ಮಂಡಗದ್ದೆ ಸಮೀಪ ಇರುವ ಕೀಗಡಿ ಭಾಗದಲ್ಲಿ ಆಗಾಗ ಆನೆ ಕಾಣಿಸಿಕೊಳ್ಳುತ್ತಿತ್ತು. ರೈತರ ತೋಟ, ಗದ್ದೆಗಳಿಗೆ ಲಗ್ಗೆಯಿಟ್ಟು ಅಪಾರ ಪ್ರಮಾಣದ ಬೆಳೆ ಹಾನಿ ಮಾಡಿದೆ. ಕಾಡಿನ ಭಾಗದ ಅಲ್ಲಲ್ಲಿ ಒಂಟಿ ಮನೆಗಳಲ್ಲಿ ನೆಲೆಸಿರುವ ಜನರಿಗೆ ಕಾಡಾನೆ ಹಾವಳಿ ಭಯ ಹುಟ್ಟುಸಿದೆ. ಹೀಗಾಗಿ ಕಾಡಾನೆಯನ್ನು ಸೆರೆ ಹಿಡಿಯುವಂತೆ ಸ್ಥಳೀಯರು ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಮನವಿ ಮಾಡಿದ್ದರು.