ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿದ್ಯಾರ್ಥಿನಿ ಶ್ರೀನಿಧಿ, ಅರಣ್ಯ ಇಲಾಖೆಯ ಅಧಿಕಾರಿಗಳ ಹುದ್ದೆಗಳಿಗೆ ಬಿ.ಎಸ್ಸಿ ಅರಣ್ಯಶಾಸ್ತ್ರವಲ್ಲದೇ ಇತರೆ ವಿಜ್ಞಾನ ವಿಭಾಗದ ಪದವಿ ವಿದ್ಯಾರ್ಥಿಗಳು ಅರ್ಜಿ ಹಾಕಲು ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಅರಣ್ಯ ಶಾಸ್ತ್ರ ಪದವಿ ಪಡೆದವರಿಗೆ ಶೇ 50 ರಷ್ಟು ಮಾತ್ರ ಹುದ್ದೆಗಳ ಮೀಸಲಿಟ್ಟಿದೆ. ಇದು ಸಕಾಗುವುದಿಲ್ಲ. ಈ ಎಲ್ಲಾ ಹುದ್ದೆಗಳನ್ನು ಅರಣ್ಯ ಶಾಸ್ತ್ರ ಪದವೀಧರರಿಗೆ ಕೊಡಬೇಕು ಎಂದು ಆಗ್ರಹಿಸಿದರು.