡಾಗಿದೆ.</p><p>ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗಿದೆ. ಆದರೆ ಅದನ್ನು ಅಗ್ನಿಶಾಮಕ ದಳದ ಅಧಿಕಾರಿಗಳು ಖಚಿತಪಡಿಸಿಲ್ಲ.</p><p>ಶೋ ರೂಂನಲ್ಲಿ ಕೆಲಸಗಾರರು ಯಾರೂ ಇರಲಿಲ್ಲ. ಭದ್ರತಾ ಕೆಲಸಗಾರರು ಮಾತ್ರ ಇದ್ದರು. ಹೀಗಾಗಿ ಯಾವುದೇ ಜೀವ ಹಾನಿ ಸಂಭವಿಸಿಲ್ಲ. ಆದರೆ ಕಟ್ಟಡ ಸೇರಿದಂತೆ ಕೋಟ್ಯಂತರ ರೂಪಾಯಿ ಮೌಲ್ಯದ ಸ್ವತ್ತುಗಳು ನಾಶವಾಗಿವೆ ಎಂದು ತಿಳಿದುಬಂದಿದೆ.</p><p>ಬೆಂಕಿ ಅವಘಡ ಸಂಭವಿಸುತ್ತಿದ್ದಂತೆಯೇ ಶಿವಮೊಗ್ಗದಿಂದ ಎರಡು, ಭದ್ರಾವತಿ ಹಾಗೂ ತರೀಕೆರೆಯಿಂದ ತಲಾ ಒಂದೊಂದು ಅಗ್ನಿ ಶಮನ ವಾಹನಗಳು ಬಂದು ಬೆಂಕಿ ನಂದಿಸಿದವು.</p><p>"ಬೆಂಕಿ ಸಂಪೂರ್ಣ ತಹಬದಿಗೆ ಬಂದಿದೆ. ಶೋ ರೂಂನ ಒಳ ಭಾಗದಲ್ಲಿ ಕೆಲವು ನಿರುಪಯುಕ್ತ ವಸ್ತುಗಳು, ಟೈರ್ ಗಳನ್ನು ಹಾಕಲಾಗಿದ್ದು, ಅಲ್ಲಿ ಮಾತ್ರ ಬೆಂಕಿ ಇದ್ದು, ಅದನ್ನು ಶೀಘ್ರ ನಂದಿಸಲಾಗುವುದು' ಎಂದು ಅಗ್ನಿಶಾಮಕ ಇಲಾಖೆ ಜಿಲ್ಲಾ ಅಧಿಕಾರಿ ಜಿ.ಮಹಾಲಿಂಗಪ್ಪ 'ಪ್ರಜಾವಾಣಿ'ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಇಲ್ಲಿನ ಶೇಷಾದ್ರಿಪುರಂನ ಶಂಕರಮಠ ರಸ್ತೆಯಲ್ಲಿರುವ ರಾಹುಲ್ ಹುಂಡೈ ಶೋ ರೂಂನಲ್ಲಿ ಶುಕ್ರವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿ 3 ಕಾರುಗಳು ಸುಟ್ಟು ಭಸ್ಮವಾಗಿವೆ. ಶೋ ರೂಂ ಹೊರಗೆ ನಿಲ್ಲಿಸಿದ್ದ ನಾಲ್ಕು ಕಾರುಗಳಿಗೆ ಭಾಗಶಃ ಹಾನಿಯಾಗಿದೆ. ಶೋರೂಂ ಕಟ್ಟಡ ಬೆಂಕಿಯಿಂದ ಹಾನಿಗೀಡಾಗಿದೆ.</p><p>ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗಿದೆ. ಆದರೆ ಅದನ್ನು ಅಗ್ನಿಶಾಮಕ ದಳದ ಅಧಿಕಾರಿಗಳು ಖಚಿತಪಡಿಸಿಲ್ಲ.</p><p>ಶೋ ರೂಂನಲ್ಲಿ ಕೆಲಸಗಾರರು ಯಾರೂ ಇರಲಿಲ್ಲ. ಭದ್ರತಾ ಕೆಲಸಗಾರರು ಮಾತ್ರ ಇದ್ದರು. ಹೀಗಾಗಿ ಯಾವುದೇ ಜೀವ ಹಾನಿ ಸಂಭವಿಸಿಲ್ಲ. ಆದರೆ ಕಟ್ಟಡ ಸೇರಿದಂತೆ ಕೋಟ್ಯಂತರ ರೂಪಾಯಿ ಮೌಲ್ಯದ ಸ್ವತ್ತುಗಳು ನಾಶವಾಗಿವೆ ಎಂದು ತಿಳಿದುಬಂದಿದೆ.</p><p>ಬೆಂಕಿ ಅವಘಡ ಸಂಭವಿಸುತ್ತಿದ್ದಂತೆಯೇ ಶಿವಮೊಗ್ಗದಿಂದ ಎರಡು, ಭದ್ರಾವತಿ ಹಾಗೂ ತರೀಕೆರೆಯಿಂದ ತಲಾ ಒಂದೊಂದು ಅಗ್ನಿ ಶಮನ ವಾಹನಗಳು ಬಂದು ಬೆಂಕಿ ನಂದಿಸಿದವು.</p><p>"ಬೆಂಕಿ ಸಂಪೂರ್ಣ ತಹಬದಿಗೆ ಬಂದಿದೆ. ಶೋ ರೂಂನ ಒಳ ಭಾಗದಲ್ಲಿ ಕೆಲವು ನಿರುಪಯುಕ್ತ ವಸ್ತುಗಳು, ಟೈರ್ ಗಳನ್ನು ಹಾಕಲಾಗಿದ್ದು, ಅಲ್ಲಿ ಮಾತ್ರ ಬೆಂಕಿ ಇದ್ದು, ಅದನ್ನು ಶೀಘ್ರ ನಂದಿಸಲಾಗುವುದು' ಎಂದು ಅಗ್ನಿಶಾಮಕ ಇಲಾಖೆ ಜಿಲ್ಲಾ ಅಧಿಕಾರಿ ಜಿ.ಮಹಾಲಿಂಗಪ್ಪ 'ಪ್ರಜಾವಾಣಿ'ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>