ಹಾಯ್ಹೊಳೆಯಲ್ಲಿರುವ ತಮ್ಮ ಸಂಬಂಧಿಕರ ಮನೆಗೆ ಬಂದಿದ್ದ ಅವರು ಬುಧವಾರ ಕಾರು ತೊಳೆಯಲು ಕೆರೆಗೆ ಹೋಗಿದ್ದರು. ಕಾರು ತೊಳೆದ ನಂತರ ಸ್ನಾನ ಮಾಡಲು ಕೆರೆಗೆ ಇಳಿದಾಗ ಕಾಲು ಜಾರಿ ಬಿದ್ದಿದ್ದಾರೆ. ಕೆರೆ ಆಳವಾಗಿದ್ದರಿಂದ ಮುಳುಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.